Manipur: ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದ ಜನಸಮೂಹ
ಗುರುವಾರ ರಾತ್ರಿ ಮಣಿಪುರದ ಚುರಾಚಂದ್ಪುರ ಎಸ್ಪಿ ಕಚೇರಿಗೆ ಜನಸಮೂಹವೊಂದು ಮುತ್ತಿಗೆ ಹಾಕಲು ಯತ್ನಿಸಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳೊಂದಿಗೆ ಕಾಣಿಸಿಕೊಂಡಿದ್ದನ್ನು ಆರೋಪಿಸಿ ಜಿಲ್ಲಾ ಪೊಲೀಸ್ನ ಹೆಡ್ಕಾನ್ಸ್ಟೇಬಲ್ನನ್ನು ಅಮಾನತುಗೊಳಿಸಿದ ಗಂಟೆಗಳ ನಂತರ ಈ ಘಟನೆ ನಡೆದಿದೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಣಿಪುರ ಪೊಲೀಸರು ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಸರಿಸುಮಾರು 300-400 ಸಂಖ್ಯೆಯ ಗುಂಪೊಂದು ಇಂದು ಎಸ್ಪಿ ಸಿಸಿಪಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿತು, ಕಲ್ಲು ತೂರಾಟ ಮಾಡಿದೆ. ಆರ್ ಎಎಫ್ ಮತ್ತು ಎಸ್ಎಫ್ ಭದ್ರತಾ ಪಡೆಗಳು ಇದನ್ನು ನಿಯಂತ್ರಿಸಲು ಅಶ್ರುವಾಯು ಶೆಲ್ ಅನ್ನು ಹಾರಿಸುವ ಮೂಲಕ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ವೀಡಿಯೊ ಪ್ರಸಾರವಾದ ನಂತರ ಚುರಚಂದಪುರ ಎಸ್ಪಿ ಶಿವಾನಂದ್ ಸುರ್ವೆ ಹೆಡ್ ಕಾನ್ಸ್ಟೇಬಲ್ ಸಿಯಾಮ್ಲಾಲ್ಪಾಲ್ ಅವರನ್ನು ಮುಂದಿನ ಸೂಚನೆ ಬರುವವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ" ಅಮಾನತುಗೊಳಿಸಿದ್ದಾರೆ. ವೀಡಿಯೊದಲ್ಲಿ, ಸಿಯಾಮ್ಲಾಲ್ಪಾಲ್ ಶಸ್ತ್ರಸಜ್ಜಿತ ವ್ಯಕ್ತಿಗಳು ಮತ್ತು ಗ್ರಾಮ ಸ್ವಯಂಸೇವಕರೊಂದಿಗೆ ಕುಳಿತಿರುವ ಜೊತೆ ಕಾಣಿಸಿಕೊಂಡಿದ್ದಾರೆ.
ಇದು ಶಿಸ್ತುಬದ್ಧ ಪೊಲೀಸ್ ಪಡೆಯ ಸದಸ್ಯರಾಗಿರುವ ಅತ್ಯಂತ ಗಂಭೀರ ದುಷ್ಕೃತ್ಯಕ್ಕೆ ಸಮಾನವಾಗಿದೆ, ಎಂದು ಪೊಲೀಸ್ ಆದೇಶದಲ್ಲಿ ತಿಳಿಸಲಾಗಿದೆ.
ಫೆಬ್ರವರಿ 14 ರಂದು ಶಸ್ತ್ರಸಜ್ಜಿತ ವ್ಯಕ್ತಿಗಳೊಂದಿಗೆ ವೀಡಿಯೊ ಮಾಡುತ್ತಿರುವ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವುದರಿಂದ ಚುರಾಚಂದ್ಪುರ ಜಿಲ್ಲಾ ಪೊಲೀಸ್ನ ಸಿಯಾಮ್ಲಾಲ್ಪಾಲ್ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹೆಚ್ಚುವರಿಯಾಗಿ, ಸಿಯಾಮ್ಲಾಲ್ಪಾಲ್ಗೆ ಪೂರ್ವಾನುಮತಿ ಇಲ್ಲದೆ ನಗರದಿಂದ ಹೊರಹೋಗದಂತೆ ಸೂಚನೆ ನೀಡಲಾಗಿದೆ ಮತ್ತು ಅವರ ವೇತನ ಮತ್ತು ಭತ್ಯೆಗಳನ್ನು ನಿಯಮಗಳ ಅಡಿಯಲ್ಲಿ ಅನುಮತಿಸುವ ಜೀವನಾಧಾರ ಭತ್ಯೆಗೆ ನಿರ್ಬಂಧಿಸಲಾಗಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications