ಮೋದಿ 2.0 ಕ್ಯಾಬಿನೆಟ್ ವಿಸ್ತರಣೆ ಆಹ್ವಾನ ಪತ್ರಿಕೆ, ಸಂಭಾವ್ಯರ ಪಟ್ಟಿ
ನವದೆಹಲಿ, ಜುಲೈ 7: ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಎನ್ ಡಿಎ 2.0 ಸರ್ಕಾರದ ಸಚಿವ ಸಂಪುಟ ಪುನರ್ ರಚನೆ/ವಿಸ್ತರಣೆ ಇಂದು ಸಂಜೆ 6 ಗಂಟೆಗೆ ನಡೆಯಲಿದೆ. ಈ ಕುರಿತಂತೆ ವಿಶೇಷ ಆಹ್ವಾನ ಪತ್ರಿಕೆ ಪ್ರಕಟಿಸಲಾಗಿದೆ. ಜೊತೆಗೆ ಸಂಭಾವ್ಯರ ಪಟ್ಟಿ ಕುತೂಹಲ ಕೆರಳಿಸಿದೆ.
ನಂ.7, ಲೋಕ್ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ಉನ್ನತಮಟ್ಟದ ಸಭೆಯಲ್ಲಿ ಹಾಲಿ ಸಚಿವರ ಮೌಲ್ಯಮಾಪನ ನಡೆಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹಾಗೂ ಪ್ರಧಾನಿ ಮೋದಿ ಅಂತಿಮ ಪಟ್ಟಿ ಸಿದ್ಧಪಡಿಸಿದ್ದಾರೆ. ಆದರೆ ಇಂದು ಬೆಳಗ್ಗೆ ನಿಗದಿಯಾಗಿದ್ದ ಸಚಿವರ ಸಮೂಹ(CCEA) ಹಾಗೂ ಸಚಿವ ಸಂಪುಟ ಸಭೆ ರದ್ದಾಗಿದ್ದು ಏಕೆ ಎಂಬುದು ಮಾತ್ರ ಇನ್ನೂ ಬಹಿರಂಗವಾಗಿಲ್ಲ. ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್ ಸೇರಿದಂತೆ ಐದು ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸಬರ ಆಯ್ಕೆ ಮಾಡಲಾಗಿದೆ.
ಸಂಭಾವ್ಯ ಪಟ್ಟಿಯಲ್ಲಿರುವವರ ಪೈಕಿ 13 ಮಂದಿ ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಸ್ಥಾನ ಖಚಿತಪಡಿಸಿಕೊಂಡಿರುವವರ ಹೆಸರು ಹೀಗಿದೆ:
ಜ್ಯೋತಿರಾದಿಯಾ ಸಿಂಧಿಯಾ, ಸರ್ಬಾನಂದ್ ಸೋನೊವಾಲ್, ಪಶುಪತಿ ಪರಾಸ್, ಅನುಪ್ರಿಯ ಪಟೇಲ್, ಪಂಕಜ್ ಚೌಧುರಿ, ರೀತಾ ಬಹುಗುಣ ಜೋಶಿ, ವರುಣ್ ಗಾಂಧಿ, ಆರ್ ಸಿ ಪಿ ಸಿಂಗ್, ರಾಹುಲ್ ಕಸ್ವಾನ್ ಹಾಗೂ ಸಿಪಿ ಜೋಶಿ ದೆಹಲಿಯಲ್ಲಿದ್ದಾರೆ. ನಾರಾಯಣ ರಾಣೆ, ರಾಮಶಂಕರ್ ಕತಾರಿಯಾ ಅಲ್ಲದೆ ಸಕಲ್ ದೀಪ್ ರಾಜ್ ಭರ್, ರಂಜನ್ ಸಿಂಗ್ ರಾಜ್ ಕುಮಾರ್, ಪಂಕಜ್ ಚೌಧುರಿ ಹೆಸರು ಕೇಳಿ ಬಂದಿವೆ.

ಕರ್ನಾಟಕದಿಂದ ಯಾರು?: ಚಿತ್ರದುರ್ಗದ ಸಂಸದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸಂಪುಟ ಸೇರುವುದು ಬಹುತೇಕ ಅಂತಿಮ ಎನ್ನಲಾಗಿದೆ. ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಕೂಡ ಸಂಪುಟ ಸೇರುವ ಸಾಧ್ಯತೆಯಿದೆ.
ಸಂಪುಟ ವಿಸ್ತರಣೆ ಬಳಿಕ ಹಾಲಿ ಸಂಪುಟದ ಗಾತ್ರ 60 ರಿಂದ 79ಕ್ಕೇರಲಿದೆ. ಈಗ 21 ಕ್ಯಾಬಿನೆಟ್ ದರ್ಜೆ ಸಚಿವರು, 9 ರಾಜ್ಯ ಸಚಿವರು(ಸ್ವತಂತ್ರ ಖಾತೆ) ಹಾಗೂ 29 ರಾಜ್ಯ ಸಚಿವರಿದ್ದಾರೆ. 81 ಸ್ಥಾನಗಳನ್ನು ಹೊಂದಬಹುದಾಗಿದೆ. ಇಬ್ಬರು ಸಚಿವರ ನಿಧನ, ಮಿತ್ರಪಕ್ಷಗಳಾಗಿದ್ದ ಅಕಾಲಿದಳ, ಶಿವಸೇನೆ ಮೈತ್ರಿ ಕಳೆದುಕೊಂಡಿದ್ದರಿಂದ ಉಂಟಾಗಿರುವ ಖಾಲಿ ಸ್ಥಾನ ಸೇರಿಸಿ 28 ಸ್ಥಾನಗಳನ್ನು ತುಂಬಬಹುದಾಗಿದೆ. ಜೊತೆಗೆ ಪ್ರಕಾಶ್ ಜಾವಡೇಕರ್, ನರೇಂದ್ರ ಸಿಂಗ್ ತೋಮರ್, ಪಿಯೂಶ್ ಗೋಯೆಲ್, ಹರ್ದೀಪ್ ಸಿಂಗ್ ಪುರಿ ನಿಭಾಯಿಸುತ್ತಿರುವ ಹೆಚ್ಚುವರಿ ಖಾತೆಗಳನ್ನು ಮೋದಿ ಅವರು ಹೊಸಬರಿಗೆ ಹಂಚಬೇಕಾಗಿದೆ
ಆಹ್ವಾನ ಪತ್ರಿಕೆ: ಕೇಂದ್ರ ಮಂತ್ರಿ ಪರಿಷತ್ ಸೇರಲಿರುವ ಮಂತ್ರಿಗಳ ಶಪಥ ಗ್ರಹಣ ಸಮಾರೋಹ ಸಮಾರಂಭವು ರಾಷ್ಟ್ರಪತಿ ಭವನದಲ್ಲಿ ಬುಧವಾರ ಆಷಾಢ 16, 1943ನೇ ಶಖೆ(ಜುಲೈ 7, 2021) ಸಂಜೆ 6 ಗಂಟೆಗೆ ನಡೆಯಲಿದೆ. ಯಾವ ರೀತಿ ಪೋಷಾಕು ಧರಿಸಬೇಕು ಎಂಬುದನ್ನು ಕೆಳಗೆ ಉಲ್ಲೇಖಿಸಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications