ಪ್ರವೇಶ ಪಡೆಯಲು ನಕಲಿ ಪ್ರಮಾಣಪತ್ರ ಬಳಕೆ ಮಾಡಿದ್ದ 40 ಬಿಟೆಕ್ ವಿದ್ಯಾರ್ಥಿಗಳ ಅಮಾನತು
ನವದೆಹಲಿ, ಜ. 11: ಕಾಲೇಜಿಗೆ ಪ್ರವೇಶ ಪಡೆಯಲು ನಕಲಿ ಪ್ರಮಾನ ಪತ್ರ ಬಳಸಿದ್ದ ಆರೋಪದಲ್ಲಿ ನಲ್ವತ್ತು ವಿದ್ಯಾರ್ಥಿಗಳ ಪ್ರವೇಶವನ್ನು ಅಮಾನತು ಮಾಡಿರುವ ಘಟನೆ ಗೋರಖ್ಪುರದಲ್ಲಿ ನಡೆದಿದೆ.
ಗೋರಖ್ಪುರ ನಗರ ಮೂಲದ ಮೇಡಂ ಮೋಹನ್ ಮಾಳವಿಯಾ ತಾಂತ್ರಿಕ ವಿಶ್ವವಿದ್ಯಾಲಯ (ಎಂಎಂಎಂಟಿಯು) ನಕಲಿ ಪ್ರಮಾಣಪತ್ರಗಳ ಬಳಕೆಯ ಆರೋಪದ ಮೇಲೆ ವಿವಿಧ ಶಾಖೆಗಳ 40 ಬಿಟೆಕ್ ವಿದ್ಯಾರ್ಥಿಗಳ ಪ್ರವೇಶವನ್ನು ಅಮಾನತುಗೊಳಿಸಿದೆ.
ಹೆಚ್ಚಿನ ವಿವರಗಳನ್ನು ಹಂಚಿಕೊಂಡ ಎಂಎಂಎಂಟಿಯು ಉಪಕುಲಪತಿ ಜೆಪಿ ಪಾಂಡೆ, ಮೂವರು ಸದಸ್ಯರ ತನಿಖಾ ವರದಿಯು ವಿದ್ಯಾರ್ಥಿಗಳ ಅವ್ಯವಹಾರವನ್ನು ಕಂಡು ಹಿಡಿದ ನಂತರ 40 ವಿದ್ಯಾರ್ಥಿಗಳ ಪ್ರವೇಶವನ್ನು ರದ್ದುಗೊಳಿಸಲಾಗಿದೆ. ವಿದ್ಯಾರ್ಥಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ವಿದ್ಯಾರ್ಥಿನಿಯೊಬ್ಬರು ನಕಲಿ ಪ್ರವೇಶ ಶುಲ್ಕ ರಶೀದಿಯನ್ನು ತಯಾರಿಸುತ್ತಿರುವುದನ್ನು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಪತ್ತೆ ಹಚ್ಚಿದ್ದರು. ಬಳಿಕ ಈ ನಕಲಿ ಪ್ರಮಾಣಪತ್ರ ಪ್ರಕರಣವು ಬೆಳಕಿಗೆ ಬಂದಿತ್ತು. ತರುವಾಯ, ಆಕೆಯ ಪ್ರವೇಶ ಹಂಚಿಕೆ ಸಂಖ್ಯೆಯನ್ನು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಕಳುಹಿಸಲಾಯಿತು. ಪ್ರಕರಣದ ತನಿಖೆಗಾಗಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು.
ಪ್ರಕರಣದ ತನಿಖೆಯ ಸಂದರ್ಭದಲ್ಲಿ ಪ್ರವೇಶ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದು ಕಂಡು ಬಂದಿದೆ. ಮೂವರು ಸದಸ್ಯರ ತನಿಖಾ ವರದಿಯ ನಂತರ, ಶೈಕ್ಷಣಿಕ ಮಂಡಳಿಯು 2020-21 ಮತ್ತು 2021-22 ಬ್ಯಾಚ್ಗಳ 40 ಬಿಟೆಕ್ ವಿದ್ಯಾರ್ಥಿಗಳ ಪ್ರವೇಶವನ್ನು ಅಮಾನತುಗೊಳಿಸುವಂತೆ ಶಿಫಾರಸು ಮಾಡಿದೆ.
ಈ ವಿದ್ಯಾರ್ಥಿಗಳ ಭಾರೀ ವಂಚನೆಯು ವಿಶ್ವವಿದ್ಯಾನಿಲಯದ ಆಡಳಿತದಲ್ಲಿ 2017-18 ರಿಂದ ಅದರ ಪ್ರವೇಶ ಪ್ರಕ್ರಿಯೆಯಲ್ಲಿ ವಂಚನೆಯ ನಡೆದಿರಬಹುದು ಎಂಬ ಅನುಮಾನಗಳಿಗೆ ಎಡೆ ಮಾಡಿದ್ದು, ಪ್ರಕರಣದಲ್ಲಿ ಮತ್ತಷ್ಟು ತನಿಖೆಗೆ ಪ್ರೇರೇಪಿಸಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications