ಫಾರ್ಚೂನ್ ಪಟ್ಟಿಯಲ್ಲಿ ಮೋದಿ, ಕೈಲಾಶ್ ಸತ್ಯಾರ್ಥಿ
ನ್ಯೂಯಾರ್ಕ್ , ಮಾ. 28: ಫಾರ್ಚೂನ್ ನಿಯತಕಾಲಿಕ ಹೊರಡಿಸಿರುವ ವಿಶ್ವದ 50 ಮಂದಿ ಅತ್ಯುನ್ನತ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಸ್ಥಾನ ಪಡೆದುಕೊಂಡಿದ್ದಾರೆ.
ಉದ್ಯಮ, ಸರ್ಕಾರಿ ಸೇವೆ ಮತ್ತು ಸಮಾಜಸೇವಾ ಕ್ಷೇತ್ರಗಳಲ್ಲಿ ಅಸಾಮಾನ್ಯ ಸೇವೆ ಸಲ್ಲಿಸಿದ ಪುರುಷರು ಮತ್ತು ಮಹಿಳೆಯರ ಪಟ್ಟಿಯನ್ನು ಫಾರ್ಚೂನ್ ಪ್ರತಿವರ್ಷ ಬಿಡುಗಡೆ ಮಾಡುತ್ತದೆ. 'ಜಗತ್ತಿನ ಮಹಾನ್ ನಾಯಕರ' ಪಟ್ಟಿಯಲ್ಲಿ ಮೋದಿ ಐದನೇ ಸ್ಥಾನದಲ್ಲಿದ್ದರೆ, ಸತ್ಯಾರ್ಥಿ 28ನೇ ಸ್ಥಾನದಲ್ಲಿದ್ದಾರೆ. 'ಆಪಲ್' ಕಂಪೆನಿಯ ಸಿಇಒ ಟಿಮ್ ಕುಮ್ ಮೊದಲನೆಯವರಾಗಿದ್ದಾರೆ.[ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರದಾನ]

ಒಬಾಮಾಗಿಲ್ಲ ಸ್ಥಾನ: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳಲು ವಿಫಲರಾಗಿದ್ದಾರೆ. ಸ್ಥಳೀಯವಾಗಿ ಮತ್ತು ಜಾಗತಿಕವಾಗಿ ಸಂಕಷ್ಟಗಳನ್ನು ಎದುರಿಸಿದ ಕಾರಣ ಒಬಾಮ ಸೋತಿದ್ದಾರೆ ಎಂದು ಫಾರ್ಚೂನ್ ತಿಳಿಸಿದೆ.
ಮೋದಿ ಭಾರತವನ್ನು ಹೆಚ್ಚು ಉದ್ಯಮಸ್ನೇಹಿಯಾಗಿಸಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ನಿಭಾಯಿಸುವ ರೀತಿ, ಸ್ವಚ್ಛತೆಗೆ ಆದ್ಯತೆ ಮತ್ತು ಅಮೆರಿಕ ಹಾಗೂ ಏಷ್ಯಾದ ರಾಷ್ಟ್ರಗಳೊಂದಿಗೆ ಬಾಂಧವ್ಯ ವೃದ್ಧಿ ಮಾಡಿಕೊಳ್ಳುವುದರಲ್ಲಿ ಸಫಲರಾಗಿದ್ದಾರೆ ಎದು ಪಟ್ಟಿ ತಿಳಿಸಿದೆ.[ಥೇಮ್ಸ್ ದಡದಲ್ಲಿ ಬಸವಣ್ಣನ ಪುತ್ಥಳಿ, ಮೋದಿಗೆ ಆಹ್ವಾನ]
ಪಟ್ಟಿಯಲ್ಲಿ ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ನ ಅಧ್ಯಕ್ಷರಾದ ಮಾರಿಯೊ ಡ್ರಘಿ ಅವರು ಎರಡನೇ ಸ್ಥಾನದಲ್ಲಿದ್ದರೆ, ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮೂರನೇ ಮತ್ತು ಪೋಪ್ ಫ್ರಾನ್ಸಿಸ್ ಅವರು ನಾಲ್ಕನೆಯವರಾಗಿದ್ದಾರೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸತ್ಯಾರ್ಥಿ ಮಾಡಿದ ಕೆಲಸಗಳ ಫಲವೇ ಅವರಿಗೆ ನೊಬೆಲ್ ದೊರೆತಿದೆ. ಅವರ ಸಾಮಾಜಿಕ ಕಾರ್ಯ ಹಾಗೆಯೇ ಮುಂದುವರಿದಿದ್ದು ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ ಎಂದು ಫಾರ್ಚೂನ್ ಮಾಹಿತಿ ನೀಡಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications