ಕೊವಿಡ್ ರೋಗಿಗಳಿಗೆ ಪ್ರೀತಿಪಾತ್ರರೊಂದಿಗೆ ಮಾತನಾಡಲು 'ಮಿತ್ರ ರೋಬೋಟ್' ಸಹಾಯ
ನವದೆಹಲಿ, ಸೆಪ್ಟೆಂಬರ್ 16: ಕೊವಿಡ್ 19 ರೋಗಿಗಳು ತಮ್ಮ ಪ್ರೀತಿಪಾತ್ರರೊಂದಿಗೆ ಮಾತನಾಡಲು ಮಿತ್ರ ರೋಬೋಟ್ ಸಹಾಯ ಮಾಡಲಿದೆ.
ಆಸ್ಪತ್ರೆಗಳಲ್ಲಿ ಕಸ್ಟಮರ್ ಸರ್ವೀಸ್ ರೋಬೋಟ್ಗಳು ಎಲ್ಲಾ ವಾರ್ಡ್ನ್ನು ಸುತ್ತಲಿದೆ. ಜೊತೆಗೆ ಕೊರೊನಾ ಸೋಂಕಿತರನ್ನು ಭೇಟಿಯಾಗಿ ಕೊರೊನಾ ಸೋಂಕಿತರಿಗೆ ಅವರ ಪ್ರೀತಿ ಪಾತ್ರರೊಂದಿಗೆ ಮಾತನಾಡಲು ನೆರವಾಗುತ್ತಿದೆ.
ಮಿತ್ರ ಎಂದರೆ ಸ್ನೇಹಿತ ಎಂದರ್ಥ. ಮಿತ್ರ ರೋಬೋಟ್ ಎದೆಯ ಭಾಗದಲ್ಲಿ ಟ್ಯಾಬ್ಲೆಟ್ ಇರಿಸಲಾಗಿದ್ದು, ಅದರ ಮೂಲಕ ತಮ್ಮ ಪ್ರೀತಿಪಾತ್ರರನ್ನು ನೋಡಬಹುದಾಗಿದೆ. ಆಸ್ಪತ್ರೆ ಸಿಬ್ಬಂದಿ ಎಲ್ಲಾ ಸಮಯದಲ್ಲೂ ಎಲ್ಲಾ ವಾರ್ಡ್ನಲ್ಲಿ ಇರಲು ಸಾಧ್ಯವಾಗದ ಕಾರಣ ಈ ವ್ಯವಸ್ಥೆ ಮಾಡಲಾಗಿದೆ.

ಕೊರೊನಾ ಸೋಂಕಿತರು ಗುಣಮುಖರಾಗಲು ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತಾರೆ. ಆ ಸಂದರ್ಭದಲ್ಲಿ ರೋಗಿಗಳು ತಮ್ಮವರ ಜೊತೆ ಮಾತನಾಡಬೇಕು ಎಂದು ಅಪೇಕ್ಷಿಸುತ್ತಾರೆ, ಎಲ್ಲರ ಬಳಿಯೂ ಆಂಡ್ರಾಯ್ಡ್ ಮೊಬೈಲ್ ಇರುವುದಿಲ್ಲ.
ಹೀಗಿರುವಾಗ ಈ ಮಿತ್ರ ರೋಬೋಟ್ ಅಂತಹ ರೋಗಿಗಳ ಸಹಾಯಕ್ಕೆ ಬರಲಿದೆ ಎಂದು ಯಥಾರ್ಥ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯ ಅರುಣ್ ಲಖನ್ಪಾಲ್ ತಿಳಿಸಿದ್ದಾರೆ.
ಈ ರೋಬೋಟ್ನ್ನು ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ಕಂಪನಿಯೊಂದು ಅಭಿವೃದ್ಧಿಪಡಿಸಿದೆ. ಅದಕ್ಕೆ 1 ಮಿಲಿಯನ್ ಹಣವನ್ನು ವೆಚ್ಚ ಮಾಡಲಾಗಿದೆ. ಬುಧವಾರ ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 50 ಲಕ್ಷ ದಾಟಿದೆ.
ಎಲ್ಲರ ಬಳಿಯೂ ವೈದ್ಯರು ಕುಳಿತು ಸಮಾಲೋಚನೆ ನಡೆಸಲು ಸಾಧ್ಯಯವಾಗುತ್ತಿಲ್ಲ. ಆ ಜಾಗದಲ್ಲಿ ಈ ರೋಬೋಟ್ ಎಲ್ಲರ ಯೋಗಕ್ಷೇಮ ನೋಡಿಕೊಳ್ಳಲಿದೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications