ದೇಶದ ಜನತೆಗೆ ಶಿವರಾತ್ರಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ಅಮಿತ್ ಶಾ
ನವದೆಹಲಿ, ಮಾರ್ಚ್ 11: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ದೇಶದ ಜನತೆಗೆ ಶಿವರಾತ್ರಿಯ ಶುಭಾಶಯ ತಿಳಿಸಿದ್ದಾರೆ. ದೇಶವಾಸಿಗಳಿಗೆ ಶಿವರಾತ್ರಿಯ ಶುಭದಿನದ ಶುಭಾಶಯ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಅಮಿತ್ ಶಾ ಮಹಾದೇವ ಪ್ರತಿಯೊಬ್ಬರ ಜೀವನದಲ್ಲೂ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ಮಾಡಲಿ, ಮನಸ್ಸಿನಲ್ಲಿರುವ ಎಲ್ಲಾ ಇಚ್ಛೆಯು ಪೂರ್ಣಗೊಳ್ಳಲಿ ಎಂದು ಹಾರೈಸಿದ್ದಾರೆ. ಕೈಲಾಸವಾಸಿ ಶಿವನಿಗೆ ಇಂದಿನ ದಿನ ಅತ್ಯಂತ ಪ್ರಿಯವಾದದ್ದು, ಶಿವರಾತ್ರಿಯಂದು ಭಕ್ತಿಯೀದ ಪೂಜೆ ಮಾಡಿದರೆ ಶಿವ ದಂಪತಿ ಸಮೇತರಾಗಿ ಬಂದು ಭಕ್ತರಿಗೆ ಆಶೀರ್ವಾದ ನೀಡುತ್ತಾರೆ ಎಂಬುದು ನಂಬಿಕೆ.
ಅಸುರರು ಹಾಗೂ ದೇವತೆಗಳ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ, ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣ.

ಹಾಗಾಗಿ,ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ, ಆತನನ್ನು ಎಚ್ಚರವಾಗಿರುವಂತೆ ನೋಡಿಕೊಳ್ಳುತ್ತಾರೆ, ಭಕ್ತರು ನೂರಾಒಂದು ಇಲ್ಲವೆ ಸಾವಿರದ ಒಂದು ಬಿಲ್ವ ಪತ್ರೆಗಳನ್ನು ಪಂಚಾಕ್ಷರಿ ಮಂತ್ರ ಪಠಣದೊಂದಿಗೆ ಹರನಿಗೆ ಸಮರ್ಪಿಸುತ್ತಾರೆ.
ಹೀಗೆ ಶಿವರಾತ್ರಿ ಕೇವಲ ಉಣ್ಣುವ, ಉಡುವ ತೊಡುವ ಹಬ್ಬ ಮಾತ್ರವಲ್ಲದೆ, ನಮ್ಮ ಆಚಾರ-ವಿಚಾರಗಳು ಮಹಾ ಪರಿವರ್ತನೆಯ ಸಾಂಸ್ಕೃತಿಕ ಹಬ್ಬೂ ಇದು ಹೌದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications