Mizoram assembly election 2023: ಬಿಜೆಪಿ ಸೇರಲು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈಲೋ- ಆಡಳಿತ ಪಕ್ಷಕ್ಕೆ ಆಘಾತ
ಐಜ್ವಾಲ್, ಅಕ್ಟೋಬರ್ 12: ನವೆಂಬರ್ನಲ್ಲಿ ಮಿಜೋರಾಂ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಮಿಜೋರಾಂ ವಿಧಾನಸಭಾ ಸ್ಪೀಕರ್ ಲಾಲ್ರಿನ್ಲಿಯಾನಾ ಸೈಲೋ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಸೈಲು ಅವರು ಹಿರಿಯ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್) ನಾಯಕರಾಗಿದ್ದಾರೆ. ಈಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಳ್ಳುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಆಡಳಿತ ಪಕ್ಷಕ್ಕೆ ತೀವ್ರ ಆಘಾತವಾಗಿದೆ.
ಸೈಲೋ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಾಗ ಬಿಜೆಪಿ ರಾಜ್ಯ ಘಟಕದ ನಾಯಕರು ಜೊತೆಗಿದ್ದರು. ಡೆಪ್ಯೂಟಿ ಸ್ಪೀಕರ್ ಎಚ್. ಬಿಯಾಕ್ಜೌವಾ ಅವರಿಗೆ ಸೈಲೋ ಪತ್ರವನ್ನು ಸಲ್ಲಿಸಿದ್ದಾರೆ.

40 ಸದಸ್ಯರ ಬಲ ಹೊಂದಿರುವ ರಾಜ್ಯ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ. ಈ ತಿಂಗಳು ರಾಜೀನಾಮೆ ನೀಡಿದ ಎಂಟನೇ ಶಾಸಕರಾಗಿದ್ದಾರೆ ಇವರಾಗಿದ್ದಾರೆ ಎಂದು ತಿಳಿದುಬಂದಿದೆ.
ಸೈಲೋ ಅವರು ಕೇಂದ್ರ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಸೈಲೋ ಮಮಿತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ರಾಜೀನಾಮೆ ಸಲ್ಲಿಸಿದ ನಂತರ ಐಜ್ವಾಲ್ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸೈಲೋ, ರಾಜ್ಯವನ್ನು ಆರ್ಥಿಕ ಬಿಕ್ಕಟ್ಟಿನಿಂದ ಹೊರತರಲು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದ್ದಾರೆ.
'ಜೋರಾಮ್ ವೈದ್ಯಕೀಯ ಕಾಲೇಜನ್ನು ಕೇಂದ್ರ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು. ಇದೊಂದು ಷರತ್ತನ್ನು ನಾನು ಬಿಜೆಪಿ ಮುಂದೆ ಇಟ್ಟಿದ್ದೇನೆ. ಕೇಂದ್ರ ಬಿಜೆಪಿ ನಾಯಕರಲ್ಲಿ ಈ ಕುರಿತು ಮನವಿ ಮಾಡಿದ್ದೇನೆ. ಅವರು ಭರವಸೆ ನೀಡಿದ್ದಾರೆ' ಎಂದು ತಿಳಿಸಿದ್ದಾರೆ.
ಮುಂಬರುವ ಚುನಾವಣೆಗಳಿಗೆ 40 ಅಭ್ಯರ್ಥಿಗಳ ಪಟ್ಟಿಯನ್ನು ಅಕ್ಟೋಬರ್ 4 ರಂದು ಘೋಷಿಸಿದೆ. ಲಾಲ್ಮಂಗೈಹಾ ಅವರು ಚಾಲ್ಫಿಲ್ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಇದು ಪ್ರಸ್ತುತ ಸೈಲೋ ಪ್ರತಿನಿಧಿಸುವ ಕ್ಷೇತ್ರವಾಗಿದೆ.
ಎಮ್ಎನ್ಎಫ್ ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಬೇಕೆಂದು ಸೈಲೋ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಮ್ಎನ್ಎಫ್ ಅವರಿಗೆ ಟಿಕೆಟ್ ನಿರಾಕರಿಸಿದೆ ಎಂದು ಹೇಳಲಾಗುತ್ತಿದೆ.
ಎಂಎನ್ಎಫ್ ಬಿಜೆಪಿ ನೇತೃತ್ವದ ಎನ್ಡಿಎ ಭಾಗವಾಗಿದೆ. ಆದರೆ, ರಾಜ್ಯದಲ್ಲಿ ಅದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. ಇದರ ಪರಿಣಾಮವಾಗಿ ಮಿಜೋರಾಂನಲ್ಲಿ ಕೇವಲ ಒಬ್ಬ ಬಿಜೆಪಿ ಶಾಸಕರಿದ್ದಾರೆ. ಪ್ರಸ್ತುತ ವಿಧಾನಸಭೆಯಲ್ಲಿ ಎಂಎನ್ಎಫ್ 26 ಶಾಸಕರನ್ನು ಹೊಂದಿದೆ. ಸೈಲೋ ಅವರ ರಾಜೀನಾಮೆ ಕುರಿತು ಎನ್ಎನ್ಎಫ್ ಇನ್ನೂ ಪ್ರತಿಕ್ರಿಯಿಸಿಲ್ಲ.
ಈ ವರ್ಷದ ಕೊನೆಯಲ್ಲಿ ದೇಶದ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಹಾಗೂ ಮಿಜೋರಾಂಗಳ ಚುನಾವಣೆ ದಿನಾಂಗಗಳನ್ನು ಪ್ರಕಟಿಸಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications