ಜನತೆಯನ್ನು ವಂಚಿಸಿದ ಮೋದಿಗೆ ಶಿಕ್ಷೆಯಾಗಬೇಕು: ರಾಮ್
ಪಾಟ್ನಾ, ಅ.05: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಜನತೆಯನ್ನು ವಂಚಿಸಿದ್ದಾರೆ, ಅವರಿಗೆ ಶಿಕ್ಷೆಯಾಗಬೇಕು ಎಂದು ಹಿರಿಯ ನ್ಯಾಯವಾದಿ, ವಾಜಪೇಯಿ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದ ರಾಮ್ ಜೇಠ್ಮಲಾನಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಆತ ಸೋಲು ಅನುಭವಿಸಬೇಕು, ಸರಿಯಾದ ಶಿಕ್ಷೆಯಾಗಬೇಕು. ನಾನು ಯಾರ ಪರವಾಗಿಯಾದರೂ ಮತ ಹಾಕುವುದಿದ್ದರೆ, ಜೆಡಿಯು ನಾಯಕ ನಿತೀಶ್ ಕುಮಾರ್ ಸರಕಾರದ ಪರವಾಗಿ ಮತ ಹಾಕುತ್ತೇನೆ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಮಾಜಿ ರಾಜ್ಯಸಭಾ ಸದಸ್ಯ ಜೇಠ್ಮಲಾನಿ ಹೇಳಿದರು.[ದಾವೂದ್ ಶರಣಾಗತಿ ತಪ್ಪಿಸಿದ್ದು ಪವಾರ್: ಜೇಠ್ಮಲಾನಿ]

ಒಂದು ಕಾಲದಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿಯನ್ನು ಬಲವಾಗಿ ಬೆಂಬಲಿಸಿದ್ದ ಉಚ್ಚಾಟಿತ ಬಿಜೆಪಿ ಸಂಸದ, ಜಾಗೃತದಳದ ಮುಖ್ಯ ಕಮಿಶನರ್ ಆಗಿ ಸಿಬಿಡಿಟಿಯ ಮಾಜಿ ಅಧ್ಯಕ್ಷ ಕೆ.ವಿ. ಚೌಧರಿಯನ್ನು ಸರಕಾರ ನೇಮಿಸಿದ್ದನ್ನು ಜೇಠ್ಮಲಾನಿ ಬಲವಾಗಿ ವಿರೋಧಿಸಿದ್ದರು. [ದೇಶದಲ್ಲಿ 1 ಲಕ್ಷ ಕೋಟಿ ಕಪ್ಪು ಹಣ ಪತ್ತೆ]
ಏಕ ಶ್ರೇಣಿ ಏಕ ಪಿಂಚಣಿ ಯೋಜನೆ ಜಾರಿಗಾಗಿ ಕಾನೂನು ಹೋರಾಟ ನಡೆಸಿದ ರಾಮ್ ಜೇಠ್ಮಲಾನಿ ಅವರು ಮೋದಿ ಬಗ್ಗೆ ಮಾತನಾಡುತ್ತಾ, ಆತನನ್ನು ಭಾರತದ ಸಂಕಷ್ಟ ನಿವಾರಣೆಗೆ ದೇವರು ಕಳಿಸಿದ ಪ್ರತಿನಿಧಿ ಎಂದು ಕೊಂಡು ನಾನು ಮೋಸ ಹೋದೆ ಎಂದಿದ್ದಾರೆ.
ಕಪ್ಪು ಹಣ ಹಾಗೂ ವಿದೇಶಿ ತೆರಿಗೆ ಅವ್ಯವಹಾರ ಹತ್ತಿಕ್ಕುವಲ್ಲಿ ಯುಪಿಎ ಹಾಗೂ ಎನ್ ಡಿಎ ಸರ್ಕಾರಗಳೆರಡು ವಿಫಲವಾಗಿವೆ. ಇದಕ್ಕೆ ಪಿ ಚಿದಂಬರಂ ಹಾಗೂ ಅರುಣ್ ಜೇಟ್ಲಿ ಇಬ್ಬರು ಹೊಣೆಗಾರರು, ಕಾಳಧನ ಹೊಂದಿರುವ ಖಾತೆದಾರರ ಹೆಸರು ಬಹಿರಂಗ ಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದರು. (ಪಿಟಿಐ)
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications