ಮೋದಿ ಪ್ರಮಾಣ ವಚನ ಸ್ವೀಕಾರಕ್ಕೆ ತಮಿಳು 'ಅಮ್ಮ'
ಚೆನ್ನೈ, ಮೇ. 19 : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಿಳುನಾಡಿನ 'ಅಮ್ಮ' ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಭಾಗವಹಿಸುವ ಸಾಧ್ಯತೆಗಳಿವೆ ಎಂಬ ಸುದ್ದಿ ಬಂದಿದೆ. ತಮಿಳುನಾಡಿನ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ನರೇಂದ್ರ ಮೋದಿ ಅವರು ಭರವಸೆ ನೀಡಿದ ಮೇಲೆ ಈ ಬೆಳವಣಿಗೆ ಕಂಡು ಬಂದಿದೆ.
ನರೇಂದ್ರ ಮೋದಿ ಅವರು ಭಾನುವಾರ ಜಯಲಲಿತಾ ಅವರಿಗೆ ಫೋನ್ ಕರೆ ಮಾಡಿ ತಮಿಳುನಾಡಿನಲ್ಲಿ ಎಐಎಡಿಎಂಕೆ ಭರ್ಜರಿ ಜಯಕ್ಕೆ ಶುಭ ಹಾರೈಸಿದರು. ಜಯಲಲಿತಾ ಅವರು ಕೂಡಾ ಬಿಜೆಪಿ ವಿಜಯಕ್ಕೆ ಶುಭ ಕೋರಿದ್ದರು. ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಲ್ಲಿ 37 ಕ್ಷೇತ್ರಗಳಲ್ಲಿ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಜಯಭೇರಿ ಬಾರಿಸಿದೆ. ಉಳಿದ ಎರಡು ಸೀಟುಗಳ ಪೈಕಿ ಭಾರತೀಯ ಜನತಾ ಪಾರ್ಟಿ ಒಂದು, ಪಾತ್ತಾಲಿ ಮಕ್ಕಳ್ ಕಚ್ಚಿ ಒಂದು ಸೀಟು ಗೆದ್ದಿದೆ.

ಇತ್ತ ರಾಜ್ಯಸಭೆಯಲ್ಲೂ ಎನ್ ಡಿಎಗೆ ಜಯಲಲಿತಾ ಬೆಂಬಲ ಬೇಕಾಗುತ್ತದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾತಾಂತ್ರಿಕ ಒಕ್ಕೂಟವು -NDA ರಾಜ್ಯಸಭೆ ಅತಂತ್ರ ಸ್ಥಿತಿಯಲ್ಲಿದೆ. ಪ್ರಸ್ತುತ ಎನ್ ಡಿಎ 62 ಸ್ಥಾನಗಳನ್ನು ಹೊಂದಿದೆ. ಆದರೆ ಬಹುಮತಕ್ಕೆ ಅಗತ್ಯವಿರುವುದು 121 ಸ್ಥಾನಗಳು. ಗರಿಷ್ಠ 245 ಸದಸ್ಯರನ್ನೊಳಗೊಂಡ ರಾಜ್ಯಸಭೆಯಲ್ಲಿ ಪಕ್ಷಗಳ ಬಲಾಬಲದ ಲೆಕ್ಕಾಚಾರ ಇಲ್ಲಿ ಓದಿ.
ರಾಜ್ಯಸಭೆಯಲ್ಲಿ ಎಐಎಡಿಎಂಕೆ 10 ಸಂಸದರು, ಟಿಎಂಸಿ 12,ಬಿಜೆಡಿ 6, ಬಿಎಸ್ ಪಿ14, ಜೆಡಿಯು ಹಾಗೂ ಸಮಾಜವಾದಿ ಪಕ್ಷ 9 ಸ್ಥಾನಗಳನ್ನು ಹೊಂದಿದೆ. ಈ ಪೈಕಿ ಎಐಎಡಿಎಂಕೆ ಹಾಗೂ ಬಿಜೆಡಿ ಮಾತ್ರ ಬಿಜೆಪಿ ಪರ ನಿಲ್ಲಬಲ್ಲ ಪಕ್ಷಗಳಾಗಿವೆ. ಅದೂ ಕೂಡಾ ಕೆಲವು ಷರತ್ತುಗಳಿಗೆ ಎನ್ಡಿಎ ಒಪ್ಪಿದರೆ ಮಾತ್ರ.
ಮಮತಾ-ಜಯಾ ಜೋಡಿ: ಇನ್ನೊಂದು ಮೂಲಗಳ ಪ್ರಕಾರ ಎಐಎಡಿಎಂಕೆ, ಟಿಎಂಸಿ ಪಕ್ಷಗಳು ಮೈತ್ರಿ ಕೂಟ ರಚಿಸಿಕೊಂಡು ವಿಪಕ್ಷ ನಾಯಕನ ಸ್ಥಾನ ಪಡೆಯಲು ಯತ್ನಿಸುತ್ತಿವೆ ಎಂಬ ಸುದ್ದಿ ಬಂದಿದೆ. ಎರಡು ಪಕ್ಷಗಳ ಸಂಖ್ಯಾ ಬಲ(71) ಕಾಂಗ್ರೆಸ್ಸಿನ 44 ಮೀರುತ್ತದೆ. ಆದರೆ, ಈ ಆಯ್ಕೆಗೆ ಒಪ್ಪಿಗೆ ಸಿಗುವುದು ಮುಂದಿನ ಹೊಸ ಸ್ಪೀಕರ್ ಅವರಿಂದ ಎಂಬುದನ್ನು ಮರೆಯುವಂತಿಲ್ಲ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications