ಅತ್ಯಾಚಾರ ಸಂತ್ರಸ್ಥೆಯ ಚಿತ್ರ ಬಿಡುಗಡೆ ಮಾಡಿದ ಮಿಷನರಿ ವಿರುದ್ಧ ದೂರು
ಕೊಚ್ಚಿ, ಸೆಪ್ಟೆಂಬರ್ 14: ಅತ್ಯಾಚಾರ ಸಂತ್ರಸ್ಥೆಯ ಗುರುತು ಪತ್ತೆ ಆಗುವ ಯಾವುದೇ ಮಾಹಿತಿಯನ್ನೂ ಯಾರೂ ಹೊರಹಾಕಬಾರದು ಎಂದು ಕಾನೂನಿದೆ ಆದರೆ ಕ್ರೈಸ್ತ ಮಿಷನರಿ ಈ ಕಾನೂನು ಉಲ್ಲಂಘಿಸಿದ್ದು, ಕೇರಳ ಪೊಲೀಸರು ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ..
ಕೇರಳದಾದ್ಯಂತ ಬಿರುಗಾಳಿ ಎಬ್ಬಿಸಿರುವ ಕ್ರೈಸ್ತ ಸನ್ಯಾಸಿಸಿ (ನನ್) ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ಕರೆದಿದ್ದ ಜೀಸಸ್ ಮಿಷನರಿಗಳು ಅತ್ಯಾಚಾರ ಸಂತ್ರಸ್ಥೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.
ಬಿಶಪ್ ಫ್ರಾಂಕೋ ವಿರುದ್ಧ ಅತ್ಯಾಚಾರ ಮಾಡಿರುವ ಕ್ರೈಸ್ತ ಸನ್ಯಾಸಿನಿ (ನನ್)ಯು ಆರೋಪಿ ಬಿಶಪ್ ಫ್ರಾಂಕೋ ಮುಲಕ್ಕಲ್ ಅವರ ಪಕ್ಕದಲ್ಲೇ ಕಾರ್ಯಕ್ರಮವೊಂದರಲ್ಲಿ ಕೂತಿರುವ ಚಿತ್ರವನ್ನು ಮಿಷನರಿ ಬಿಡುಗಡೆ ಮಾಡಿದೆ. ಇದು ಮೇ 23 2015ರಲ್ಲಿ ತೆಗೆದ ಚಿತ್ರ ಎಂದು ಮಿಷನರಿ ಹೇಳಿದೆ.
ಅತ್ಯಾಚಾರ ಆರೋಪ ಮಾಡಿರುವ ಕ್ರೈಸ್ತ ಸನ್ಯಾಸಿನಿ ತನ್ನ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ನೀಡಿರುವ ದೂರಿನಲ್ಲಿ ಹೇಳಿರುವ ಮರುದಿನವೇ ಈ ಚಿತ್ರವನ್ನು ತೆಗೆಯಲಾಗಿದೆ. ಈ ಚಿತ್ರದಲ್ಲಿ ಇಬ್ಬರೂ ಆರಾಮವಾಗಿ ಕೂತಿದ್ದಾರೆ. ತನ್ನ ಮೇಲೆ ಒಂದು ದಿನದ ಹಿಂದೆ ಅತ್ಯಾಚಾರ ಮಾಡಿದ ವ್ಯಕ್ತಿಯ ಜೊತೆಗೆ ಯಾವ ಹೆಣ್ಣಾದರೂ ಹೋಗುತ್ತಾಳೆಯೇ, ಆಕೆ ಸುಳ್ಳು ಹೇಳುತ್ತಿದ್ದಾಳೆ ಎಂದು ಮಿಷನರಿ ಹೇಳಿದೆ.

ಸಂತ್ರಸ್ಥೆಯ ಗುರುತು ಬಹಿರಂಗ ಪಡಿಸುವಂತಿಲ್ಲ
ಕಾನೂನಿನ ಪ್ರಕಾರ ಅತ್ಯಾಚಾರ ಸಂತ್ರಸ್ಥೆಯ ಚಿತ್ರಗಳನ್ನು ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧ. ಚಿತ್ರ ಮಾತ್ರವೇ ಅಲ್ಲ ಸಂತ್ರಸ್ಥೆಯ ಗುರುತು ಪತ್ತೆ ಆಗಬಹುದಾದ ಯಾವುದೇ ವಿಷಯವನ್ನು ಬಹಿರಂಗಪಡಿಸುವಂತಿಲ್ಲ. ಹಾಗೆ ಮಾಡಿದಲ್ಲಿ ಸೆರೆವಾಸ ಹಾಗೂ ದಂಡವನ್ನು ತೆರಬೇಕಾಗುತ್ತದೆ.

ಸಾಕ್ಷ್ಯದ ಕಾರಣಕ್ಕೆ ಚಿತ್ರ ಬಹಿರಂಗ
ಆದರೆ ಮಿಷನರಿಯು ಅತ್ಯಾಚಾರ ಸಂತ್ರಸ್ಥೆಯ ಚಿತ್ರವನ್ನು ಬಿಡುಗಡೆ ಮಾಡಿದೆ. ಈ ಚಿತ್ರವನ್ನು ಸಾಕ್ಷ್ಯದ ಕಾರಣಕ್ಕೆ ಮಾತ್ರವೇ ಬಿಡುಗಡೆ ಮಾಡಲಾಗುತ್ತಿದ್ದು, ಈ ಚಿತ್ರ ಸಾರ್ವಜನಿಕವಾದರೆ ನಾವು ಜವಾಬ್ದಾರರಲ್ಲ ಎಂದು ಮಿಷನರಿ ಹೇಳಿದೆ.

2014-2016ರ ನಡುವೆ ಅತ್ಯಾಚಾರ
ಕ್ರೈಸ್ತ ಸನ್ಯಾಸಿನಿಯು, ಬಿಶಪ್ ಫ್ರಾಂಕೋ ಮುಲಕ್ಕಲ್ 2014-2016 ರ ನಡುವೆ ಹಲವು ಬಾರಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಕ್ರೈಸ್ತ ಸನ್ಯಾಸಿನಿ ಪರ ಹಾಗೂ ಬಿಶಪ್ ಪರ ಹಲವರು ಅಖಾಡಕ್ಕೆ ಇಳಿದಿದ್ದು, ಕೇರಳದಾದ್ಯಂತ ಈ ಪ್ರಕರಣ ವಿವಾದ ಸೃಷ್ಠಿಸಿದೆ.

ಆರೋಪಿ ಬಿಶಪ್ ಅನ್ನು ಬಂಧಿಸಿಲ್ಲ
ಬಿಶಪ್ ಫ್ರಾಂಕೋನನ್ನು ಕೂಡಲೇ ಬಂಧಿಸಬೇಕು ಎಂದು ಹಲವು ಕ್ರೈಸ್ತ ಸನ್ಯಾಸಿನಿಯರು ಪ್ರತಿಭಟನೆ, ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇನ್ನು ಕೆಲವು ಬಿಶಪ್ ಪರವಾಗಿ ಪ್ರತಿಭಟನೆ, ಸುದ್ದಿಗೋಷ್ಠಿಗಳನ್ನು ಮಾಡುತ್ತಿದ್ದಾರೆ. ಈ ನಡುವೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಬಿಶಪ್ ಫ್ರಾಂಕೋಗೆ ಸಮನ್ಸ್ ಜಾರಿ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications