ಆರ್ಬಿಐ ಬೋರ್ಡ್ ಸಭೆ ನಡೆದಿರುವಾಗ ರಾಹುಲ್ ಗಾಂಧಿ ಮಾತಿನ ಕಿಡಿ
ನವದೆಹಲಿ, ನವೆಂಬರ್ 19 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಊರ್ಜಿತ್ ಪಟೇಲ್ ಮತ್ತು ಅವರ ತಂಡಕ್ಕೆ ಗಟ್ಟಿ ಗುಂಡಿಗೆಯಿದೆ ಎಂದು ತಿಳಿದಿದ್ದೇನೆ. ಅವರು ನರೇಂದ್ರ ಮೋದಿಯವರಿಗೆ ಅವರ ಸ್ಥಾನ ಯಾವುದೆಂದು ತಿಳಿಸಲಿದ್ದಾರೆ ಎಂದು ರಾಹುಲ್ ಗಾಂಧಿ ಅವರು ಕೆಣಕುವಂಥ ಹೇಳಿಕೆ ನೀಡಿದ್ದಾರೆ.
ಸೆಂಟ್ರಲ್ ಬ್ಯಾಂಕ್ ನ ಬೋರ್ಡ್ ಮೀಟಿಂಗ್ ನಡೆಯುತ್ತಿರುವ ಸಂದರ್ಭದಲ್ಲಿ, ಮತ್ತೆ ಕೇಂದ್ರದ ಕಾಲೆಳೆದಿರುವ ರಾಹುಲ್ ಗಾಂಧಿ ಅವರು, ನರೇಂದ್ರ ಮೋದಿ ಅವರು ಸಹೋದ್ಯೋಗಿಗಳು ತಮ್ಮ ದಾರಿಗೆ ಬರುವ ಎಲ್ಲ ಸಂಸ್ಥೆಗಳನ್ನು ಸರ್ವನಾಶ ಮಾಡುತ್ತಿದ್ದಾರೆ. ಇವತ್ತು ಬೋರ್ಡ್ ನಲ್ಲಿರುವ ತಮ್ಮ ಸೂತ್ರದ ಗೊಂಬೆಗಳ ಸಹಾಯದಿಂದ ಆರ್ಬಿಐಯನ್ನೇ ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಕೆಂಡ ಕಾರಿದ್ದಾರೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಯನಿರ್ವಹಣೆಯಲ್ಲಿ ಕೇಂದ್ರ ಸರಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಸೆಂಟ್ರಲ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಮತ್ತು ಡೆಪ್ಯುಟಿ ಗವರ್ನರ್ ವಿರಲ್ ಆಚಾರ್ಯ ಅವರು ಬಹಿರಂಗವಾಗಿಯೇ ತೊಡೆ ತಟ್ಟಿರುವುದರಿಂದ ಉದ್ಭವವಾಗಿರುವ ಬಿಕ್ಕಟ್ಟನ್ನು ಶಮನ ಮಾಡಲು ಅತ್ಯಂತ ಮಹತ್ವಪೂರ್ಣವಾದ ಸಭೆ ಸೋಮವಾರ ನಡೆಯುತ್ತಿದೆ.

ಬೋರ್ಡ್ ನಲ್ಲಿ ಒಟ್ಟು 18 ಸದಸ್ಯರಿದ್ದು, ಸರಕಾರಿ ಆಡಳಿತ ಮಂಡಳಿಯಿಂದ ಐವರು, ಇಬ್ಬರು ಕೇಂದ್ರ ಹಣಕಾಸು ಸಚಿವಾಲಯದ ಅಧಿಕಾರಿಗಳು, ಇಬ್ಬರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಸಂಪರ್ಕ ಇರುವವರು, ವ್ಯಾಪಾರ ಹಿನ್ನೆಲೆಯಿರುವ ನಾಲ್ವರು ಮತ್ತು ಉಳಿದ ಐವರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಊರ್ಜಿತ್ ಪಟೇಲ್ ಮತ್ತು ನಾಲ್ವರು ಡೆಪ್ಯುಟಿ ಗವರ್ನರ್.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಯನಿರ್ವಹಣೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಆದರೆ, ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಸಣ್ಣ ಉದ್ದಿಮೆದಾರರಿಗೆ ಅನುಕೂಲವಾಗಲೆಂದು ಪಾಲಿಸಿಯಲ್ಲಿ ಬದಲಾವಣೆ ಮಾಡಬೇಕೆಂದು ಕೇಂದ್ರ ಆಗ್ರಹಿಸಿತ್ತು. ಇದಕ್ಕೆ ಪ್ರತಿಯಾಗಿ, ಸೆಂಟ್ರಲ್ ಬ್ಯಾಂಕ್ ನಲ್ಲಿ ಕೇಂದ್ರ ಹಸ್ತಕ್ಷೇಪ ಮಾಡಿದರೆ ದೇಶದ ಆರ್ಥಿಕ ವ್ಯವಸ್ಥೆಗೆ ಬೆಂಕಿ ಬೀಳುತ್ತದೆ ಎಂದು ವಿರಲ್ ಆಚಾರ್ಯ ಅವರು ಬಹಿರಂಗವಾಗಿ ಗುಡುಗಿದ್ದರು.
ಈ ನಿಟ್ಟಿನಲ್ಲಿ ಈ ಸಭೆ ಭಾರೀ ಮಹತ್ವ ಪಡೆದುಕೊಂಡಿದೆ. ಷೇರು ಮಾರುಕಟ್ಟೆ ಮತ್ತು ವಿಶ್ಲೇಷಕರು ಕೂಡ ಈ ಸಭೆಯ ತೀರ್ಮಾನವನ್ನು ಅತ್ಯಂತ ಜಾಗರೂಕತೆಯಿಂದ ಎದುರು ನೋಡುತ್ತಿದ್ದಾರೆ. ಲೋಕಸಭೆ ಚುನಾವಣೆ ಇನ್ನು ಕೆಲವೇ ತಿಂಗಳು ಇರುವುದರಿಂದ ಕೇಂದ್ರ ಸರಕಾರ ತನ್ನ ಬೇಡಿಕೆಗಳಿಂದ ಹಿಂದೆ ಸರಿಯಲಿದೆ ಮತ್ತು ತನ್ನ ಹಿಡಿತವನ್ನು ಸಡಿಸಲಿದೆ ಎಂದೂ ಹೇಳಲಾಗುತ್ತಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications