ಬಯಸಿದಂತೆ ಸುರೇಶ್ ಪ್ರಭುಗೆ ರೈಲ್ವೆ ಖಾತೆಯಿಂದ ಮುಕ್ತಿ
ನವದೆಹಲಿ, ಸೆಪ್ಟೆಂಬರ್ 03 : ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಬಯಸಿದಂತೆ ರೈಲ್ವೆ ಖಾತೆಯಿಂದ ಅವರಿಗೆ ಮುಕ್ತಿ ನೀಡಲಾಗಿದೆ. ಪಿಯೂಷ್ ಗೋಯೆಲ್ ನೂತನ ರೈಲ್ವೆ ಸಚಿವರಾಗಿ ನೇಮಕವಾಗಿದ್ದಾರೆ.
ಭಾನುವಾರ ರಾಷ್ಟ್ರಪತಿ ಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಿತು. 9 ಸಚಿವರು ಹೊಸದಾಗಿ ಸಂಪುಟ ಸೇರಿಕೊಂಡರು, ಹಲವು ಸಚಿವರ ಖಾತೆಗಳಲ್ಲಿ ಬದಲಾವಣೆ ಮಾಡಲಾಗಿದೆ. ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಪಿಯೂಷ್ ಗೋಯಲ್ ಹಾಗೂ ಮುಖ್ತರ್ ಅಬ್ಬಾಸ್ ನಖ್ವಿ ಅವರು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಬಡ್ತಿ ಪಡೆದರು.
Welcoming my long time dear friend,colleague @PiyushGoyal to @RailMinIndia.I offer all my help to him to make railways world class.all best
— Suresh Prabhu (@sureshpprabhu) September 3, 2017

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ರಕ್ಷಣಾ ಖಾತೆ ನೀಡಲಾಗಿದ್ದು, ಪಿಯೂಷ್ ಗೋಯೆಲ್ ನೂತನ ರೈಲ್ವೆ ಸಚಿವರಾಗಿ ನೇಮಕವಾಗಿದ್ದಾರೆ. ಸುರೇಶ್ ಪ್ರಭು ಅವರಿಗೆ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಹೊಣೆ ನೀಡಲಾಗಿದೆ.
ಸಚಿವ ಸಂಪುಟ ವಿಸ್ತರಣೆ ಬಳಿಕ ಸುರೇಶ್ ಪ್ರಭು ಅವರಿಗೆ ರೈಲ್ವೆ ಇಲಾಖೆಯಿಂದ ಮುಕ್ತಿ ನೀಡಲಾಗಿದೆ. ದೇಶದಲ್ಲಿ ನಡೆದ ಸರಣಿ ರೈಲು ಅಪಘಾತಗಳ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಸುರೇಶ್ ಪ್ರಭು ಬಯಸಿದ್ದರು. ಈ ಕುರಿತು ಅವರು ಟ್ವಿಟ್ ಮಾಡಿದ್ದರು. ಆದರೆ, ನರೇಂದ್ರ ಮೋದಿ ಅವರು ರಾಜೀನಾಮೆ ಅಂಗೀಕಾರ ಮಾಡಿರಲಿಲ್ಲ.
Thx to all passengers,customers,media,
— Suresh Prabhu (@sureshpprabhu) September 3, 2017
stakeholders,partners,MPs,state govts,public reps,social org,employees,for unstinted support as MR
ಖಾತೆಗಳ ಮರು ಹಂಚಿಕೆ ಸಂದರ್ಭದಲ್ಲಿ ಸುರೇಶ್ ಪ್ರಭು ಅವರಿಗೆ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯನ್ನು ನೀಡಲಾಗಿದೆ. ಟ್ವಿಟರ್ ಮೂಲಕ ಇಷ್ಟು ದಿನಗಳ ಕಾಲ ಸಹಕಾರ ನೀಡಿದ ಎಲ್ಲರಿಗೂ ಸುರೇಶ್ ಪ್ರಭು ಧನ್ಯವಾದ ಅರ್ಪಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications