ಮೋದಿ 2.0 ಕ್ಯಾಬಿನೆಟ್ ವಿಸ್ತರಣೆ ಆಹ್ವಾನ ಪತ್ರಿಕೆ, ಸಂಭಾವ್ಯರ ಪಟ್ಟಿ
ನವದೆಹಲಿ, ಜುಲೈ 7: ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಎನ್ ಡಿಎ 2.0 ಸರ್ಕಾರದ ಸಚಿವ ಸಂಪುಟ ಪುನರ್ ರಚನೆ/ವಿಸ್ತರಣೆ ಇಂದು ಸಂಜೆ 6 ಗಂಟೆಗೆ ನಡೆಯಲಿದೆ. ಈ ಕುರಿತಂತೆ ವಿಶೇಷ ಆಹ್ವಾನ ಪತ್ರಿಕೆ ಪ್ರಕಟಿಸಲಾಗಿದೆ. ಜೊತೆಗೆ ಸಂಭಾವ್ಯರ ಪಟ್ಟಿ ಕುತೂಹಲ ಕೆರಳಿಸಿದೆ.
ನಂ.7, ಲೋಕ್ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ಉನ್ನತಮಟ್ಟದ ಸಭೆಯಲ್ಲಿ ಹಾಲಿ ಸಚಿವರ ಮೌಲ್ಯಮಾಪನ ನಡೆಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹಾಗೂ ಪ್ರಧಾನಿ ಮೋದಿ ಅಂತಿಮ ಪಟ್ಟಿ ಸಿದ್ಧಪಡಿಸಿದ್ದಾರೆ. ಆದರೆ ಇಂದು ಬೆಳಗ್ಗೆ ನಿಗದಿಯಾಗಿದ್ದ ಸಚಿವರ ಸಮೂಹ(CCEA) ಹಾಗೂ ಸಚಿವ ಸಂಪುಟ ಸಭೆ ರದ್ದಾಗಿದ್ದು ಏಕೆ ಎಂಬುದು ಮಾತ್ರ ಇನ್ನೂ ಬಹಿರಂಗವಾಗಿಲ್ಲ. ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್ ಸೇರಿದಂತೆ ಐದು ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸಬರ ಆಯ್ಕೆ ಮಾಡಲಾಗಿದೆ.
ಸಂಭಾವ್ಯ ಪಟ್ಟಿಯಲ್ಲಿರುವವರ ಪೈಕಿ 13 ಮಂದಿ ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಸ್ಥಾನ ಖಚಿತಪಡಿಸಿಕೊಂಡಿರುವವರ ಹೆಸರು ಹೀಗಿದೆ:
ಜ್ಯೋತಿರಾದಿಯಾ ಸಿಂಧಿಯಾ, ಸರ್ಬಾನಂದ್ ಸೋನೊವಾಲ್, ಪಶುಪತಿ ಪರಾಸ್, ಅನುಪ್ರಿಯ ಪಟೇಲ್, ಪಂಕಜ್ ಚೌಧುರಿ, ರೀತಾ ಬಹುಗುಣ ಜೋಶಿ, ವರುಣ್ ಗಾಂಧಿ, ಆರ್ ಸಿ ಪಿ ಸಿಂಗ್, ರಾಹುಲ್ ಕಸ್ವಾನ್ ಹಾಗೂ ಸಿಪಿ ಜೋಶಿ ದೆಹಲಿಯಲ್ಲಿದ್ದಾರೆ. ನಾರಾಯಣ ರಾಣೆ, ರಾಮಶಂಕರ್ ಕತಾರಿಯಾ ಅಲ್ಲದೆ ಸಕಲ್ ದೀಪ್ ರಾಜ್ ಭರ್, ರಂಜನ್ ಸಿಂಗ್ ರಾಜ್ ಕುಮಾರ್, ಪಂಕಜ್ ಚೌಧುರಿ ಹೆಸರು ಕೇಳಿ ಬಂದಿವೆ.

ಕರ್ನಾಟಕದಿಂದ ಯಾರು?: ಚಿತ್ರದುರ್ಗದ ಸಂಸದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸಂಪುಟ ಸೇರುವುದು ಬಹುತೇಕ ಅಂತಿಮ ಎನ್ನಲಾಗಿದೆ. ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಕೂಡ ಸಂಪುಟ ಸೇರುವ ಸಾಧ್ಯತೆಯಿದೆ.
ಸಂಪುಟ ವಿಸ್ತರಣೆ ಬಳಿಕ ಹಾಲಿ ಸಂಪುಟದ ಗಾತ್ರ 60 ರಿಂದ 79ಕ್ಕೇರಲಿದೆ. ಈಗ 21 ಕ್ಯಾಬಿನೆಟ್ ದರ್ಜೆ ಸಚಿವರು, 9 ರಾಜ್ಯ ಸಚಿವರು(ಸ್ವತಂತ್ರ ಖಾತೆ) ಹಾಗೂ 29 ರಾಜ್ಯ ಸಚಿವರಿದ್ದಾರೆ. 81 ಸ್ಥಾನಗಳನ್ನು ಹೊಂದಬಹುದಾಗಿದೆ. ಇಬ್ಬರು ಸಚಿವರ ನಿಧನ, ಮಿತ್ರಪಕ್ಷಗಳಾಗಿದ್ದ ಅಕಾಲಿದಳ, ಶಿವಸೇನೆ ಮೈತ್ರಿ ಕಳೆದುಕೊಂಡಿದ್ದರಿಂದ ಉಂಟಾಗಿರುವ ಖಾಲಿ ಸ್ಥಾನ ಸೇರಿಸಿ 28 ಸ್ಥಾನಗಳನ್ನು ತುಂಬಬಹುದಾಗಿದೆ. ಜೊತೆಗೆ ಪ್ರಕಾಶ್ ಜಾವಡೇಕರ್, ನರೇಂದ್ರ ಸಿಂಗ್ ತೋಮರ್, ಪಿಯೂಶ್ ಗೋಯೆಲ್, ಹರ್ದೀಪ್ ಸಿಂಗ್ ಪುರಿ ನಿಭಾಯಿಸುತ್ತಿರುವ ಹೆಚ್ಚುವರಿ ಖಾತೆಗಳನ್ನು ಮೋದಿ ಅವರು ಹೊಸಬರಿಗೆ ಹಂಚಬೇಕಾಗಿದೆ
ಆಹ್ವಾನ ಪತ್ರಿಕೆ: ಕೇಂದ್ರ ಮಂತ್ರಿ ಪರಿಷತ್ ಸೇರಲಿರುವ ಮಂತ್ರಿಗಳ ಶಪಥ ಗ್ರಹಣ ಸಮಾರೋಹ ಸಮಾರಂಭವು ರಾಷ್ಟ್ರಪತಿ ಭವನದಲ್ಲಿ ಬುಧವಾರ ಆಷಾಢ 16, 1943ನೇ ಶಖೆ(ಜುಲೈ 7, 2021) ಸಂಜೆ 6 ಗಂಟೆಗೆ ನಡೆಯಲಿದೆ. ಯಾವ ರೀತಿ ಪೋಷಾಕು ಧರಿಸಬೇಕು ಎಂಬುದನ್ನು ಕೆಳಗೆ ಉಲ್ಲೇಖಿಸಲಾಗಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications