ನಾಪತ್ತೆಯಾಗಿರುವ ಸಿಆರ್ಪಿಎಫ್ ಯೋಧ ನಕ್ಸಲರ ವಶದಲ್ಲಿ
ಬಿಜಾಪುರ, ಏಪ್ರಿಲ್ 6: ಛತ್ತೀಸಗಡದ ಬಿಜಾಪುರದಲ್ಲಿ ಶನಿವಾರ ಸಂಭವಿಸಿದ ದಾಳಿಯ ಸಂದರ್ಭದಿಂದ ಕಣ್ಮರೆಯಾಗಿರುವ ಸಿಆರ್ಪಿಎಫ್ ಯೋಧ, ಮಾವೊವಾದಿಗಳ ಒತ್ತೆಯಾಳಾಗಿದ್ದಾರೆ ಎಂಬುದು ಖಚಿತವಾಗಿದೆ.
ನಾಪತ್ತೆಯಾಗಿರುವ ಜಮ್ಮು ಮತ್ತು ಕಾಶ್ಮೀರದ ನಿವಾಸಿ ರಾಕೇಶ್ವರ್ ಸಿಂಗ್ ಮನ್ಹಾಸ್ ಜೀವಂತವಾಗಿದ್ದಾರೆ. ಆದರೆ ಮಾವೊವಾದಿಗಳ ವಶದಲ್ಲಿದ್ದಾರೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ. ಮನ್ಹಾಸ್ ಅವರು ಜೀವಂತವಾಗಿದ್ದು, ಅವರಿಗೆ ಯಾವುದೇ ಹಾನಿ ಮಾಡುವುದಿಲ್ಲ. ಅವರನ್ನು ಮುಂದೆ ಬಿಡುಗಡೆ ಮಾಡಲಾಗುವುದು ಎಂದು ಮಾವೊವಾದಿಗಳ ನಾಯಕತ್ವ ಸಂದೇಶ ರವಾನಿಸಿದೆ.
'ಇದುವರೆಗೂ ಪತ್ತೆ ಮಾಡಲಾಗದ ಒಬ್ಬ ಸಿಬ್ಬಂದಿ ಮಾವೊವಾದಿಗಳ ವಶದಲ್ಲಿದ್ದಾರೆ. ಕೆಲ ಸಮಯದ ಹಿಂದೆ ನಮಗೆ ಸಂದೇಶ ಬಂದಿದ್ದು, ಅವರನ್ನು ಸುರಕ್ಷಿತವಾಗಿ ಇರಿಸುವ ಬಗ್ಗೆ ಭರವಸೆ ನೀಡಲಾಗಿದೆ. ಅವರು ಸುರಕ್ಷಿತವಾಗಿ ಬಿಡುಗಡೆಯಾಗುವ ಮತ್ತು ಮರಳಿ ಬರುವಂತೆ ಪಡೆಗಳು ನೋಡಿಕೊಳ್ಳಲಿವೆ' ಎಂದು ಮೂಲಗಳು ಹೇಳಿವೆ.

ಮಾವೊವಾದಿಗಳ ಜತೆ ಮಾತುಕತೆ ನಡೆಯುತ್ತಿದೆ. ಇದರ ಬಗ್ಗೆ ಹೆಚ್ಚಿನ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ. ಮನ್ಹಾಸ್ ಅವರ ಬಿಡುಗಡೆಗೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿವೆ.
ಕೋಬ್ರಾ ಕಮಾಂಡೋ ಮನ್ಹಾಸ್ ಬಿಡುಗಡೆಗಾಗಿ ಅವರ ಕುಟುಂಬ ಮಾವೊವಾದಿಗಳಿಗೆ ಹೃದಯಸ್ಪರ್ಶಿ ಮನವಿ ಮಾಡಿದೆ. 'ದಯವಿಟ್ಟು ನನ್ನ ಅಪ್ಪನನ್ನು ಬಿಟ್ಟುಬಿಡಿ' ಎಂದು ಮನ್ಹಾಸ್ ಅವರ ಐದು ವರ್ಷದ ಮಗಳು ಶ್ರಾಗ್ವಿ ಕಣ್ಣೀರಿಡುತ್ತಾ ನಕ್ಸಲರಿಗೆ ಮನವಿ ಮಾಡಿರುವುದು ಹೃದಯ ಕಲಕುವಂತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications