ಶಿರಡಿ ಸಾಯಿಬಾಬಾನ ಸನ್ನಿಧಾನದಲ್ಲಿ ನಡೆಯಿತಂತೆ ಪವಾಡ!
ಮುಂಬೈ ಡಿ 10 : ಆಂಜನೇಯನ ಕಣ್ಣಲ್ಲಿ ನೀರು ಬರುವುದು, ಗಣೇಶ ಹಾಲು ಹೀರುವುದು..ಹೀಗೆ ಹಲವಾರು ಪವಾಡದ ಸುದ್ದಿಯನ್ನು ಓದುತ್ತಿರುತ್ತೇವೆ. ಈ ಸಾಲಿಗೆ ಇನ್ನೊಂದು ಸೇರ್ಪಡೆಯಾಗಿದೆ. ಈ ಪವಾಡದ ಸುದ್ದಿ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ನಡೆದಿದ್ದು.
ವಿಶ್ವಾದ್ಯಂತ ಕೋಟ್ಯಾಂತರ ಭಕ್ತಾದಿಗಳನ್ನು ಹೊಂದಿರುವ ಶಿರಡಿ ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಈ ಪವಾಡ ನಡೆದಿದೆ.
ದೇವಾಲಯದ ಭೋಜನಶಾಲೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಸಾಯಿಬಾಬಾ ಮೂರ್ತಿಯ ಬಲಗೈ ಬೆರಳಿನಿಂದ ನೀರು ಚಿಮ್ಮುತ್ತಿತ್ತೆಂದು ಸುದ್ದಿಯಾಗಿದೆ. (ತಿರುಪತಿ ಶ್ರೀನಿವಾಸ ಮೂರ್ತಿಯ ವಿಸ್ಮಯ)

ಮಂಗಳವಾರ (ಡಿ 8) ಎಂದಿನಂತೆ ಕೆಲಸ ನಿರ್ವಹಿಸಲು ಭೋಜನಶಾಲೆಗೆ ಹೋಗಿದ್ದ ದೇವಾಲಯದ ಅಡುಗೆ ಭಟ್ಟರಿಗೆ ಈ ಪವಾಡದ ಅನುಭವವಾಗಿದೆ.
ಸುಮಾರು ಮೂವತ್ತು ನಿಮಿಷಗಳ ಕಾಲ ಬಾಬಾನ ಮೂರ್ತಿಯಿಂದ ನೀರು ಚಿಮ್ಮುತ್ತಿರುವುದಕ್ಕೆ ಅಡುಗೆಕೋಣೆಯ ಸಿಬ್ಬಂದಿಗಳು ಸಾಕ್ಷಿಯಾಗಿದ್ದಾರೆಂದು ಶಿರಡಿ ದೇವಾಲಯದ ಅಧಿಕಾರಿಗಳು ಹೇಳಿದ್ದಾರೆ.
ಶಿರಡಿ ದೇವಾಲಯದಲ್ಲಿ ನಡೆದಿದ ಎನ್ನಲಾದ ಈ ಪವಾಡದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯಕ್ಕೆ ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆಯಂತೆ. (ಶಿರಡಿ ಸಾಯಿಬಾಬಾ ಕಣ್ಣು ತೆರೆದಿದ್ದು ಸುಳ್ಳೇಸುಳ್ಳು)
ಈ ವಿಡಿಯೋಗಳನ್ನ ನೋಡಿದ ಜನರು ತಂಡೋಪತಂಡವಾಗಿ ಶಿರಡಿಗೆ ಬಂದು ಮೂರ್ತಿಯಿಂದ ಮತ್ತೆ ನೀರು ಚಿಮ್ಮುವ ಪವಾಡ ಕಾಣಸಿಗುತ್ತದೋ ಎಂದು ಕಾತುರದಿಂದ ಕಾಯುತ್ತಿದ್ದಾರೆಂದು ಜೀನ್ಯೂಸ್ ವರದಿ ಮಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications