ಹಜ್ ಯಾತ್ರಾರ್ಥಿಗಳಿಗೆ ಸಬ್ಸಿಡಿ ರದ್ದು ಮಾಡಿದ ಸರ್ಕಾರ
ನವದೆಹಲಿ, ಜನವರಿ 16: ಪವಿತ್ರ ಹಜ್ ಯಾತ್ರೆಗೆ ತೆರಳುವ ಮುಸ್ಲಿಮರಿಗೆ ಇತ್ತೀಚೆಗೆ ಸಿಹಿ ಸುದ್ದಿ ನೀಡಿದ್ದ ನರೇಂದ್ರ ಮೋದಿ ಅವರ ಸರ್ಕಾರವು ಇಂದು ಕಹಿ ಸುದ್ದಿಯೊಂದನ್ನು ನೀಡಿದೆ. ಹಜ್ ಯಾತ್ರಾರ್ಥಿಗಳಿಗೆ ಸಬ್ಸಿಡಿ ರದ್ದು ಮಾಡಲಾಗಿದೆ.
ಇದೇ ಸಬ್ಸಿಡಿ ಮೊತ್ತವನ್ನು ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿನಿಯೋಗಿಸಲಾಗುವುದು ಎಂದು ಅಲ್ಪಸಂಖ್ಯಾತ ಖಾತೆ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದರು.
ಈ ವರ್ಷದಿಂದಲೇ ಹೊಸ ನಿಯಮ ಜಾರಿಯಾಗಲಿದೆ. ಇದು ಅಲ್ಪಸಂಖ್ಯಾತರ ಸಬಲೀಕರಣಕ್ಕಾಗಿ ಕೈಗೊಂಡಿರುವ ಕ್ರಮವಾಗಿದ್ದು, ಸ್ವಂತ ಖರ್ಚಿನಿಂದಲೇ ಮೆಕ್ಕಾಕ್ಕೆ ತೆರಳಬೇಕಾಗುತ್ತದೆ ಎಂದು ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತಿಳಿಸಿದರು.

ಭಾರತದಿಂದ ಪ್ರತಿ ವರ್ಷ ಹಜ್ ಯಾತ್ರೆಗೆ ತೆರಳುವ ಭಾರತೀಯರ ಸಂಖ್ಯಾ ಮಿತಿ ಏರಿಕೆ ಮಾಡಲಾಗಿತ್ತು. ಮನ್ ಕಿ ಬಾತ್ ನಲ್ಲಿ ಮೋದಿ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದರು. ಮಹಿಳೆಯರಿಗೆ ಹಜ್ ಯಾತ್ರೆ ಕೈಗೊಳ್ಳುವ ಅವಕಾಶವನ್ನು ಸರ್ಕಾರ ನೀಡಲು ಮುಂದಾಗಿದ್ದು, ಮುಸ್ಲಿಂ ಸಮುದಾಯಕ್ಕೆ ಸಂತಸ ತಂದಿತ್ತು.
5,000 ಹೆಚ್ಚುವರಿ ಹಜ್ ಯಾತ್ರಿಕರಿಗೆ ಮೆಕ್ಕಾಗೆ ಪ್ರಯಾಣ ಭಾಗ್ಯ ಒದಗಿಸಲು ಮುಂದಾಗಿರುವ ಭಾರತ ಸರ್ಕಾರದ ಕ್ರಮಕ್ಕೆ ಸೌದಿ ಅರೇಬಿಯಾ ಸರ್ಕಾರ ಅನುಮತಿ ನೀಡಿತ್ತು. ಹೀಗಾಗಿ, ಹಜ್ ಯಾತ್ರಾರ್ಥಿಗಳ ಕೋಟಾ ಈಗ 1,75,025ಕ್ಕೇರಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದರು.
2018ರಲ್ಲಿ ಹಜ್ ಯಾತ್ರೆಗಾಗಿ 3,55,000 ಅರ್ಜಿಗಳು ಬಂದಿವೆ. ಈ ಬಾರಿ ಭಾರತದಿಂದ 1,300 ಮಹಿಳೆಯರು ಮಹ್ರಾಮ್(ಪುರುಷರ ಸಂಗಾತಿಯ ನೆರವಿಲ್ಲದೆ) ಇಲ್ಲದೆ ಹಜ್ ಯಾತ್ರೆ ಕೈಗೊಳ್ಳುವ ಅವಕಾಶವೂ ಲಭಿಸಲಿದೆ. ಸಮುದ್ರಯಾನದ ಮೂಲಕ ಸೌದಿಗೆ ಪ್ರಯಾಣ ಭಾಗ್ಯ ನೀಡುವ ಬಗ್ಗೆ ಕೂಡಾ ಮಾತುಕತೆ ನಡೆಯುತ್ತಿದೆ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications