Tamil Nadu: ಕೇಂದ್ರ ಸರ್ಕಾರಕ್ಕೆ ತಿರುಗೇಟು! ಬಜೆಟ್ನಲ್ಲಿ ರೂಪಾಯಿ ಚಿಹ್ನೆ ಕೈಬಿಟ್ಟ ತಮಿಳುನಾಡು
ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಪಟ್ಟಂತೆ ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವೆ ತಿಕ್ಕಾಟ ಜೋರಾಗಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಒಪ್ಪಲ್ಲ ಎಂದು ಹೇಳಿದ್ದಾರೆ. ಇದೀಗ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ಮಾಡಲು ಹೊಸ ವಿಧಾನ ಆರಿಸಿಕೊಂಡಿದ್ದಾರೆ.
ತ್ರಿಭಾಷಾ ವಿವಾದದ ನಡುವೆ ತಮಿಳುನಾಡು ಸರ್ಕಾರ ಬಜೆಟ್ನಿಂದ ರೂಪಾಯಿ ಚಿಹ್ನೆಯನ್ನು ಕೈಬಿಟ್ಟಿದೆ. ದೇವನಾಗರಿ ಲಿಪಿಯ ರುಪಾಯಿ ಚಿಹ್ನೆಯನ್ನು ಕೈಬಿಟ್ಟಿದ್ದು ತಮಿಳಿನ ಚಿಹ್ನೆಯನ್ನು ಅಳವಡಿಸಿಕೊಂಡಿದೆ.

ಎಂ.ಕೆ. ಸ್ಟಾಲಿನ್ ಸರ್ಕಾರವು ರಾಜ್ಯ ಬಜೆಟ್ ಲೋಗೋದಲ್ಲಿ ರೂಪಾಯಿ ಚಿಹ್ನೆಯನ್ನು 'ರು' ತಮಿಳು ಅಕ್ಷರಕ್ಕೆ ಬದಲಾವಣೆ ಮಾಡಿದೆ. ಭಾರತದ ಯಾವುದೇ ರಾಜ್ಯ ರಾಷ್ಟ್ರೀಯ ಕರೆನ್ಸಿ ಚಿಹ್ನೆಯನ್ನು ಕೈಬಿಟ್ಟಿರುವುದು ಇದೇ ಮೊದಲ ಬಾರಿ. ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020 ಮತ್ತು ತ್ರಿಭಾಷಾ ನೀತಿಗೆ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಂಡಿದೆ.
ಚಿಹ್ನೆ ಬದಲಾವಣೆ ಬಗ್ಗೆ ಸರ್ಕಾರ ಈವರೆಗೂ ಅಧಿಕೃತ ಹೇಳಿಕೆ ನೀಡಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಟೀಕಿಸಿದ್ದು, ತಮಿಳುನಾಡು ಚಿಹ್ನೆಯನ್ನು ಕೈಬಿಡುವ ಮೂಲಕ ಭಾರತ ವಿರೋಧಿ ನಿಲುವನ್ನು ಸ್ಟಾಲಿನ್ ಪಕ್ಷ ತೋರಿಸಿದೆ ಎಂದು ಎನ್ಡಿಟಿವಿಗೆ ತಿಳಿಸಿರುವುದಾಗಿ ವರದಿಯಾಗಿದೆ. ರೂಪಾಯಿ ಚಿಹ್ನೆಯನ್ನು ಭಾರತದ ಸಂಕೇತವೆಂದು ವ್ಯಾಪಕವಾಗಿ ಗುರುತಿಸಲಾಗಿದೆ ಎಂದು ಬಿಜೆಪಿಯ ನಾರಾಯಣನ್ ತಿರುಪತಿ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಮುಖ ಅಂಶಗಳನ್ನು, ವಿಶೇಷವಾಗಿ ತ್ರಿಭಾಷಾ ಸೂತ್ರವನ್ನು ಜಾರಿಗೆ ತರಲು ತಮಿಳುನಾಡು ನಿರಾಕರಿಸಿದ್ದು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ತಮಿಳುನಾಡಿನ ವಿರೋಧದ ಬಳಿಕ, ಕೇಂದ್ರವು ಸಮಗ್ರ ಶಿಕ್ಷಾ ಅಭಿಯಾನ (ಎಸ್ಎಸ್ಎ) ಅಡಿಯಲ್ಲಿ ₹573 ಕೋಟಿ ಕೇಂದ್ರ ಶಿಕ್ಷಣ ಸಹಾಯವನ್ನು ತಡೆಹಿಡಿದಿದ್ದು, ತಮಿಳುನಾಡಿನ ಸಿಟ್ಟಿಗೆ ಕಾರಣವಾಗಿದೆ.
ನೀತಿ ನಿಯಮಗಳ ಪ್ರಕಾರ, ರಾಜ್ಯಗಳು ಎಸ್ಎಸ್ಎ ನಿಧಿಯನ್ನು ಪಡೆಯಲು ಎಬ್ಇಪಿ ಮಾರ್ಗಸೂಚಿಗಳನ್ನು ಪಾಲಿಸಬೇಕು, ಇದರಲ್ಲಿ ಶೇಕಡಾ 60 ರಷ್ಟು ಹಣವನ್ನು ಕೇಂದ್ರವು ತಮಿಳುನಾಡಿನಂತಹ ರಾಜ್ಯಗಳಿಗೆ ಒದಗಿಸುತ್ತದೆ. ಪಿಎಂ ಶ್ರೀ ಯೋಜನೆಯಡಿಯಲ್ಲಿ, ತಮಿಳುನಾಡು ಎನ್ಇಪಿ 2020 ಅನ್ನು ಕಾರ್ಯಗತಗೊಳಿಸುವುದಾಗಿ ಕೇಂದ್ರ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಬೇಕು ಮತ್ತು ಪ್ರತಿಯಾಗಿ ಕೇಂದ್ರವು ಹಣವನ್ನು ನೀಡುತ್ತದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications