ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಂಕನ್ನರೇ ಹೆದರಬೇಡಿ ನಿಮ್ಮೊಂದಿಗೆ ಭಾರತವಿದೆ: ಮೋದಿ

ಶ್ರೀಲಂಕಾದಲ್ಲಿ ಭಾರಿ ಮಳೆ, ಭೂಕುಸಿತದಿಂದಾಗಿ 100ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಪ್ರವಾಹದಲ್ಲಿ 500ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿವೆ, 60 ಸಾವಿರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ

By Mahesh
|
Google Oneindia Kannada News

ನವದೆಹಲಿ, ಮೇ 27: ಶ್ರೀಲಂಕಾದಲ್ಲಿ ಭಾರಿ ಮಳೆ, ಭೂಕುಸಿತದಿಂದಾಗಿ 100ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಪ್ರವಾಹದಲ್ಲಿ 500ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿವೆ, 60 ಸಾವಿರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆತಂಕದಲ್ಲಿರುವ ಲಂಕನ್ನರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಹಾಯಹಸ್ತ ಚಾಚಿ, ಅಭಯ ನೀಡಿದ್ದಾರೆ.

ಶ್ರೀಲಂಕಾ ವಿಪತ್ತು ನಿರ್ವಹಣಾ ಪಡೆ ಸತತ ಪರಿಶ್ರಮ ವಹಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಸಿದೆ.

Modi condoles loss of lives in Lankan floods

ನೈಸರ್ಗಿಕ ವಿಕೋಪಕ್ಕೆ ಸಿಲುಕಿ ಆಪಾರ ಪ್ರಮಾಣದ ಆಸ್ತಿ ಹಾಗೂ ಜೀವ ಹಾನಿ ಕಂಡಿರುವ ದ್ವೀಪ ರಾಷ್ಟ್ರ ಶ್ರೀಲಂಕಾದ ಪರಿಸ್ಥಿತಿಗೆ ಪ್ರಧಾನಿ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗಾಗಿ ಭಾರತ ಸರ್ಕಾರ ನೌಕಾ ಪಡೆ ಹಾಗೂ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ನೌಕಾ ಪಡೆಯೊಂದಿಗೆ ವೈದ್ಯಕೀಯ ಸಾಮಾಗ್ರಿಗಳು, ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್ ವ್ಯವಸ್ಥೆ ಕೂಡಾ ಒದಗಿಸಲಾಗಿದ್ದು, ಶ್ರೀಲಂಕಾದ ಸಹೋದರ- ಸಹೋದರಿಯರ ನೆರವಿಗೆ ನಾವ್ ಧಾವಿಸುತ್ತೇವೆ ಎಂದಿದ್ದಾರೆ.(ಪಿಟಿಐ)

English summary
With floods and landslides causing widespread devastation in Sri Lanka, Prime Minister Narendra Modi has said India stands by the people of the island nation and that ships are being rushed with relief material.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X