'ಮಂತ್ರಿಗಳಿಗೆ ಹಿಂದಿ ಗೊತ್ತಿಲ್ಲ': ಮುಖ್ಯಕಾರ್ಯದರ್ಶಿಯನ್ನು ಬದಲಿಸುವಂತೆ ಮಿಜೋರಾಂ ಸಿಎಂ ಮನವಿ

ಗುವಾಹತಿ, ನವೆಂಬರ್ 9: ಮುಖ್ಯ ಕಾರ್ಯದರ್ಶಿಯನ್ನು ಬದಲಾಯಿಸುವಂತೆ ಒತ್ತಾಯಿಸಿ ಮಿಜೋರಾಂ ಮುಖ್ಯಮಂತ್ರಿ ಝೋರಾಮ್‌ತಂಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆಂದು ಪ್ರಿಂಟ್ ವರದಿ ಮಾಡಿದೆ. ರೇಣು ಶರ್ಮಾ ಅವರನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿರುವ ಕೇಂದ್ರ ಸರಕಾರ ತನ್ನ ಆದೇಶವನ್ನು ಮಾರ್ಪಡಿಸಿ, ಅದರ ಬದಲಾಗಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆಸಿ ರಾಮತಂಗ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸುವಂತೆ ಅಮಿತ್ ಶಾ ಅವರಿಗೆ ಝೋರಾಮ್‌ತಂಗ ಪತ್ರ ಬರೆದಿದ್ದಾರೆ. ವಿಜೋರಾಂ ಸಚಿವರಿಗೆ ಹಿಂದಿ ಅರ್ಥವಾಗುವುದಿಲ್ಲ ಮತ್ತು ಅವರಲ್ಲಿ ಕೆಲವರಿಗೆ ಇಂಗ್ಲಿಷ್ ಕೂಡ ಬರುವುದಿಲ್ಲ ಹೀಗಾಗಿ ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನು ಬದಲಾಯಿಸಿ ಎಂದು ಮಿಜೋ ಸಿಎಂ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

"ಗುಜರಾತ್ ಕೇಡರ್‌ನ ನನ್ನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಗೊ ಅವರು ನಿವೃತ್ತರಾದ ನಂತರ, ನನ್ನ ಈಗಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆಸಿ ರಾಮತಂಗ (ಮಣಿಪುರ ಕೇಡರ್) ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಮಾಡಲು ನಾನು ವಿನಂತಿಸಿದೆ. ಆದರೆ, ಗೃಹ ಸಚಿವಾಲಯವು ಶ್ರೀಮತಿ ರೇಣು ಶರ್ಮಾ ಅವರನ್ನು ಹೊಸ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ" ಎಂದು ಅಕ್ಟೋಬರ್ 29 ರ ಪತ್ರದಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

"ಮಿಜೋರಾಂ ಜನರಿಗೆ ದೊಡ್ಡ ಪ್ರಮಾಣದಲ್ಲಿ ಹಿಂದಿ ಅರ್ಥವಾಗುವುದಿಲ್ಲ ಮತ್ತು ನನ್ನ ಕ್ಯಾಬಿನೆಟ್ ಮಂತ್ರಿಗಳಲ್ಲಿ ಯಾರಿಗೂ ಹಿಂದಿ ಅರ್ಥವಾಗುವುದಿಲ್ಲ, ಅವರಲ್ಲಿ ಕೆಲವರಿಗೆ ಇಂಗ್ಲಿಷ್ ಭಾಷೆಯ ಸಮಸ್ಯೆಯೂ ಇದೆ. ಹೀಗಿರುವಾಗ ಮಿಜೋರಾಂ ಭಾಷೆಯ ಜ್ಞಾನವಿಲ್ಲದ ಮುಖ್ಯ ಕಾರ್ಯದರ್ಶಿ ಎಂದಿಗೂ ಪರಿಣಾಮಕಾರಿ ಮತ್ತು ದಕ್ಷ ಮುಖ್ಯ ಕಾರ್ಯದರ್ಶಿಯಾಗುವುದಿಲ್ಲ" ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

Ministers Dont Know Hindi: Mizoram Wants Top State Official Replaced

"ಈ ಕಾರಣದಿಂದಾಗಿ ಮಿಜೋರಾಂ ರಾಜ್ಯ ರಚನೆಯಾದಾಗಿನಿಂದ ಮಿಜೋರಾಂ ಭಾಷೆಯ ಕಾರ್ಯ ಗುಣಮಟ್ಟವನ್ನು ತಿಳಿದಿಲ್ಲದ ಮುಖ್ಯ ಕಾರ್ಯದರ್ಶಿಯನ್ನು ಭಾರತ ಸರ್ಕಾರವು ಎಂದಿಗೂ ಪೋಸ್ಟ್ ಮಾಡಲಿಲ್ಲ. ಅದು ಯುಪಿಎ ಸರ್ಕಾರವಾಗಲಿ ಅಥವಾ ಕೇಂದ್ರದ ಎನ್‌ಡಿಎ ಸರ್ಕಾರವಾಗಲಿ. ಮಿಜೋರಾಂ ರಾಜ್ಯ ರಚನೆಯಾದಾಗಿನಿಂದ ಈ ಪದ್ಧತಿ ಜಾರಿಯಲ್ಲಿದೆ. ಭಾರತದ ಇತರ ರಾಜ್ಯಗಳಲ್ಲಿ ಆಯಾ ರಾಜ್ಯದ ಮೂಲ ಆಡಳಿತ ಭಾಷೆಯೂ ತಿಳಿಯದ ಮುಖ್ಯ ಕಾರ್ಯದರ್ಶಿಯನ್ನು ಯಾವತ್ತೂ ಪೋಸ್ಟ್ ಮಾಡಲಾಗುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ" ಎಂದು ಮುಖ್ಯಮಂತ್ರಿ ಪತ್ರದಲ್ಲಿ ತಿಳಿಸಿದ್ದಾರೆ.

ಮಿಜೋರಾಂ ಮುಖ್ಯಮಂತ್ರಿ ಝೋರಾಮ್‌ತಂಗ ತಮ್ಮ ಪತ್ರದಲ್ಲಿ ತಮ್ಮ ಪತ್ರದಲ್ಲಿ ಅಮಿತ್ ಶಾ ಅವರಿಗೆ "ತಾವು ಮೊದಲಿನಿಂದಲೂ NDA ಯ ನಿಷ್ಠಾವಂತ ಪಾಲುದಾರ" ಎಂದು ನೆನಪಿಸುತ್ತಾರೆ. ಜೊತೆಗೆ ತಮ್ಮ ವಿನಂತಿಯನ್ನು ಪರಿಶೀಲಿಸಲಾಗುವುದು ಎಂದು ಆಶಿಸುತ್ತೇನೆ ಎಂದಿದ್ದಾರೆ.

"ಈಶಾನ್ಯ ರಾಜ್ಯಗಳಲ್ಲಿ ನಾನು ಮೊದಲಿನಿಂದಲೂ ಈ ಸಮಯದವರೆಗೆ ಎನ್‌ಡಿಎಯ ನಿಷ್ಠಾವಂತ ಪಾಲುದಾರನಾಗಿದ್ದೇನೆ. ಆದ್ದರಿಂದ, ಎನ್‌ಡಿಎ ಜೊತೆಗಿನ ಈ ನಿಷ್ಠಾವಂತ ಸ್ನೇಹಕ್ಕಾಗಿ ನಾನು ವಿಶೇಷ ಅನುಗ್ರಹ ಮತ್ತು ಪರಿಗಣನೆಗೆ ಅರ್ಹನಾಗಿದ್ದೇನೆ ಎಂದು ನಾನು ನಂಬುತ್ತೇನೆ. ನನ್ನ ಮನವಿಯನ್ನು ಕಡೆಗಣಿಸಿದರೆ ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಯವರಿಗೂ ನೀಡಲಾದ ಮುಖ್ಯ ಕಾರ್ಯದರ್ಶಿಯ ಪ್ರಸ್ತಾಪವನ್ನು ನನಗೆ ನಿರಾಕರಿಸಿದರೆ, ಕಾಂಗ್ರೆಸ್ ಪಕ್ಷ ಮತ್ತು ಇತರ ಎಲ್ಲಾ ವಿರೋಧ ಪಕ್ಷಗಳು ಎನ್‌ಡಿಎ ಪಾಲುದಾರಿಕೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ನನ್ನನ್ನು ಅಪಹಾಸ್ಯ ಮಾಡುತ್ತವೆ. ಆದ್ದರಿಂದ ಆದೇಶವನ್ನು ಮಾರ್ಪಡಿಸಲು ಮತ್ತು ನನ್ನ ಪ್ರಸ್ತಾವನೆಯನ್ನು ದಯೆಯಿಂದ ಸ್ವೀಕರಿಸಲು ನಾನು ನಿಮ್ಮನ್ನು ಮನಃಪೂರ್ವಕವಾಗಿ ವಿನಂತಿಸುತ್ತೇನೆ, "ಎಂದು ಜೊರಾಮ್‌ತಂಗಾ ಹೇಳಿದರು.

Recommended Video

      ಅಪ್ಪುಅನ್ನಸಂತರ್ಪಣೆಯಲ್ಲಿ ಅಭಿಮಾನಿಗಳಿಗೆ ಊಟ ಬಡಿಸಿದ ಶಿವಣ್ಣ & ಪನೀತ್ ಪತ್ನಿ | Oneindia Kannada

      1988 ರ ಬ್ಯಾಚ್‌ನ AGMUT ಕೇಡರ್ ಐಎಎಸ್ ಅಧಿಕಾರಿಯಾಗಿರುವ ರೇಣು ಶರ್ಮಾ ಅವರನ್ನು ನವೆಂಬರ್ 1 ರಿಂದ ಮಿಜೋರಾಂನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಅಕ್ಟೋಬರ್ 28 ರಂದು ಕೇಂದ್ರವು ನೇಮಿಸಿತು. ಅದೇ ದಿನ, ಮಿಜೋರಾಂ ಸರ್ಕಾರವು ಜೆಸಿ ರಾಮತಂಗ ಅವರನ್ನು ನವೆಂಬರ್ 1 ರಿಂದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಆದೇಶಿಸಿತು, ಹೀಗಾಗಿ ಮಿಜೋರಾಂ ಈಗ ಇಬ್ಬರು ಮುಖ್ಯ ಕಾರ್ಯದರ್ಶಿಗಳನ್ನು ಹೊಂದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+