#ಮಿಟೂಗೆ ಮೊದಲ ಜಯ, ಕೇಂದ್ರ ಮಂತ್ರಿ ಎಂಜೆ ಅಕ್ಬರ್ ರಾಜೀನಾಮೆ
ನವದೆಹಲಿ, ಅಕ್ಟೋಬರ್ 17: #ಮಿಟೂ ಅಭಿಯಾನಕ್ಕೆ ಮೊದಲ ಜಯ ದೊರೆತಿದೆ. ಇದೇ ಅಭಿಯಾನದಡಿ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿ ಆಗಿದ್ದ ಕೇಂದ್ರ ಮಂತ್ರಿ ಎಂಜೆ ಅಕ್ಬರ್ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಜಿ ಸಂಪಾದಕ ಹಾಗೂ ಕೇಂದ್ರದ ವಿದೇಶಾಂಗ ರಾಜ್ಯ ಖಾತೆ ಸಚಿವ ಆಗಿರುವ ಎಂಜೆ ಅಕ್ಬರ್ ವಿರುದ್ಧ 20 ಪತ್ರಕರ್ತೆಯರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಅವರ ವಿರುದ್ಧ ಪ್ರಕರಣ ಸಹ ದಾಖಲಾಗಿತ್ತು.
ಎಂಜೆ ಅಕ್ಬರ್ ಅವರೊಂದಿಗೆ ಈ ಹಿಂದೆ ಕೆಲಸ ಮಾಡಿದ್ದ ಪ್ರಿಯಾ ರಮಣಿ ಎಂಬುವರು ಮೊದಲಿಗೆ ಟ್ವಿಟ್ಟರ್ನಲ್ಲಿ #ಮಿಟೂ ಅಭಿಯಾನದ ಅಡಿ ಎಂಜೆ ಅಕ್ಬರ್ ಅವರ ಕಾಮಚೇಷ್ಟೆಗಳ ಬಗ್ಗೆ ವಿವರವಾಗಿ ಬರೆದುಕೊಂಡಿದ್ದರು.
ಇದರ ನಂತರ ಹಲವು ಪತ್ರಕರ್ತೆಯರು ಇದಕ್ಕೆ ಧನಿ ಗೂಡಿಸಿದ್ದರು. ಸುಮಾರು 20 ಪತ್ರಕರ್ತೆಯರು ಅಕ್ಬರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡುವ ಮೂಲಕ ಅಕ್ಬರ್ ಹೆಣ್ಣುಬಾಕತನವನ್ನು ಜಾಹೀರು ಮಾಡಿದ್ದರು.

ಕಾಂಗ್ರೆಸ್ನಿಂದ ಪ್ರತಿಭಟನೆ
ಕಾಂಗ್ರೆಸ್ ಸಹ ಅಕ್ಬರ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಾಡಿತ್ತು. ಸರ್ಕಾರ ಸಹ ಈ ಪ್ರಕರಣದಿಂದ ಭಾರಿ ಮುಜುಗರಕ್ಕೆ ಒಳಗಾಗಿತ್ತು. ಅಂತಿಮವಾಗಿ ಇಂದು ಎಂಜೆ ಅಕ್ಬರ್ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

'ಸುಳ್ಳು ಆರೋಪದ ವಿರುದ್ಧ ಹೋರಾಡಲು ರಾಜೀನಾಮೆ'
ರಾಜೀನಾಮೆ ನೀಡಿರುವ ಬಗ್ಗೆ ಹೇಳಿಕೆ ನೀಡಿರುವ ಅವರು, ನನ್ನ ಮೇಲೆ ಸುಳ್ಳು ಆರೋಪಗಳು ಬಂದಿರುವ ಕಾರಣ, ರಾಜೀನಾಮೆ ನೀಡಿ ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಸ್ವಂತ ಬಲದ ಮೇಲೆ ಹೋರಾಡುತ್ತೇನೆ ಎಂದಿದ್ದಾರೆ.

ಮೋದಿ, ಸುಷ್ಮಾ ಸ್ವರಾಜ್ಗೆ ಧನ್ಯವಾದಗಳು
ಇಷ್ಟು ದಿನ ದೇಶ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ನರೇಂದ್ರ ಮೋದಿ ಹಾಗೂ ಸುಷ್ಮಾ ಸ್ವರಾಜ್ ಅವರಿಗೆ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.

ಅಕ್ಬರ್ ಪರ ವಾದಿಸಲು 97 ವಕೀಲರು
ಲೈಂಗಿಕ ಕಿರುಕುಳ ಆರೋಪಕ್ಕೆ ಸಿಲುಕಿರುವ ಎಂಜೆ ಅಕ್ಬರ್ ಪರ ವಾದಿಸಲು 97 ವಕೀಲರ ದೊಡ್ಡ ತಂಡ ತಯಾರಾಗಿದೆ. ಈಗಾಗಲೇ ಅಕ್ಬರ್ ಅವರು ತಮ್ಮ ವಿರುದ್ಧ ಆರೋಪ ಮಾಡಿರುವ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications