Mizoram assembly election 2023: ಬಿಜೆಪಿ ಸೇರಲು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈಲೋ- ಆಡಳಿತ ಪಕ್ಷಕ್ಕೆ ಆಘಾತ
ಐಜ್ವಾಲ್, ಅಕ್ಟೋಬರ್ 12: ನವೆಂಬರ್ನಲ್ಲಿ ಮಿಜೋರಾಂ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಮಿಜೋರಾಂ ವಿಧಾನಸಭಾ ಸ್ಪೀಕರ್ ಲಾಲ್ರಿನ್ಲಿಯಾನಾ ಸೈಲೋ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಸೈಲು ಅವರು ಹಿರಿಯ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್) ನಾಯಕರಾಗಿದ್ದಾರೆ. ಈಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಳ್ಳುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಆಡಳಿತ ಪಕ್ಷಕ್ಕೆ ತೀವ್ರ ಆಘಾತವಾಗಿದೆ.
ಸೈಲೋ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಾಗ ಬಿಜೆಪಿ ರಾಜ್ಯ ಘಟಕದ ನಾಯಕರು ಜೊತೆಗಿದ್ದರು. ಡೆಪ್ಯೂಟಿ ಸ್ಪೀಕರ್ ಎಚ್. ಬಿಯಾಕ್ಜೌವಾ ಅವರಿಗೆ ಸೈಲೋ ಪತ್ರವನ್ನು ಸಲ್ಲಿಸಿದ್ದಾರೆ.

40 ಸದಸ್ಯರ ಬಲ ಹೊಂದಿರುವ ರಾಜ್ಯ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ. ಈ ತಿಂಗಳು ರಾಜೀನಾಮೆ ನೀಡಿದ ಎಂಟನೇ ಶಾಸಕರಾಗಿದ್ದಾರೆ ಇವರಾಗಿದ್ದಾರೆ ಎಂದು ತಿಳಿದುಬಂದಿದೆ.
ಸೈಲೋ ಅವರು ಕೇಂದ್ರ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಸೈಲೋ ಮಮಿತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ರಾಜೀನಾಮೆ ಸಲ್ಲಿಸಿದ ನಂತರ ಐಜ್ವಾಲ್ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸೈಲೋ, ರಾಜ್ಯವನ್ನು ಆರ್ಥಿಕ ಬಿಕ್ಕಟ್ಟಿನಿಂದ ಹೊರತರಲು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದ್ದಾರೆ.
'ಜೋರಾಮ್ ವೈದ್ಯಕೀಯ ಕಾಲೇಜನ್ನು ಕೇಂದ್ರ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು. ಇದೊಂದು ಷರತ್ತನ್ನು ನಾನು ಬಿಜೆಪಿ ಮುಂದೆ ಇಟ್ಟಿದ್ದೇನೆ. ಕೇಂದ್ರ ಬಿಜೆಪಿ ನಾಯಕರಲ್ಲಿ ಈ ಕುರಿತು ಮನವಿ ಮಾಡಿದ್ದೇನೆ. ಅವರು ಭರವಸೆ ನೀಡಿದ್ದಾರೆ' ಎಂದು ತಿಳಿಸಿದ್ದಾರೆ.
ಮುಂಬರುವ ಚುನಾವಣೆಗಳಿಗೆ 40 ಅಭ್ಯರ್ಥಿಗಳ ಪಟ್ಟಿಯನ್ನು ಅಕ್ಟೋಬರ್ 4 ರಂದು ಘೋಷಿಸಿದೆ. ಲಾಲ್ಮಂಗೈಹಾ ಅವರು ಚಾಲ್ಫಿಲ್ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಇದು ಪ್ರಸ್ತುತ ಸೈಲೋ ಪ್ರತಿನಿಧಿಸುವ ಕ್ಷೇತ್ರವಾಗಿದೆ.
ಎಮ್ಎನ್ಎಫ್ ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಬೇಕೆಂದು ಸೈಲೋ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಮ್ಎನ್ಎಫ್ ಅವರಿಗೆ ಟಿಕೆಟ್ ನಿರಾಕರಿಸಿದೆ ಎಂದು ಹೇಳಲಾಗುತ್ತಿದೆ.
ಎಂಎನ್ಎಫ್ ಬಿಜೆಪಿ ನೇತೃತ್ವದ ಎನ್ಡಿಎ ಭಾಗವಾಗಿದೆ. ಆದರೆ, ರಾಜ್ಯದಲ್ಲಿ ಅದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. ಇದರ ಪರಿಣಾಮವಾಗಿ ಮಿಜೋರಾಂನಲ್ಲಿ ಕೇವಲ ಒಬ್ಬ ಬಿಜೆಪಿ ಶಾಸಕರಿದ್ದಾರೆ. ಪ್ರಸ್ತುತ ವಿಧಾನಸಭೆಯಲ್ಲಿ ಎಂಎನ್ಎಫ್ 26 ಶಾಸಕರನ್ನು ಹೊಂದಿದೆ. ಸೈಲೋ ಅವರ ರಾಜೀನಾಮೆ ಕುರಿತು ಎನ್ಎನ್ಎಫ್ ಇನ್ನೂ ಪ್ರತಿಕ್ರಿಯಿಸಿಲ್ಲ.
ಈ ವರ್ಷದ ಕೊನೆಯಲ್ಲಿ ದೇಶದ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಹಾಗೂ ಮಿಜೋರಾಂಗಳ ಚುನಾವಣೆ ದಿನಾಂಗಗಳನ್ನು ಪ್ರಕಟಿಸಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications