'ಶಾಸಕರೇ, ಸಂಸದರೇ ನಿಮ್ಮ ಬ್ಯಾಂಕ್ ವಿವರ ಅಮಿತ್ ಶಾಗೆ ನೀಡಿ'
ಬಿಜೆಪಿಯ ಎಲ್ಲಾ ಜನಪ್ರತಿನಿಧಿಗಳಿಗೆ(ಶಾಸಕ, ಸಂಸದ..ಇತ್ಯಾದಿ) ನವೆಂಬರ್ 8ರಿಂದ ಡಿಸೆಂಬರ್ 31ರ ತನಕದ ಬ್ಯಾಂಕ್ ವ್ಯವಹಾರದ ವಿವರಗಳನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ನವದೆಹಲಿ, ನವೆಂಬರ್ 29: ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1000 ರೂಪಾಯಿ ನೋಟುಗಳ ಬಳಕೆ ನಿಷೇಧಿಸುವ ಮೂಲಕ ಕಪ್ಪು ಹಣ ತಡೆಗಟ್ಟಲು ಕ್ರಮ ಕೈಗೊಂಡಿದ್ದೇನೋ ಸರಿ. ಆದರೆ, ಚುನಾವಣೆಗಳಲ್ಲಿ ಯಥೇಚ್ಛವಾಗಿ ಕಪ್ಪು ಹಣ ಬಳಕೆಯಾಗುತ್ತದೆ, ಜನಪ್ರತಿನಿಧಿಗಳೇ ಬಳಸುತ್ತಾರೆ ಎಂಬ ಮಾತಿಗೆ ಮೋದಿ ಮಂಗಳವಾರ ತಕ್ಕ ಉತ್ತರ ನೀಡಿದ್ದಾರೆ.
ಬಿಜೆಪಿಯ ಎಲ್ಲಾ ಜನಪ್ರತಿನಿಧಿಗಳಿಗೆ(ಶಾಸಕ, ಸಂಸದ..ಇತ್ಯಾದಿ) ನವೆಂಬರ್ 8ರಿಂದ ಡಿಸೆಂಬರ್ 31ರ ತನಕದ ಬ್ಯಾಂಕ್ ವ್ಯವಹಾರದ ವಿವರಗಳನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. 'ನುಡಿದಂತೆ ನಡೆಯಬೇಕು' ಹೀಗಾಗಿ ಬಿಜೆಪಿಯ ಜನಪ್ರತಿನಿಧಿಗಳ ಬ್ಯಾಂಕ್ ಬ್ಯಾಲೆನ್ಸ್ ವಿವರಗಳನ್ನು ಪ್ರಕಟಿಸಲು ಮೋದಿ ಬಯಸಿದ್ದಾರೆ ಎಂದು ತಿಳಿದು ಬಂದಿದೆ.[ಕಪ್ಪುಹಣ ಘೋಷಿಸಿದಲ್ಲಿ ಶೇ50ರಷ್ಟು ಇಲ್ಲದಿದ್ದರೆ ಶೇ85ರಷ್ಟು ತೆರಿಗೆ]

ಸದನದಲ್ಲಿ ಮೋದಿ ಮಾತನಾಡುತ್ತಾರೆ: ಅಪನಗದೀಕರಣದ ಬಗ್ಗೆ ಸೂಕ್ತ ಸಮಯದಲ್ಲಿ ಮೋದಿ ಅವರು ಉಭಯ ಸದನಗಳಲ್ಲೂ ಮಾತನಾಡಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಹೇಳಿದ್ದಾರೆ.
ಸೋಮವಾರ ಘೋಷಣೆಯಾದ ಸ್ವಯಂಪ್ರೇರಿತ ಕಪ್ಪುಹಣ ಅಥವಾ ಅಘೋಷಿತ ಆಸ್ತಿ ಘೋಷಣೆಯ ಮೂಲಕ ಸಿಗುವ ತೆರಿಗೆ ಹಣವನ್ನು ಬಡವರ ಕಲ್ಯಾಣ ಯೋಜನೆಗಳಿಗೆ ಬಳಸಲಾಗುವುದು ಎಂದು ಅನಂತಕುಮಾರ್ ಹೇಳಿದರು.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications