ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆಗೂ ಸಿಕ್ಕ ಅನುಮತಿ- ಕಾರಣವೇನು?
ಬೆಂಗಳೂರು, ಜನವರಿ 12: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಿ ಕೇಂದ್ರ ರಕ್ಷಣಾ ಇಲಾಖೆ ಆದೇಶ ಹೊರಡಿಸಿದೆ. ಕಳೆದ ವಾರ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಗಣರಾಜ್ಯೋತ್ಸವ ಪರೇಡ್ನಲ್ಲಿ ಅವಕಾಶ ನೀಡಿರಲಿಲ್ಲ. ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿದ್ದವು.
ಗಣರಾಜ್ಯೋತ್ಸವ ಪರೇಡ್ನಲ್ಲಿ ಸಿರಿಧಾನ್ಯಗಳ ವೈವಿಧ್ಯತೆಯನ್ನು ಪ್ರದರ್ಶಿಸುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿತ್ತು. ಸತತ 13 ವರ್ಷಗಳ ಕಾಲ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕೇಂದ್ರದ ಈ ನಿರ್ಧಾರಕ್ಕೇ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಅದರಲ್ಲೂ ಕರ್ನಾಟಕ ಚುನಾವಣೆಗೆ ಇನ್ನೇನು ನಾಲ್ಕೈದು ತಿಂಗಳು ಬಾಕಿ ಇರುವಾಗ ಈ ನಿರ್ಧಾರವು ಬಿಜೆಪಿಗೆ ಹಿನ್ನೆಡೆ ಉಂಟು ಮಾಡುವ ಲಕ್ಷಣಗಳು ಕಂಡುಬಂದಿದ್ದವು. ಈ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಈಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ನಡೆದಿರುವ ಪರೇಡ್ನಲ್ಲಿ ಕರ್ನಾಟಕವು ತನ್ನ ಸ್ತಬ್ಧಚಿತ್ರಕ್ಕಾಗಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ಸೃಜನಶೀಲತೆ ಮತ್ತು ವರ್ಣರಂಜಿತ ಪ್ರಸ್ತುತಿಗಾಗಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ನಡೆದ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವು ಸಾಂಪ್ರದಾಯಿಕ ಕರಕುಶಲ ವಸ್ತುಗಳನ್ನು ಪ್ರದರ್ಶಿಸಿತ್ತು. ಇದು ಎರಡನೇ ಅತ್ಯುತ್ತಮ ಸ್ತಬ್ಧಚಿತ್ರವೆಂದು ಮನ್ನಣೆ ಗಳಿಸಿತ್ತು. ರಾಜ್ಯದ ಶ್ರೀಮಂತ ಜಾನಪದ, ಜೀವವೈವಿಧ್ಯ, ಕರಕುಶಲ ಮತ್ತು ಸಾಂಸ್ಕೃತಿಕ ಪರಂಪರೆಯ ಸುತ್ತ ಕರ್ನಾಟಕದ ಸ್ತಬ್ಧಚಿತ್ರಗಳು ಹೆಚ್ಚಾಗಿ ಕೇಂದ್ರೀಕೃತವಾಗಿವೆ.

ಕಳೆದು ವರ್ಷವೂ ಸ್ತಬ್ಧಚಿತ್ರದ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ತೆಲಂಗಾಣ ಹಾಗೂ ಕೇರಳದ ಸ್ತಬ್ಧಚಿತ್ರಗಳನ್ನು ನಿರಾಕರಿಸಿದ್ದ ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.
'ಸರದಿಯ ಪ್ರಕಾರ ಪ್ರತ್ಯೇಕ ರಾಜ್ಯದ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡುವುದಕ್ಕಿಂತ ಭಿನ್ನವಾಗಿ ಈ ಬಾರಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದಲ್ಲಿ ವಲಯಗಳೆಂದು ವಿಂಘಡಿಸಲಾಗಿದೆ. ಪ್ರತಿ ವಲಯದಿಂದ 2ರಿಂದ 3 ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ' ಎಂದು ಕ್ರೇಂದ್ರ ರಕ್ಷಣಾ ಸಚಿವಾಲಯದ ಮೂಲವೊಂದು ತಿಳಿಸಿದೆ.
ಸ್ತಬ್ಧಚಿತ್ರ ಆಯ್ಕೆ ಪ್ರಕ್ರಿಯೆಯು ಬಹಳ ಸಮಯ ತೆಗೆದುಕೊಳ್ಳುತ್ತದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಉತ್ತಮ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲು ವಿವಿಧ ಕ್ಷೇತ್ರಗಳಿಂದ ಬಂದ ತಜ್ಞರ ಸಮಿತಿಯನ್ನು ರಚಿಸಲಾಗುತ್ತದೆ.

ಈ ಬಾರಿ ದೇಶದಲ್ಲಿ ಆರು ವಲಯಗಳನ್ನು ರಚಿಸಲಾಗಿದೆ. 4 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಿರುವ ದಕ್ಷಿಣ ವಲಯದಲ್ಲಿ ಕರ್ನಾಟಕವನ್ನು ಸೇರಿಸಲಾಗಿತ್ತು.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು









Click it and Unblock the Notifications