ನೆಹರೂ ಕಾಲದ 'ಆಯೋಗ' ಕ್ಕೆ ಹೊಸ ಹೆಸರಿಟ್ಟ ಮೋದಿ
ನವದೆಹಲಿ, ಜ.1: ಕಾಂಗ್ರೆಸ್ ಪಕ್ಷದ ವಿರೋಧದ ನಡುವೆಯೂ ಮಾಜಿ ಪ್ರಧಾನಿ ದಿವಂಗತ ನೆಹರೂ ಅವರು ಹುಟ್ಟು ಹಾಕಿದ್ದ ಯೋಜನಾ ಆಯೋಗದ ಸ್ವರೂಪವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊನೆಗೂ ಬದಲಿಸಿದೆ. ಕಳೆದ ಎರಡು ತಿಂಗಳಿನಿಂದ ಈ ಬಗ್ಗೆ ಭಾರಿ ಚರ್ಚೆ ನಡೆದಿತ್ತು. ಯೋಜನಾ ಆಯೋಗ ಇನ್ಮುಂದೆ ನೀತಿ ಆಯೋಗ ಎಂದು ಕರೆಯಲ್ಪಡುತ್ತದೆ.
1950ರಲ್ಲಿ ಸ್ಥಾಪನೆಯಾದ ಯೋಜನಾ ಆಯೋಗದಲ್ಲಿ ಸಾಕಷ್ಟು ಬದಲಾವಣೆ ತರಲು ಮೋದಿ ಬಯಸಿದ್ದು, ಅದರಂತೆ, ಗುರುವಾರ ಹೊಸ ವರ್ಷದ ದಿನ ಈ ಬಗ್ಗೆ ಅಧಿಕೃತ ಘೋಷಣೆ ಹೊರ ಬಿದ್ದಿದೆ. ಮೂರು ವಾರಗಳ ಕೆಳಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದ ಪ್ರಧಾನಿ ಮೋದಿ ಅವರು 'ನೀತಿ ಆಯೋಗ' ದ ಬಗ್ಗೆ ವಿವರಿಸಿದ್ದರು. ನಿರೀಕ್ಷೆಯಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಸುಮಾರು 64 ವರ್ಷ ಹಳೆಯ ಆಯೋಗಕ್ಕೆ ಹೊಸ ಸ್ಪರ್ಶ ನೀಡುವ ಸುಳಿವನ್ನು ಕಳೆದ ಸ್ವತಂತ್ರದಿನಾಚರಣೆಯಂದು ಪ್ರಧಾನಿ ಮೋದಿ ನೀಡಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಈ ಬದಲಾವಣೆ ಬಯಸಿದ್ದರು ಎಂದು ಮೋದಿ ಅವರು ಡಿ.7ರಂದು ಘೋಷಿಸಿ ಚರ್ಚೆ ಹುಟ್ಟು ಹಾಕಿದ್ದರು.
ದೇಶದ ಆರ್ಥಿಕತೆಯ ಮಾರ್ಗದರ್ಶಿಯಾಗಿರುವ ಈ ಆಯೋಗ ಜವಹಾರಲಾಲ್ ನೆಹರೂ ಅವರ ಕಲ್ಪನೆಯಾಗಿದ್ದು, ಕಾಂಗ್ರೆಸ್ ಇದರಲ್ಲಿ ಬದಲಾವಣೆ ತರಲು ಒಪ್ಪಿಲ್ಲ.ಅದರೆ, ದೇಶದ ಅನೇಕ ಕಾನೂನುಗಳಿಗೆ ತಿದ್ದುಪಡಿ ತರಲು ಹೊರಟಿರುವ ಮೋದಿ ಅವರು ಆಯೋಗಕ್ಕೆ ಹೊಸ ಸ್ವರೂಪ ನೀಡುವುದು ಖಚಿತವಾಗಿದೆ.
ನೀತಿ ಆಯೋಗ: ಪ್ರಧಾನ ಮಂತ್ರಿ ಅವರು ನೀತಿ ಆಯೋಗದ ಅಧ್ಯಕ್ಷರಾಗಲಿದ್ದಾರೆ. ಉಳಿದಂತೆ ಇದಕ್ಕೆ ವಿವಿಧ ಇಲಾಖೆಗಳನ್ನೊಳಗೊಂಡ ಹಿರಿಯ ಅಧಿಕಾರಿಗಳು ಸಮಿತಿಯ ಸದಸ್ಯರಾಗಲಿದ್ದಾರೆ. ಪ್ರಮುಖವಾಗಿ ನೀತಿ ಆಯೋಗ 4 ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸಲಿದೆ. ಅಂತಾರಾಜ್ಯ ಸಭೆ, ನೇರ ಫಲಾನುಭವಿಗಳಿಗೆ ವರ್ಗಾವಣೆ(ಡಿಬಿಟಿ) ಯುಐಡಿಎಐ ಹಾಗೂ ಯೋಜನೆಗಳ ಮೌಲ್ಯಮಾಪನಗಳ ಘಟಕ ನೀತಿ ಆಯೋಗದ ಸುಪರ್ತಿಗೆ ಒಳಪಡಲಿದೆ. ಶೀಘ್ರದಲ್ಲೇ ನೀತಿ ಆಯೋಗದ ರೂಪುರೇಷೆಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಲಿದೆ.(ಏಜೆನ್ಸೀಸ್)
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications