ನಾಪತ್ತೆಯಾಗಿರುವ ಸಿಆರ್ಪಿಎಫ್ ಯೋಧ ನಕ್ಸಲರ ವಶದಲ್ಲಿ
ಬಿಜಾಪುರ, ಏಪ್ರಿಲ್ 6: ಛತ್ತೀಸಗಡದ ಬಿಜಾಪುರದಲ್ಲಿ ಶನಿವಾರ ಸಂಭವಿಸಿದ ದಾಳಿಯ ಸಂದರ್ಭದಿಂದ ಕಣ್ಮರೆಯಾಗಿರುವ ಸಿಆರ್ಪಿಎಫ್ ಯೋಧ, ಮಾವೊವಾದಿಗಳ ಒತ್ತೆಯಾಳಾಗಿದ್ದಾರೆ ಎಂಬುದು ಖಚಿತವಾಗಿದೆ.
ನಾಪತ್ತೆಯಾಗಿರುವ ಜಮ್ಮು ಮತ್ತು ಕಾಶ್ಮೀರದ ನಿವಾಸಿ ರಾಕೇಶ್ವರ್ ಸಿಂಗ್ ಮನ್ಹಾಸ್ ಜೀವಂತವಾಗಿದ್ದಾರೆ. ಆದರೆ ಮಾವೊವಾದಿಗಳ ವಶದಲ್ಲಿದ್ದಾರೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ. ಮನ್ಹಾಸ್ ಅವರು ಜೀವಂತವಾಗಿದ್ದು, ಅವರಿಗೆ ಯಾವುದೇ ಹಾನಿ ಮಾಡುವುದಿಲ್ಲ. ಅವರನ್ನು ಮುಂದೆ ಬಿಡುಗಡೆ ಮಾಡಲಾಗುವುದು ಎಂದು ಮಾವೊವಾದಿಗಳ ನಾಯಕತ್ವ ಸಂದೇಶ ರವಾನಿಸಿದೆ.
'ಇದುವರೆಗೂ ಪತ್ತೆ ಮಾಡಲಾಗದ ಒಬ್ಬ ಸಿಬ್ಬಂದಿ ಮಾವೊವಾದಿಗಳ ವಶದಲ್ಲಿದ್ದಾರೆ. ಕೆಲ ಸಮಯದ ಹಿಂದೆ ನಮಗೆ ಸಂದೇಶ ಬಂದಿದ್ದು, ಅವರನ್ನು ಸುರಕ್ಷಿತವಾಗಿ ಇರಿಸುವ ಬಗ್ಗೆ ಭರವಸೆ ನೀಡಲಾಗಿದೆ. ಅವರು ಸುರಕ್ಷಿತವಾಗಿ ಬಿಡುಗಡೆಯಾಗುವ ಮತ್ತು ಮರಳಿ ಬರುವಂತೆ ಪಡೆಗಳು ನೋಡಿಕೊಳ್ಳಲಿವೆ' ಎಂದು ಮೂಲಗಳು ಹೇಳಿವೆ.

ಮಾವೊವಾದಿಗಳ ಜತೆ ಮಾತುಕತೆ ನಡೆಯುತ್ತಿದೆ. ಇದರ ಬಗ್ಗೆ ಹೆಚ್ಚಿನ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ. ಮನ್ಹಾಸ್ ಅವರ ಬಿಡುಗಡೆಗೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿವೆ.
ಕೋಬ್ರಾ ಕಮಾಂಡೋ ಮನ್ಹಾಸ್ ಬಿಡುಗಡೆಗಾಗಿ ಅವರ ಕುಟುಂಬ ಮಾವೊವಾದಿಗಳಿಗೆ ಹೃದಯಸ್ಪರ್ಶಿ ಮನವಿ ಮಾಡಿದೆ. 'ದಯವಿಟ್ಟು ನನ್ನ ಅಪ್ಪನನ್ನು ಬಿಟ್ಟುಬಿಡಿ' ಎಂದು ಮನ್ಹಾಸ್ ಅವರ ಐದು ವರ್ಷದ ಮಗಳು ಶ್ರಾಗ್ವಿ ಕಣ್ಣೀರಿಡುತ್ತಾ ನಕ್ಸಲರಿಗೆ ಮನವಿ ಮಾಡಿರುವುದು ಹೃದಯ ಕಲಕುವಂತಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications