ಶಾಸಕಿ- ಮಹಿಳಾ ಕಾನ್ ಸ್ಟೇಬಲ್ ಪರಸ್ಪರ ಕಪಾಳಮೋಕ್ಷ
Recommended Video

ಶಿಮ್ಲಾ, ಡಿಸೆಂಬರ್ 30 : ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ಪ್ರಹಸನ ಶುಕ್ರವಾರ ಇಡೀ ಸುದ್ದಿಗೆ ಕಾರಣವಾಯಿತು. ಹಿಮಾಚಲಪ್ರದೇಶದ ಕಾಂಗ್ರೆಸ್ ಶಾಸಕಿ ಹಾಗೂ ಎಐಸಿಸಿಯಲ್ಲಿ ಒಳ್ಳೆ ಹುದ್ದೆಯಲ್ಲಿರುವ ಆಶಾಕುಮಾರಿ ಅವರು ಮಹಿಳಾ ಕಾನ್ ಸ್ಟೇಬಲ್ ವೊಬ್ಬರ ಮೇಲೆ ಕೈ ಮಾಡಿದ್ದಾರೆ. ಪ್ರತಿಯಾಗಿ ಆ ಕಾನ್ ಸ್ಟೇಬಲ್ ಕೂಡ ಈಕೆಗೆ ಹೊಡೆದಿದ್ದಾರೆ. ಈ ಘಟನೆ ರಂಪ- ರಾಮಾಯಣವಾಗಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿವರೆಗೆ ಸುದ್ದಿ ಮುಟ್ಟಿದೆ.
ಕೊನೆಗೆ ಶಾಸಕಿ ಆಶಾಕುಮಾರಿ ನಡವಳಿಕೆಗೆ ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ. ಶಾಸಕಿಯೂ ಆಗಿರುವ ಆಶಾ ಕುಮಾರಿ ಅವರು ಪಂಜಾಬ್ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯೂ ಹೌದು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಭೆಯೊಂದು ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿತ್ತು. ಆ ಸಭೆಯಲ್ಲಿ ಭಾಗವಹಿಸಲು ಆಶಾಕುಮಾರಿ ತೆರಳಿದ್ದಾರೆ.

ಅವರನ್ನು ಒಳಗೆ ಬಿಡದೆ ಮಹಿಳಾ ಕಾನ್ ಸ್ಟೇಬಲ್ ತಡೆದಿದ್ದಾರೆ. ಆ ಸಿಟ್ಟಿನಲ್ಲಿ ಆಶಾಕುಮಾರಿ ಅವರು ಕರ್ತವ್ಯನಿರತ ಮಹಿಳಾ ಕಾನ್ ಸ್ಟೇಬಲ್ ಕೆನ್ನೆಗೆ ಹೊಡೆದಿದ್ದಾರೆ. ಹೊಡೆತ ತಿಂದ ಆ ಮಹಿಳೆ ಸಿಟ್ಟಿನಲ್ಲಿ ಶಾಸಕಿಯ ಕಪಾಳಕ್ಕೆ ಹೊಡೆದಿದ್ದಾರೆ. ಇಷ್ಟೆಲ್ಲ ಆದ ಮೇಲೆ ಮಾಧ್ಯಮಗಳ ಜತೆ ಆಶಾಕುಮಾರಿ ಮಾತನಾಡಿದ್ದಾರೆ.
"ಹೌದು, ಸಿಟ್ಟಿನ ಭರದಲ್ಲಿ ಕಾನ್ ಸ್ಟೇಬಲ್ ಗೆ ಹೊಡೆದಿದ್ದು ನಿಜ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ. ಆದರೆ ಆಕೆಯ ತಾಯಿಯ ವಯಸ್ಸು ನನಗೆ. ಪ್ರತಿಯಾಗಿ ನನ್ನ ಕಪಾಳಕ್ಕೆ ಹೊಡೆದದ್ದು ಸರಿಯೇ?" ಎಂದು ಪ್ರಶ್ನಿಸಿದ್ದಾರೆ. ಒಟ್ಟಿನಲ್ಲಿ ಕ್ಷಣದ ಕೋಪ ಮರ್ಯಾದೆಯನ್ನು ಕಳೆದಿದೆ.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications