ಅಧಿಕಾರಿಗಳ ಪಂಚತಾರಾ ವಾಸಕ್ಕೆ ಕೇಂದ್ರದ ಬ್ರೇಕ್
ನವದೆಹಲಿ, ಅ. 30: ಇನ್ನು ಮುಂದೆ ಸರ್ಕಾರಿ ಅಧಿಕಾರಿಗಳು ಪಂಚತಾರಾ ಹೋಟೆಲ್ ಗಳಲ್ಲಿ ಉಳಿದುಕೊಂಡು, ಐಷಾರಾಮಿ ವಿಮಾನಯಾನ ಮಾಡುತ್ತ ಕಾಲ ದೂಡುವಂತಿಲ್ಲ.
ಕೇಂದ್ರ ಸರ್ಕಾರ ಅನಗತ್ಯ ಖರ್ಚು ವೆಚ್ಚ ತಡೆಗೆ ಗುರುವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಈ ಎಲ್ಲ ವೆಚ್ಚಗಳಿಗೆ ಬ್ರೇಕ್ ಹಾಕಿದೆ. ಶೇ.10 ಅನಗತ್ಯ ಖರ್ಚು ತಡೆಗೆ ಮುಂದಾಗಿದ್ದು ಹಣಕಾಸು ಸಚಿವಾಲಯ ಈ ಬಗ್ಗೆ ಆದೇಶ ಹೊರಡಿಸಿದೆ.[ಐದು ವರ್ಷದಲ್ಲೇ ಅತಿ ಕಡಿಮೆ ಹಣದುಬ್ಬರ ದಾಖಲು]

ಪಂಚತಾರಾ ಹೊಟೆಲ್ ಗಳಲ್ಲಿ ಉಳಿದುಕೊಂಡು ಮೀಟಿಂಗ್ ಮಾಡುವಂತಿಲ್ಲ. ಅಧಿಕಾರಿಗಳು ನಿರ್ದಿಷ್ಟ ಬಜೆಟ್ ಒಳಗೆ ತಮ್ಮ ಕೆಲಸ ಕಾರ್ಯ ಮುಗಿಸಬೇಕು. ಪ್ರಥಮ ದರ್ಜೆ ಬುಕಿಂಗ್ ಗೂ ಅವಕಾಶವಿಲ್ಲ ಎಂದು ಆದೇಶ ತಿಳಿಸಿದೆ.
ರಕ್ಷಣಾ ಕಾರ್ಯಕ್ಕೆ ಅಗತ್ಯವಿದ್ದರೆ ಮಾತ್ರ ಹೊಸ ವಾಹನಗಳನ್ನು ಖರೀದಿ ಮಾಡಬಹುದು. ಸಂಸದೀಯ ಆಡಳಿತ ಮತ್ತು ಸೆಕ್ಯೂರಿಟಿ ವಿಭಾಗಕ್ಕೆ ವಾಹನ ಖರೀದಿಗೆ ಅವಕಾಶವಿದೆ. ಆದರೆ ಕೆಲ ನಿಬಂಧನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಹಣಕಾಸು ಸಚಿವಾಲಯದ ಹೇಳಿಕೆ ತಿಳಿಸಿದೆ.[ಐದು ವರ್ಷದಲ್ಲೇ ಮೊದಲ ಬಾರಿ ಡಿಸೇಲ್ ದರ ಇಳಿಕೆ]
ಆರ್ಥಿಕ ಅಭಿವೃದ್ಧಿ ದರ ಹೆಚ್ಚಳ, ಸುರಕ್ಷತೆ ಮತ್ತು ಹಣದುಬ್ಬರ ತಡೆಗೆ ಇಂಥ ಕ್ರಮಗಳು ಅನಿವಾರ್ಯವಾಗುತ್ತವೆ. ಇಲ್ಲಿ ಕಳೆದುಕೊಳ್ಳಬೇಕಾದ್ದು ಏನೂ ಇಲ್ಲ. ಸರ್ಕಾರದ ಮಟ್ಟದಿಂದಲೇ ಖರ್ಚು ವೆಚ್ಚ ತಡೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.
ನಿರಂತರವಾಗಿ ಕುಸಿದು ಹೋಗಿದ್ದ ಭಾರತದ ಆರ್ಥಿಕ ಅಭಿವೃದ್ಧಿ ದರ ಮತ್ತು ರೂಪಾಯಿ ಮೌಲ್ಯ ಇತ್ತೀಚೆಗೆ ಚೇತರಿಕೆ ಹಾದಿ ಹಿಡಿದಿವೆ. ಈಗ ಅನಗತ್ಯ ವೆಚ್ಚತಡೆಗೂ ಮುಂದಾಗಿರುವುದು ಮುಂದಿನ ದಿನಗಳಲ್ಲಿ ದೇಶಕ್ಕೆ ಆಶಾದಾಯಕ ಬೆಳವಣಿಗೆಯಾಗಿ ಪರಿಣಮಿಸಿಲಿದೆ. ಆದರೆ ಆದೇಶದ ಸಮರ್ಪಕ ಅನುಷ್ಠಾನ ಅಷ್ಟೆಮುಖ್ಯ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications