Narendra Modi: ಬಲಿಷ್ಠ ಸರ್ಕಾರ ಇದ್ದರೆ ರಾಷ್ಟ್ರದ ಅಭಿವೃದ್ಧಿ ಸಾಧ್ಯ: ನರೇಂದ್ರ ಮೋದಿ
ಶುಕ್ರವಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹಿಳೆಯರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಭಾರತದ ಮಹಿಳೆಯರನ್ನು ಶ್ಲಾಘಿಸಿದರು ಮತ್ತು ಮಸೂದೆಯ ಮಹತ್ವವನ್ನು ಒತ್ತಿ ಹೇಳಿದರು, ಭವಿಷ್ಯದ ಪೀಳಿಗೆಗಳಿಗೆ ಈ ಮಸೂದೆಯಿಂದ ಭಾರಿ ಲಾಭವಾಗಲಿದೆ ಎಂದು ಹೇಳಿದರು.
ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಂಸದರು, ಸಚಿವರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, "ನಾನು ಭಾರತದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅಭಿನಂದಿಸುತ್ತೇನೆ. ಸೆಪ್ಟೆಂಬರ್ 21 ಮತ್ತು 22 ರಂದು ಹೊಸ ಇತಿಹಾಸವನ್ನು ರಚಿಸುವುದನ್ನು ನಾವು ನೋಡಿದ್ದೇವೆ. ಈ ಇತಿಹಾಸವನ್ನು ರಚಿಸಲು ಜನರು ನಮಗೆ ಈ ಅವಕಾಶವನ್ನು ನೀಡಿರುವುದು ನಮ್ಮ ಸೌಭಾಗ್ಯವಾಗಿದೆ." ಎಂದು ಹೇಳಿದರು.

"ಕೆಲವು ನಿರ್ಧಾರಗಳು ದೇಶದ ಭವಿಷ್ಯವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿವೆ ಮತ್ತು ಅಂತಹ ಒಂದು ನಿರ್ಧಾರಕ್ಕೆ ನಾವು ಸಾಕ್ಷಿಯಾಗಿದ್ದೇವೆ" ಎಂದು ಮೋದಿ ಸಂತಸ ವ್ಯಕ್ತಪಡಿಸಿದರು.
ಬಹುಮತದ ಸರ್ಕಾರ ಇರುವುದು ಮುಖ್ಯ
"ಸಂಸತ್ತಿನ ಉಭಯ ಸದನಗಳಲ್ಲಿ ಈ ಮಸೂದೆಯನ್ನು ಅಂಗೀಕರಿಸುವುದು ಬಹುಮತದ ಸರ್ಕಾರವನ್ನು ಹೊಂದಿರುವ ದೇಶದಲ್ಲಿ ಹೇಗೆ ಕೆಲಸ ಆಗುತ್ತದೆ ಎನ್ನುವುದನ್ನು ತೋರಿಸುತ್ತದೆ. ಯಾರ ರಾಜಕೀಯ ಸ್ವಹಿತಾಸಕ್ತಿಗಳೂ ಮಹಿಳಾ ಮೀಸಲಾತಿಗೆ ಅಡ್ಡಿಯಾಗಲು ನಾವು ಎಂದಿಗೂ ಬಿಡುವುದಿಲ್ಲ," ಎಂದು ಅವರು ಹೇಳಿದರು.
ಐತಿಹಾಸಿಕ ಮಸೂದೆಯನ್ನು ಜಾರಿ ಮಾಡಲು ಮತ್ತು ರಾಷ್ಟ್ರಕ್ಕೆ ಮಹಿಳೆಯರ ಕೊಡುಗೆಗಳನ್ನು ಗೌರವಿಸಲು ಮೀಸಲಾಗಿರುವ ಮಹಿಳಾ ಶಕ್ತಿ ವಂದನೆ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಅಭಿಪ್ರಾಯಪಟ್ಟರು. ಸಂಸತ್ತು ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ ಒಂದು ದಿನದ ನಂತರ ಅವರಿಗೆ ಪಕ್ಷದ ಮಹಿಳಾ ಘಟಕದಿಂದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆತ್ಮೀಯ ಸ್ವಾಗತ ನೀಡಲಾಯಿತು.
"ನೀವು ನಮಗೆ ನೀಡಿದ ಬಹುಮತವೇ ಈ ಸರ್ಕಾರ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಿದೆ, ನಾವು ಎಲ್ಲಾ ಹಂತಗಳಲ್ಲಿ ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ, ಯಾರ ರಾಜಕೀಯ ಹಿತಾಸಕ್ತಿಯು ಮಹಿಳಾ ಮೀಸಲಾತಿ (ಮಸೂದೆ)ಗೆ ಅಡ್ಡಿಯಾಗಲು ಬಿಡಲಿಲ್ಲ." ಎಂದು ಹೇಳಿದರು.
"ರಾಷ್ಟ್ರವನ್ನು ಮುಂದಕ್ಕೆ ಕೊಂಡೊಯ್ಯಲು ಪೂರ್ಣ ಬಹುಮತದ ಸರ್ಕಾರ, ಬಲಿಷ್ಠ ಸರ್ಕಾರ, ನಿರ್ಣಾಯಕ ಸರ್ಕಾರ ಅತ್ಯಗತ್ಯ ಎಂಬುದನ್ನು ಈ ಕಾನೂನು ಸಾಬೀತುಪಡಿಸಿದೆ" ಎಂದು ಅವರು ಹೇಳಿದರು.
ಸರ್ಕಾರದ ಹಲವಾರು ಯೋಜನೆಗಳ ಫಲಾನುಭವಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಕ್ಷದ ಕಚೇರಿಯಲ್ಲಿ ಪ್ರಧಾನಿ ಮೋದಿಯನ್ನು ಅಭಿನಂದಿಸಿದರು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಸೇರಿದಂತೆ ಕೇಂದ್ರ ಮಹಿಳಾ ಸಚಿವರು ಮತ್ತು ಪಕ್ಷದ ಇತರ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications