ಪ್ರವೇಶ ಪಡೆಯಲು ನಕಲಿ ಪ್ರಮಾಣಪತ್ರ ಬಳಕೆ ಮಾಡಿದ್ದ 40 ಬಿಟೆಕ್ ವಿದ್ಯಾರ್ಥಿಗಳ ಅಮಾನತು
ನವದೆಹಲಿ, ಜ. 11: ಕಾಲೇಜಿಗೆ ಪ್ರವೇಶ ಪಡೆಯಲು ನಕಲಿ ಪ್ರಮಾನ ಪತ್ರ ಬಳಸಿದ್ದ ಆರೋಪದಲ್ಲಿ ನಲ್ವತ್ತು ವಿದ್ಯಾರ್ಥಿಗಳ ಪ್ರವೇಶವನ್ನು ಅಮಾನತು ಮಾಡಿರುವ ಘಟನೆ ಗೋರಖ್ಪುರದಲ್ಲಿ ನಡೆದಿದೆ.
ಗೋರಖ್ಪುರ ನಗರ ಮೂಲದ ಮೇಡಂ ಮೋಹನ್ ಮಾಳವಿಯಾ ತಾಂತ್ರಿಕ ವಿಶ್ವವಿದ್ಯಾಲಯ (ಎಂಎಂಎಂಟಿಯು) ನಕಲಿ ಪ್ರಮಾಣಪತ್ರಗಳ ಬಳಕೆಯ ಆರೋಪದ ಮೇಲೆ ವಿವಿಧ ಶಾಖೆಗಳ 40 ಬಿಟೆಕ್ ವಿದ್ಯಾರ್ಥಿಗಳ ಪ್ರವೇಶವನ್ನು ಅಮಾನತುಗೊಳಿಸಿದೆ.
ಹೆಚ್ಚಿನ ವಿವರಗಳನ್ನು ಹಂಚಿಕೊಂಡ ಎಂಎಂಎಂಟಿಯು ಉಪಕುಲಪತಿ ಜೆಪಿ ಪಾಂಡೆ, ಮೂವರು ಸದಸ್ಯರ ತನಿಖಾ ವರದಿಯು ವಿದ್ಯಾರ್ಥಿಗಳ ಅವ್ಯವಹಾರವನ್ನು ಕಂಡು ಹಿಡಿದ ನಂತರ 40 ವಿದ್ಯಾರ್ಥಿಗಳ ಪ್ರವೇಶವನ್ನು ರದ್ದುಗೊಳಿಸಲಾಗಿದೆ. ವಿದ್ಯಾರ್ಥಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ವಿದ್ಯಾರ್ಥಿನಿಯೊಬ್ಬರು ನಕಲಿ ಪ್ರವೇಶ ಶುಲ್ಕ ರಶೀದಿಯನ್ನು ತಯಾರಿಸುತ್ತಿರುವುದನ್ನು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಪತ್ತೆ ಹಚ್ಚಿದ್ದರು. ಬಳಿಕ ಈ ನಕಲಿ ಪ್ರಮಾಣಪತ್ರ ಪ್ರಕರಣವು ಬೆಳಕಿಗೆ ಬಂದಿತ್ತು. ತರುವಾಯ, ಆಕೆಯ ಪ್ರವೇಶ ಹಂಚಿಕೆ ಸಂಖ್ಯೆಯನ್ನು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಕಳುಹಿಸಲಾಯಿತು. ಪ್ರಕರಣದ ತನಿಖೆಗಾಗಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು.
ಪ್ರಕರಣದ ತನಿಖೆಯ ಸಂದರ್ಭದಲ್ಲಿ ಪ್ರವೇಶ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದು ಕಂಡು ಬಂದಿದೆ. ಮೂವರು ಸದಸ್ಯರ ತನಿಖಾ ವರದಿಯ ನಂತರ, ಶೈಕ್ಷಣಿಕ ಮಂಡಳಿಯು 2020-21 ಮತ್ತು 2021-22 ಬ್ಯಾಚ್ಗಳ 40 ಬಿಟೆಕ್ ವಿದ್ಯಾರ್ಥಿಗಳ ಪ್ರವೇಶವನ್ನು ಅಮಾನತುಗೊಳಿಸುವಂತೆ ಶಿಫಾರಸು ಮಾಡಿದೆ.
ಈ ವಿದ್ಯಾರ್ಥಿಗಳ ಭಾರೀ ವಂಚನೆಯು ವಿಶ್ವವಿದ್ಯಾನಿಲಯದ ಆಡಳಿತದಲ್ಲಿ 2017-18 ರಿಂದ ಅದರ ಪ್ರವೇಶ ಪ್ರಕ್ರಿಯೆಯಲ್ಲಿ ವಂಚನೆಯ ನಡೆದಿರಬಹುದು ಎಂಬ ಅನುಮಾನಗಳಿಗೆ ಎಡೆ ಮಾಡಿದ್ದು, ಪ್ರಕರಣದಲ್ಲಿ ಮತ್ತಷ್ಟು ತನಿಖೆಗೆ ಪ್ರೇರೇಪಿಸಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications