ದೇಶದ ಜನತೆಗೆ ಶಿವರಾತ್ರಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ಅಮಿತ್ ಶಾ
ನವದೆಹಲಿ, ಮಾರ್ಚ್ 11: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ದೇಶದ ಜನತೆಗೆ ಶಿವರಾತ್ರಿಯ ಶುಭಾಶಯ ತಿಳಿಸಿದ್ದಾರೆ. ದೇಶವಾಸಿಗಳಿಗೆ ಶಿವರಾತ್ರಿಯ ಶುಭದಿನದ ಶುಭಾಶಯ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಅಮಿತ್ ಶಾ ಮಹಾದೇವ ಪ್ರತಿಯೊಬ್ಬರ ಜೀವನದಲ್ಲೂ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ಮಾಡಲಿ, ಮನಸ್ಸಿನಲ್ಲಿರುವ ಎಲ್ಲಾ ಇಚ್ಛೆಯು ಪೂರ್ಣಗೊಳ್ಳಲಿ ಎಂದು ಹಾರೈಸಿದ್ದಾರೆ. ಕೈಲಾಸವಾಸಿ ಶಿವನಿಗೆ ಇಂದಿನ ದಿನ ಅತ್ಯಂತ ಪ್ರಿಯವಾದದ್ದು, ಶಿವರಾತ್ರಿಯಂದು ಭಕ್ತಿಯೀದ ಪೂಜೆ ಮಾಡಿದರೆ ಶಿವ ದಂಪತಿ ಸಮೇತರಾಗಿ ಬಂದು ಭಕ್ತರಿಗೆ ಆಶೀರ್ವಾದ ನೀಡುತ್ತಾರೆ ಎಂಬುದು ನಂಬಿಕೆ.
ಅಸುರರು ಹಾಗೂ ದೇವತೆಗಳ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ, ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣ.

ಹಾಗಾಗಿ,ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ, ಆತನನ್ನು ಎಚ್ಚರವಾಗಿರುವಂತೆ ನೋಡಿಕೊಳ್ಳುತ್ತಾರೆ, ಭಕ್ತರು ನೂರಾಒಂದು ಇಲ್ಲವೆ ಸಾವಿರದ ಒಂದು ಬಿಲ್ವ ಪತ್ರೆಗಳನ್ನು ಪಂಚಾಕ್ಷರಿ ಮಂತ್ರ ಪಠಣದೊಂದಿಗೆ ಹರನಿಗೆ ಸಮರ್ಪಿಸುತ್ತಾರೆ.
ಹೀಗೆ ಶಿವರಾತ್ರಿ ಕೇವಲ ಉಣ್ಣುವ, ಉಡುವ ತೊಡುವ ಹಬ್ಬ ಮಾತ್ರವಲ್ಲದೆ, ನಮ್ಮ ಆಚಾರ-ವಿಚಾರಗಳು ಮಹಾ ಪರಿವರ್ತನೆಯ ಸಾಂಸ್ಕೃತಿಕ ಹಬ್ಬೂ ಇದು ಹೌದು.












Click it and Unblock the Notifications