ಆಯುಕ್ತ ಅನುರಾಗ್ ತಿವಾರಿ ಸಾವು; ಏನು ಹೇಳ್ತಾರೆ ಪೊಲೀಸರು?
ತಮ್ಮ ಪತ್ನಿಯೊಂದಿಗೆ ಜಗಳವಾಡಿಕೊಂಡಿದ್ದ ತಿವಾರಿ, ಮುನಿಸಿಕೊಂಡು ಅವರ ನಿವಾಸದಿಂದ ಸುಮಾರು 131 ಕಿ.ಮೀ. ದೂರವಿರುವ ಹಜರತ್ ಗಂಜ್ ಪ್ರಾಂತ್ಯದ ಮೀರಾಬಾಯಿ ಅತಿಥಿ ಗೃಹದಲ್ಲಿ ಉಳಿದುಕೊಂಡಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಲಕ್ನೋ, ಮೇ 17: ರಾಜ್ಯ ಸರ್ಕಾರದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ಕುಂದುಕೊರತೆ ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಅವರು ಲಕ್ನೋದಲ್ಲಿ ಸಾವಿಗೀಡಾಗಿದ್ದಾರೆ. ಆ ಸಾವು ಹೃದಯಾಘಾತದಿಂದ ಆಗಿರಬಹುದೆಂದು ಪೊಲೀಸರು ಊಹಿಸಿದ್ದಾರೆ.
ಬುಧವಾರ ಬೆಳಗಿನ ಜಾವ ಅವರ ಶವ ಹಜರತ್ ಗಂಜ್ ಪ್ರಾಂತ್ಯದ ಮೀರಾಬಾಯಿ ಗೆಸ್ಟ್ ಹೌಸ್ ನಿಂದ ಸುಮಾರು 50 ಮೀ. ದೂರದಲ್ಲೇ ಅನುರಾಗ್ ತಿವಾರಿ ಶವ ಪತ್ತೆಯಾಗಿತ್ತು. ದಾರಿ ಹೋಕರು ಇದನ್ನು ಗಮನಿಸಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು.[ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡೆ, ತಿವಾರಿ ಸಾವಿಗೆ ಪ್ರತಾಪ್ ಕಂಬನಿ]

ತಕ್ಷಣ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು, ಶವದ ಪ್ಯಾಂಟ್ ಜೇಬುಗಳನ್ನು ಪರಿಶೀಲಿಸಿದಾಗ, ಮೃತ ವ್ಯಕ್ತಿಯ ಹೆಸರು, ವಿಳಾಸ ಹಾಗೂ ಅವರು ಕರ್ನಾಟಕದಲ್ಲಿ ಆಹಾರ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವುದರ ವಿವರಗಳು ಲಭ್ಯವಾದವು.[ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ ಶವವಾಗಿ ಪತ್ತೆ!]
ಈ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರಿಗೆ ತಿವಾರಿ ಅವರು ಮೀರಾಬಾಯಿ ಗೆಸ್ಟ್ ಹೌಸ್ ನಲ್ಲಿ ಸುಮಾರು ಎರಡು ದಿನಗಳಿಂದ ಉಳಿದಿದ್ದರು ಎಂದು ತಿಳಿಸಿದ್ದಾರೆ. ನಾಲ್ಕು ವಾರಗಳ ರಜೆಯ ಮೇರೆಗೆ ತಮ್ಮ ಹುಟ್ಟೂರಾದ ಲಕ್ನೋಗೆ ಆಗಮಿಸಿದ್ದರು. ಲಕ್ನೋದಲ್ಲಿನ ಬಹಾರಿಚ್ ನಲ್ಲಿರುವ ತಮ್ಮ ನಿವಾಸದಲ್ಲಿ ಉಳಿದುಕೊಂಡಿದ್ದರು.
ಆದರೆ, ಅವರ ಪತ್ನಿಯೊಂದಿಗೆ ಕೆಲ ಕಾರಣಗಳಿಂದಾಗಿ ಜಗಳವಾಡಿಕೊಂಡ ತಿವಾರಿ, ಮುನಿಸಿಕೊಂಡು ಬಂದು ಅಲ್ಲಿಂದ ಸುಮಾರು 131 ಕಿ.ಮೀ. ದೂರವಿರುವ ಹಜರತ್ ಗಂಜ್ ಪ್ರಾಂತ್ಯದ ಮೀರಾಬಾಯಿ ಅತಿಥಿ ಗೃಹದಲ್ಲಿ ಉಳಿದುಕೊಂಡಿದ್ದರು.
ಈ ಗೆಸ್ಟ್ ಹೌಸ್ ನಿಂದ ಬುಧವಾರ ಮುಂಜಾನೆ ವಾಕಿಂಗ್ ಗೆ ಎಂದು ಹೊರಬಂದ ತಿವಾರಿಯವರಿಗೆ ಹೃದಯಾಘಾತವಾಗಿದೆ. ಹಾಗಾಗಿಯೇ ಅವರು, ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ.
ಆದರೆ, ಕೆಲವು ಮಾಧ್ಯಮಗಳಲ್ಲಿ ತಿವಾರಿ ಗಲ್ಲದ ಮೇಲೆ ಗಾಯದ ಗುರುತು ಇದ್ದು, ಇದು ಕೆಲವು ಅನುಮಾನಗಳಿಗೆ ದಾಳಿ ಮಾಡಿಕೊಟ್ಟಿದೆ ಎಂದು ಹೇಳಿವೆ.
ಖಾದರ್ ಬೇಸರ: ತಮ್ಮ ಇಲಾಖೆಯಲ್ಲೇ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಯುವ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿಗೆ ಆಹಾರ ಸಚಿವ ಯು.ಟಿ. ಖಾದರ್, ಖೇದ ವ್ಯಕ್ತಪಡಿಸಿದ್ದಾರೆ. ತಿವಾರಿ ನಿಧನದ ಹಿನ್ನೆಲೆಯಲ್ಲಿ ತಮ್ಮನ್ನು ಸಂಪರ್ಕಿಸಿದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ''ಕೆಲ ವಾರಗಳ ಹಿಂದೆ ಉನ್ನತ ತರಬೇತಿಗಾಗಿ ತಿವಾರಿ ಉತ್ತರ ಪ್ರದೇಶಕ್ಕೆ ತೆರಳಿದ್ದರು. ತರಬೇತಿ ಮುಗಿದ ಮೇಲೆ ತಮ್ಮ ರಜೆಯನ್ನು ವಿಸ್ತರಿಸಿಕೊಂಡಿದ್ದರು. ಆದರೆ, ಅವರ ಸಾವಿನ ಸುದ್ದಿ ಕೇಳಬೇಕಾಗುತ್ತದೆ ಎಂದು ನಾನು ಎಣಿಸಿರಲಿಲ್ಲ. ಅವರ ನಿಧನ ತುಂಬಾ ಬೇಸರ ತರಿಸಿದೆ'' ಎಂದು ಹೇಳಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?











Click it and Unblock the Notifications