ಮೋದಿ ಸಂಪುಟ ವಿಸ್ತರಣೆಗೂ ಮುನ್ನ ರಾಜೀನಾಮೆ ಕೊಟ್ಟ ಸಚಿವರಿವರು
ನವದೆಹಲಿ, ಜುಲೈ 7: ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಎನ್ ಡಿಎ 2.0 ಸರ್ಕಾರದ ಸಚಿವ ಸಂಪುಟ ಪುನರ್ ರಚನೆ/ವಿಸ್ತರಣೆಗೂ ಮುನ್ನ ಪ್ರಮುಖ ಸಚಿವರುಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಮಂತ್ರಿ ಪರಿಷತ್ ಸೇರಲಿರುವ ಮಂತ್ರಿಗಳ ಶಪಥ ಗ್ರಹಣ ಸಮಾರೋಹ ಸಮಾರಂಭವು ರಾಷ್ಟ್ರಪತಿ ಭವನದಲ್ಲಿ ಬುಧವಾರ ಆಷಾಢ 16, 1943ನೇ ಶಖೆ(ಜುಲೈ 7, 2021) ಸಂಜೆ 6 ಗಂಟೆಗೆ ನಡೆಯಲಿದೆ. ಸಂಪುಟ ವಿಸ್ತರಣೆ ಬಳಿಕ ಹಾಲಿ ಸಂಪುಟದ ಗಾತ್ರ 60 ರಿಂದ 79ಕ್ಕೇರಲಿದೆ. ಈಗ 21 ಕ್ಯಾಬಿನೆಟ್ ದರ್ಜೆ ಸಚಿವರು, 9 ರಾಜ್ಯ ಸಚಿವರು(ಸ್ವತಂತ್ರ ಖಾತೆ) ಹಾಗೂ 29 ರಾಜ್ಯ ಸಚಿವರಿದ್ದಾರೆ. 81 ಸ್ಥಾನಗಳನ್ನು ಹೊಂದಬಹುದಾಗಿದೆ.
ಇಬ್ಬರು ಸಚಿವರ ನಿಧನ, ಮಿತ್ರಪಕ್ಷಗಳಾಗಿದ್ದ ಅಕಾಲಿದಳ, ಶಿವಸೇನೆ ಮೈತ್ರಿ ಕಳೆದುಕೊಂಡಿದ್ದರಿಂದ ಉಂಟಾಗಿರುವ ಖಾಲಿ ಸ್ಥಾನ ಸೇರಿಸಿ 28 ಸ್ಥಾನಗಳನ್ನು ತುಂಬಬಹುದಾಗಿದೆ. ಜೊತೆಗೆ ಪ್ರಕಾಶ್ ಜಾವಡೇಕರ್, ನರೇಂದ್ರ ಸಿಂಗ್ ತೋಮರ್, ಪಿಯೂಶ್ ಗೋಯೆಲ್, ಹರ್ದೀಪ್ ಸಿಂಗ್ ಪುರಿ ನಿಭಾಯಿಸುತ್ತಿರುವ ಹೆಚ್ಚುವರಿ ಖಾತೆಗಳನ್ನು ಮೋದಿ ಅವರು ಹೊಸಬರಿಗೆ ಹಂಚಬೇಕಾಗಿದೆ.

ರಾಜೀನಾಮೆ ನೀಡಿದ ಪ್ರಮುಖ ಕೇಂದ್ರ ಸಚಿವರು:
* ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್
* ಆರೋಗ್ಯ ಸಚಿವ ಡಾ. ಹರ್ಷ್ ವರ್ಧನ್.
* ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್.
* ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ
* ಮಹಿಳಾ ಮತ್ತು ಮಕ್ಕಳ ಖಾತೆ ರಾಜ್ಯ ಸಚಿವೆ ದೇಬಶ್ರೀ ಚೌಧುರಿ.
* ಕೇಂದ್ರ ಸಚಿವ ಸ್ಥಾನಕ್ಕೆ ಥಾವರಚಂದ್ ಗೆಹ್ಲೋಟ್ ರಾಜೀನಾಮೆ ಸಲ್ಲಿಸಿದ್ದಾರೆ.
* ಸಂಜಯ್ ಧೋತ್ರೆ, ರತನ್ ಲಾಲ್ ಕತಾರಿಯಾ ಕೂಡಾ ರಾಜೀನಾಮೆ ಸಲ್ಲಿಸಿದ್ದಾರೆ.
* ರಾವ್ ಸಾಹೇಬ್ ಧನ್ವೆ ಪಾಟೀಲ್, ಪ್ರತಾಪ್ ಚಂದ್ರ ಸಾರಂಗಿ, ಬಾಬೂಲ್ ಸುಪ್ರಿಯೋ ರಾಜೀನಾಮೆ ಸಲ್ಲಿಸಿದ್ದಾರೆ.
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಸ್ಥಾನಕ್ಕೆ ಅಶ್ವಿನಿ ಚೌಬೆ ರಾಜೀನಾಮೆ.
ಮೇಲ್ದರ್ಜೆಗೆ ಯಾರು?
ಹಾಲಿ ಸಚಿವ ಅನುರಾಗ್ ಠಾಕೂರ್, ಪುರುಷೋತ್ತಮ್ ರುಪಾಲಾ ಹಾಗೂ ಜಿ ಕಿಶಾನ್ ರೆಡ್ಡಿ, ಕಿರಣ್ ರಿಜಿಜು, ಹರ್ದೀಪ್ ಸಿಂಗ್ ಪುರಿ, ಮನುಷ್ ಮಾಂಡವ್ಯ ಹೆಚ್ಚುವರಿ ಜವಾಬ್ದಾರಿ ಪಡೆದುಕೊಳ್ಳುವ ಸಾಧ್ಯತೆಯಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications