Mizoram Election Results 2023 Live: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಅಧಿಕಾರ ಯಾರಿಗೆ?
Mizoram Election Results 2023 Live: ಬಹುನಿರೀಕ್ಷೆಯ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ನ.30ಕ್ಕೆ ಪೂರ್ಣಗೊಂಡಿದ್ದು, ಭಾನುವಾರ ಡಿ.3 ರಂದು ನಾಲ್ಕು ರಾಜ್ಯಗಳ ಅಧಿಕೃತ ಫಲಿತಾಂಶ ಪ್ರಕಟವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಚಂಡೀಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬಂದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.
ಮಿಜೋರಾಂ ರಾಜ್ಯದ ಮತ ಎಣಿಕೆಯನ್ನು ಇಂದಿಗೆ (ಸೋಮವಾರ, ಡಿ.4) ಮುಂದೂಡಲಾಗಿತ್ತು. ಇಂದು ಈಶಾನ್ಯ ರಾಜ್ಯದ ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಫಲಿತಾಂಶದ ಕ್ಷಣ ಕ್ಷಣದ ಅಪ್ಡೇಟ್ ಮಾಹಿತಿಯನ್ನು ನೀವು 'ಒನ್ ಇಂಡಿಯಾ ಕನ್ನಡ' ನೇರ ಪ್ರಸಾರದಲ್ಲಿ ತಿಳಿಯಬಹುದು.

ಮುಖ್ಯಮಂತ್ರಿ ಅಭ್ಯರ್ಥಿಗೆ ಗೆಲುವು:-
ZPMನ ಮುಖ್ಯಮಂತ್ರಿ ಅಭ್ಯರ್ಥಿ ಲಾಲ್ದುಹೋಮ ಅವರು ಸೆರ್ಚಿಪ್ ಕ್ಷೇತ್ರದಿಂದ ವಿಜೇತರಾಗಿದ್ದಾರೆ. ಅವರು 2,982 ಮತಗಳಿಂದ ಎಂಎನ್ಎಫ್ನ ಜೆಎಂ ವಾಂಚಾಂಗ್ ಅವರನ್ನು ಸೋಲಿಸಿದರು.
ಬಹುಮತ ಪಡೆಯುತ್ತ ಝಡ್ಪಿಎಂ ಪಕ್ಷ ಮುನ್ನಡೆ. 26 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಝಡ್ಪಿಎಂ ಪಕ್ಷ. ಎಂಎನ್ಎಫ್ 11 ಕ್ಷೇತ್ರಗಳಲ್ಲಿ ಮುನ್ನಡೆ. ಬಿಜೆಪಿಗೆ 2 ಕ್ಷೇತ್ರಗಳಲ್ಲಿ ಮುನ್ನಡೆ, ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್
ತೆಲಂಗಾಣ
ತೆಲಂಗಾಣದ 119 ಸ್ಥಾನಗಳ ಪೈಕಿ 64 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ರೇವಂತ್ ರೆಡ್ಡಿ ಮತ್ತು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಮಿಜೋರಾಂನಲ್ಲಿ ಉಪ ಮುಖ್ಯಮಂತ್ರಿ ಸೋಲು:-
ಮಿಜೋರಾಂನಲ್ಲಿ ಇಂದು ಮತ ಎಣಿಕೆ ನಡೆಯುತ್ತಿದೆ. ಚುನಾವಣಾ ಆಯೋಗದ ಪ್ರಕಾರ, ಮಿಜೋರಾಂ ಉಪ ಮುಖ್ಯಮಂತ್ರಿ ಮತ್ತು ಎಂಎನ್ಎಫ್ ಅಭ್ಯರ್ಥಿ ಟವ್ನ್ಲುಯಾ ಅವರು ZPM ಅಭ್ಯರ್ಥಿ ವಿರುದ್ಧ ಟುಯಿಚಾಂಗ್ ಅಸೆಂಬ್ಲಿ ಕ್ಷೇತ್ರದಲ್ಲಿ ಸೋತಿದ್ದಾರೆ.
ಗೆಲುವಿನ ಖಾತೆ ತೆರೆದ ಝಡ್ಪಿಎಂ, 2 ಕ್ಷೇತ್ರಗಳಲ್ಲಿ ಗೆಲುವು, 27 ಕ್ಷೇತ್ರಗಳಲ್ಲಿ ಮುನ್ನಡೆ. ಎಂಎನ್ಎಫ್ 7 ಕ್ಷೇತ್ರಗಳಲ್ಲಿ ಮುನ್ನಡೆ. ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಮುನ್ನಡೆ, ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್.
ಭಾರಿ ಮುನ್ನಡೆ ಪಡೆದುಕೊಂಡ ಝಡ್ಪಿಎಂ, ಬರೋಬ್ಬರಿ 22 ಸ್ಥಾನಗಳಲ್ಲಿ ಮುನ್ನಡೆ. ಎಂಎನ್ಎಫ್ ಪಕ್ಷಕ್ಕೆ 11 ಸ್ಥಾನಗಳಲ್ಲಿ ಮುನ್ನಡೆ, 3 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ಗೆ ಮುನ್ನಡೆ. ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ.
ಮತ್ತೆ ಮೇಲುಗೈ ಸಾಧಿಸಿದ ಝಡ್ಪಿಎಂ, 16 ಕ್ಷೇತ್ರಗಳಲ್ಲಿ ಝಡ್ಪಿಎಂ ಪಕ್ಷಕ್ಕೆ ಮುನ್ನಡೆ. 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಆಡಳಿತಾರೂಢ ಎಂಎನ್ಎಫ್ ಪಕ್ಷ. ಕಾಂಗ್ರೆಸ್ಗೆ 9 ಸ್ಥಾನಗಳಲ್ಲಿ ಮುನ್ನಡೆ. ಬಿಜೆಪಿ 2 ಮತ್ತು ಪಕ್ಷೇತರ ತಲಾ 2 ಕ್ಷೇತ್ರಗಳಲ್ಲಿ ಮುನ್ನಡೆ.
ಮಿಜೋರಾಂನಲ್ಲಿ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಚಿತ್ರಣ. ಎಂಎನ್ಎಫ್ ಮತ್ತು ಝಡ್ಪಿಎಂ ಪಕ್ಷಗಳಿಗೆ ತಲಾ 14 ಕ್ಷೇತ್ರಗಳಲ್ಲಿ ಮುನ್ನಡೆ. 9 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡ ಕಾಂಗ್ರೆಸ್. ಬಿಜೆಪಿಗೆ 2 ಕ್ಷೇತ್ರಗಳಲ್ಲಿ ಮುನ್ನಡೆ.
ಝಡ್ಪಿಎಂ ಪಕ್ಷಕ್ಕೆ ಭಾರಿ ಮುನ್ನಡೆ, ಮ್ಯಾಜಿಕ್ ನಂಬರ್ ದಾಟಿ 22 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡ ಝಡ್ಪಿಎಂ. 9 ಕ್ಷೇತ್ರಗಳಲ್ಲಿ ಎಂಎನ್ಎಫ್ ಪಕ್ಷಕ್ಕೆ ಮುನ್ನಡೆ. ಕಾಂಗ್ರೆಸ್ಗೆ 7 ಕ್ಷೇತ್ರಗಳಲ್ಲಿ ಮುನ್ನಡೆ.
ಕುತೂಹಲ ಘಟ್ಟದತ್ತ ಮಿಜೋರಾಂ ಫಲಿತಾಂಶ, ಎಂಎನ್ಎಫ್ 11, ಐಡ್ಪಿಎಂ 10 ಕ್ಷೇತ್ರಗಳಲ್ಲಿ ಮುನ್ನಡೆ. ಎರಡೂ ಪಕ್ಷಗಳ ನಡುವೆ ನೇರ ಹಣಾಹಣಿ. ಕಾಂಗ್ರೆಸ್ಗೆ 6 ಕ್ಷೇತ್ರಗಳಲ್ಲಿ ಮುನ್ನಡೆ. ಇನ್ನೂ ಒಂದು ಕ್ಷೇತ್ರದಲ್ಲಿ ಮುನ್ನಡೆ ಪಡೆಯದ ಬಿಜೆಪಿ
ಮಿಜೋರಾಂ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಎಂಎನ್ಎಫ್ ಮತ್ತು ಝಡ್ಪಿಎಂ ತಲಾ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದು, ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿದೆ.
ಮಿಜೋರಾಂ ವಿಧಾನಸಭೆ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಸಿಎಂ ಝೋರಮ್ತಂಗಾ ಚರ್ಚ್ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮೊದಲು ಅಂಚೆ ಮತಪತ್ರಗಳನ್ನು ಎಣಿಸಲಾಗುತ್ತದೆ, ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಮತಗಳನ್ನು ಎಣಿಕೆ ಮಾಡಲಾಗುತ್ತದೆ.
ಮಿಜೋರಾಂ ಮುಖ್ಯಮಂತ್ರಿ ಝೋರಾಮ್ತಂಗ ಅವರು ಭಾನುವಾರ 40 ಸದಸ್ಯರ ವಿಧಾನಸಭೆಯಲ್ಲಿ ಮ್ಯಾಜಿಕ್ ಸಂಖ್ಯೆ 21 ಅನ್ನು ದಾಟುವ ಮೂಲಕ ಎಂಎನ್ಎಫ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಗಿ ಭದ್ರತೆಯ ನಡುವೆ 13 ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಎಚ್ ಲಿಯಾಂಜೆಲಾ ಮಾಹಿತಿ ನೀಡಿದ್ದಾರೆ. ಮೊದಲು ಅಂಚೆ ಮತಪತ್ರಗಳ ಎಣಿಕೆ ನಡೆಯಲಿದ್ದು, ಬೆಳಗ್ಗೆ 8.30ರಿಂದ ಇವಿಎಂಗಳಲ್ಲಿ ಮತ ಎಣಿಕೆ ನಡೆಯಲಿದೆ.
ನವೆಂಬರ್ 7 ರಂದು ಮಿಜೋರಾಂನಲ್ಲಿ ಮತದಾನ ನಡೆದಿದ್ದು, ರಾಜ್ಯದ 8.57 ಲಕ್ಷ ಮತದಾರರಲ್ಲಿ ಶೇಕಡಾ 80 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. 18 ಮಹಿಳೆಯರು ಸೇರಿದಂತೆ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮಿಜೋರಾಂ ವಿಧಾನಸಭೆ ಚುನಾವಣೆ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಿಜೋರಾಂನಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (MNF), ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ZPM) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಇದ್ದು, ಫಲಿತಾಂಶ ಕುತೂಹಲ ಕೆರಳಿಸಿದೆ.
ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿದ್ದರಾಮಯ್ಯ
ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಮೂರು ರಾಜ್ಯದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ಧನ್ಯವಾದ ತಿಳಿಸಿದ ಮೋದಿ
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ ಮತದಾರರಿಗೆ ಪ್ರಧಾನಿ ಮೋದಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಬಹುಮತ: ಡಿ ಕೆ ಶಿವಕುಮಾರ್
ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಬಹುಮತ ಸಿಕ್ಕಿದ್ದು, ತೆಲಂಗಾಣ ಫಲಿತಾಂಶ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿರುವುದರ ಸಂಕೇತ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
Top Fight - bhadra
ಸಂಜೀವ್ ಬೇನಿವಾಲ್
(ಬಿಜೆಪಿ)
Won
ಅಜೀತ್
(ಕಾಂಗ್ರೆಸ್)
Lost
Top Fight - Dholpur
ಶೋಭಾರಾಣಿ ಕುಶ್ವಾಃ
(ಕಾಂಗ್ರೆಸ್)
Won
ಶಿವಚರಣ್ ಕುಶ್ವಾಃ
(ಬಿಜೆಪಿ)
Lost
Top Fight - Dantaramgarh
ವೀರೇಂದ್ರ ಸಿಂಗ್
(ಕಾಂಗ್ರೆಸ್)
Won
ರೀತಾ ಸಿಂಗ್
(ಜೆಜೆಪಿ)
Lost
ಬಿಜೆಪಿ ಮುನ್ನಡೆ-ಕಾಂಗ್ರೆಸ್ ಹಿನ್ನಡೆ
Congress won 58 seats and is leading on 11 seats. pic.twitter.com/U027TyqLRn— ANI (@ANI) December 3, 2023
ಪ್ರಧಾನಿ ಮೋದಿ ನಾಯಕತ್ವದಲ್ಲಿ ಜನರು ತಮಗಿರುವ ಅಚಲವಾದ ನಂಬಿಕೆಯನ್ನು ತೋರಿಸಿದ್ದಾರೆ ಎಂದು ವಿಧಾನಸಭಾ ಚುನಾವಣಾ ಫಲಿತಾಂಶಗಳ ಕುರಿತು ಮಣಿಪುರ ಸಿಎಂ ನಾ ಬಿರೇಮ್ ಸಿಂಗ್ ಅವರು ತಿಳಿಸಿದ್ದಾರೆ.
"People have shown unwavering faith in leadership of PM Modi": Manipur CM N Biren Singh on assembly poll results
Read @ANI Story
ಮಣಿಪುರ ಸಿಎಂ ಪ್ರತಿಕ್ರಿಯೆ
ಡಬಲ್ ಎಂಜಿನ್ ಸರ್ಕಾರದಿಂದ ಕಲ್ಯಾಣ
ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವ ಕುರಿತು ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರು ಮಾತನಾಡಿದ್ದಾರೆ. ಜನರಿಗೆ ಬಿಜೆಪಿ ಮತ್ತು ಪ್ರಧಾನಿ ಮೋದಿ ಮೇಲೆ ನಂಬಿಕೆ ಇದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಜನರ ವಿಶ್ವಾಸವನ್ನು ಮರಳಿ ಗಳಿಸಿದೆ. ರಾಜಸ್ಥಾನದ ಜನರು ಮತ್ತು ಛತ್ತೀಸ್ಗಢವು ರಾಜ್ಯಗಳ ಕಲ್ಯಾಣಕ್ಕಾಗಿ ಡಬಲ್ ಎಂಜಿನ್ ಸರ್ಕಾರವನ್ನು ತರುವುದಾಗಿ ಭರವಸೆ ದೊರೆತಿದೆ ಎಂದು ತಿಳಿಸಿದ್ದಾರೆ.
Top Fight - Lachmangarh
ಗೋವಿಂದ್ ಸಿಂಗ್ ದೋಟಸಾರ
(ಕಾಂಗ್ರೆಸ್)
Won
ಸುಭಾಷ್ ಮಹರಿಯಾ
(ಬಿಜೆಪಿ)
Lost
Top Fight - Kota North
ಶಾಂತಿ ಧರಿವಾಲ್
(ಕಾಂಗ್ರೆಸ್)
Won
ಪ್ರಹ್ಲಾದ್ ಗುಂಜಾಲ್
(ಬಿಜೆಪಿ)
Lost
Top Fight - Sardarpura
ಅಶೋಕ್ ಗೆಹ್ಲೋಟ್
(ಕಾಂಗ್ರೆಸ್)
Won
ಡಾ.ಮಹೇಂದ್ರ ಸಿಂಗ್ ರಾಥೋಡ್
(ಬಿಜೆಪಿ)
Lost
Top Fight - Mandawa
ರೀಟಾ ಚೌಧರಿ
(ಕಾಂಗ್ರೆಸ್)
Won
ನರೇಂದ್ರ ಕುಮಾರ್
(ಬಿಜೆಪಿ)
Lost
Top Fight - ಹುಜೂರ್ನಗರ
ನಲ್ಲಮಾಡ ಉತ್ತಮ್ ಕುಮಾರ್ ರೆಡ್ಡಿ
(ಕಾಂಗ್ರೆಸ್)
Won
ಚಲ್ಲಾ ಶ್ರೀಲತಾ ರೆಡ್ಡಿ
(ಬಿಜೆಪಿ)
Lost
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications