ಮನೀಶ್ ಸಿಸೋಡಿಯಾ ಬಂಧನ: ಬಾಯಿ ಬಿಡದ ಕಾಂಗ್ರೆಸ್, ಮಿತ್ರ ಪಕ್ಷಕ್ಕೆ ಸೆಡ್ಡು ಹೊಡೆದ ತಮಿಳುನಾಡು ಸಿಎಂ ಸ್ಟಾಲಿನ್!
ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಮನೀಶ್ ಸಿಸೋಡಿಯಾ ವಿಷಯದಲ್ಲಿ ಸ್ಪಷ್ಟ ನಿಲುವು ತೆಗೆದುಕೊಂಡಿದ್ದು, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಚೆನ್ನೈ, ಮಾರ್ಚ್ 08: ದೆಹಲಿಯ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಮನೀಶ್ ಸಿಸೋಡಿಯಾ ಬಂಧನ ವಿಚಾರದಲ್ಲಿ ಸ್ಟಾಲಿನ್ ನಿಲುವು, ಅದರ ಮಿತ್ರ ಪಕ್ಷವಾದ ಕಾಂಗ್ರೆಸ್ನ ನಿಲುವಿನಿಂದ ತುಂಬಾ ಬದಲಾಗಿದೆ. ಆಮ್ ಆದ್ಮಿ ಪಕ್ಷದ ಬಗ್ಗೆ ಡಿಎಂಕೆ ಇದು ಸೂಕ್ಷ್ಮ ದೃಷ್ಟಿಕೋನ ಹೊಂದಿದೆ ಎಂಬುದಕ್ಕೆ ಈ ಪತ್ರ ಸಾಕ್ಷಿಯಾಗಿದೆ. ಕಾಂಗ್ರೆಸ್ ಮನೀಶ್ ಸಿಸೋಡುಯಾ ವಿಚಾರದಲ್ಲಿ ತಟಸ್ಥವಾಗಿದೆ. ಆದರೆ, ಕೇಂದ್ರ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಹಲವು ಬಾರಿ ವಾ್ದಾಳಿ ನಬಡೆಸಿದರೂ ಎಲ್ಲೂ ಸಿಸೋಡಿಯಾ ಅವರ ಹೆಸರು ತೆಗೆದುಕೊಂಡಿಲ್ಲ.

ಇತ್ತೀಚೆಗೆ ನ ದೆಹಲಿ ಉಪಮುಖ್ಯಮಂತ್ರಿ ಮನೀರ್ಶ ಸಿಸೋಡಿಯಾ ಬಂಧನ ಖಂಡಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತೃಣಮೂಲ ಕಾಂಗ್ರೆಸ್ನ ಮಮತಾ ಬ್ಯಾನರ್ಜಿ, ಶಿವಸೇನೆಯ (ಯುಬಿಟಿ) ಉದ್ಧವ್ ಠಾಕ್ರೆ, ಎನ್ಸಿಪಿಯ ಶರದ್ ಪವಾರ್ ಮತ್ತು ಬಿಆರ್ಎಸ್ನ ಕೆ ಚಂದ್ರಶೇಖರ ರಾವ್ ಸೇರಿದಂತೆ ಎಂಟು ಪ್ರತಿಪಕ್ಷ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೂ ಕಾಂಗ್ರೆಸ್ ಸಹಿ ಹಾಕಿರಲಿಲ್ಲ.
ಆದರೆ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಈ ವಿಷಯದಲ್ಲಿ ಸ್ಪಷ್ಟ ನಿಲುವು ತೆಗೆದುಕೊಂಡಿದ್ದು, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. "ದೆಹಲಿಯ ಚುನಾಯಿತ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲಾಗಿದೆ. ವೈಯಕ್ತಿಕ ಸ್ವಾತಂತ್ರ್ಯದ ಸಾಂವಿಧಾನಿಕ ಖಾತರಿಯನ್ನು ಕಸಿದುಕೊಕೊಂಡು ಅವರನ್ನು ನೋವು ಮತ್ತು ಒತ್ತಡಕ್ಕೆ ಒಳಗಾಗುವಂತೆ ಮಾಡಿರುವುದನ್ನು ನೋಡಿ ನಾನು ದುಃಖಿತನಾಗಿದ್ದೇನೆ ಮತ್ತು ನಿರಾಶೆಗೊಂಡಿದ್ದೇನೆ" ಎಂದು ಪತ್ರದಲ್ಲಿ ಬರೆಯಲಾಗಿದೆ.
The arrest of Delhi Dy CM @msisodia on trumped up allegations is terrorising the due process of law.
— M.K.Stalin (@mkstalin) March 7, 2023
It is misuse of power and reminds of Emergency days.
I appeal to Hon'ble @PMOIndia to uphold residual reputation of investigating agencies & direct the release of @msisodia. pic.twitter.com/1mlifxljge
" ನ್ಯಾಯ ವ್ಯವಸ್ಥೆಯ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಒಕ್ಕೂಟದಲ್ಲಿ ಆಡಳಿತ ಪಕ್ಷದ ವೈಯಕ್ತಿಕ ತೃಪ್ತಿಗಾಗಿ ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ. ಏಳು ದಶಕಗಳಷ್ಟು ಹಳೆಯದಾದ ನಮ್ಮ ಸಂವಿಧಾನದ ಕಾನೂನು ಮತ್ತು ಮೂಲಭೂತ ತತ್ವಗಳ ಸರಿಯಾದ ಪ್ರಕ್ರಿಯೆಯನ್ನು ಅವಮಾನಿಸಿ ಅವರನ್ನು ಬಂಧಿಸಲಾಗಿದೆ" ಎಂದು ಸ್ಟಾಲಿನ್ ಬರೆದಿದ್ದಾರೆ.
ಈ ಪತ್ರವು ಆಡಳಿತಾರೂಢ ಡಿಎಂಕೆಯ ನಿಲುವಿನಲ್ಲಿ ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಮಾರ್ಚ್ 1 ರಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸ್ಟಾಲಿನ್ ಅವರ ಜನ್ಮದಿನದ ಆಚರಣೆಗೆ ಎಎಪಿಯನ್ನು ಆಹ್ವಾನಿಸಿರಲಿಲ್ಲ. ಪಕ್ಷದ ನಾಯಕರು, ಆ ದಿನ ಕಾರ್ಯಕ್ರಮಕ್ಕೆ ಬರುವವರಿಗೆ ಮಾತ್ರ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಹೇಳಿದ್ದರು. ಆದರೆ, ಫೆಬ್ರವರಿ 28 ರಂದು, ಹಿರಿಯ ನಾಯಕ ಟಿಆರ್ ಬಾಲು ನೀಡಿದ ಹೇಳಿಕೆಯಲ್ಲಿ ಡಿಎಂಕೆ ಮನೀಶ್ ಸಿಸೋಡುಯಾ ಬಂಧನವನ್ನು ಖಂಡಿಸಿತ್ತು.

"ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳನ್ನು ಗುರಿಯಾಗಿಸುತ್ತಿದೆ. ಬಿಜೆಪಿಯು ತನ್ನ ಮೈತ್ರಿ ಪಕ್ಷಗಳಂತೆ ಈ ಸಂಸ್ಥೆಗಳನ್ನು ಹೇಗೆ ಬಳಸಿಕೊಳ್ಳುತ್ತಿದೆ ಎಂಬುದನ್ನು ನೋಡಿದರೆ ಬೇಸರವಾಗುತ್ತದೆ. ಇದು ಪ್ರಜಾಪ್ರಭುತ್ವದ ವಿರುದ್ಧ ಮಾತ್ರವಲ್ಲದೆ ಕಾನೂನಿಘು ವಿರುದ್ಧವಾಗಿದೆ" ಎಂದು ಹಿರಿಯ ನಾಯಕ ಟಿಆರ್ ಬಾಲು ಹೇಳಿಕೆಯಲ್ಲಿ ತಿಳಿಸಿದ್ದರು.
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ದೆಹಲಿ ಸಿಎಂ ಕೇಜ್ರಿವಾಲ್ ಉತ್ತಮ ಸಂಬಂಧ ಹೊಂದಿದ್ದಾರೆ. ಸ್ಟಾಲಿನ್ ಅವರು ದೆಹಲಿ ಸರ್ಕಾರ ನಡೆಸುತ್ತಿರುವ ಮಾದರಿ ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್ಗಳಿಗೆ ಭೇಟಿ ನೀಡಿದ್ದಾರೆ. ತಮಿಳುನಾಡಿನಲ್ಲಿ ಸ್ಮಾರ್ಟ್ ಶಾಲೆಗಳನ್ನು ಪ್ರಾರಂಭಿಸಲು ಅರವಿಮದ್ ಕೇಜ್ರಿವಾಲ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications