ಮೂರು ವರ್ಷದಲ್ಲಿ ದೇಶವನ್ನು ಹಳ್ಳ ಹಿಡಿಸಿದ ಮೋದಿ -ಕಾಂಗ್ರೆಸ್
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ನರೇಂದ್ರ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನವದೆಹಲಿ, ಮೇ 16: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಮೂರು ವರ್ಷ ತುಂಬಿದ ಹಿನ್ನಲೆಯಲ್ಲಿ ಕೇಸರಿ ಪಕ್ಷ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ ಕಾಂಗ್ರೆಸ್ ಮೋದಿ ಮೇಲೆ ಹರಿಹಾಯ್ದಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ನರೇಂದ್ರ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.[3 ವರ್ಷದ ಹಿಂದೆ, ಮೋದಿ ಗೆಲುವನ್ನು ಪತ್ರಿಕೆಗಳು ಸಾರಿದ್ದು ಹೀಗೆ]

'ಮೋದಿ ಸರಕಾರ ದಕ್ಷಿಣ ಭಾರತೀಯರನ್ನು ಕಡೆಗಣಿಸುತ್ತಿದೆ. ಕರ್ನಾಟಕ 4702 ಕೋಟಿ ಬರಪರಿಹಾರ ಕೇಳಿದರೆ ಕೇವಲ 1786 ಕೋಟಿ ನೀಡಿದ್ದಾರೆ. ತಮಿಳುನಾಡಿನಲ್ಲಿ ಭೀಕರ ಬರಗಾಲವಿದೆ. ಆದರೆ ಪ್ರಧಾನಿಯಾಗಲಿ ಯಾರೂ ಅಲ್ಲಿಗೆ ಭೇಟಿ ನೀಡಿಲ್ಲ. ಬದಲಿಗೆ ನರೇಂದ್ರ ಮೋದಿ ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದಾರೆ. ಅತ್ತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನೂ ನೀಡಿಲ್ಲ. ಕೇರಳದಲ್ಲಿ ಸಾರ್ವಜನಿಕ ಆಹಾರ ಸರಬರಾಜು ವ್ಯವಸ್ಥೆಯನ್ನೇ ಹಾಳು ಮಾಡಲು ಸರಕಾರ ಯತ್ನಿಸುತ್ತಿದೆ. ಅಲ್ಲಿ ಜನರಿಗೆ ಬೇಕಾದ ಅಕ್ಕಿಯನ್ನು ಪಿಡಿಎಸ್ ವ್ಯವಸ್ಥೆಯಲ್ಲಿ ನೀಡಿಲ್ಲ," ಎಂದು ರಮ್ಯಾ ವಾಗ್ದಾಳಿ ನಡೆಸಿದರು.[3 ವರ್ಷ ಪೂರೈಸಿದ ಮೋದಿಗೆ ಕಾಂಗ್ರೆಸ್ ವಿಶೇಷ ಉಡುಗೊರೆ!]
ನರೇಗಾ ಯೋಜನೆಯಡಿಯಲ್ಲಿ ಬಿಡುಗಡೆ ಮಾಡಬೇಕಾಗಿದ್ದ 1,500 ಕೋಟಿ ಹಣವನ್ನೂ ಬಿಡುಗಡೆ ಮಾಡಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡರು. ಬಿಜೆಪಿ ನಾಯಕ ತರುಣ್ ವಿಜಯ್ ದಕ್ಷಿಣ ಭಾರತೀಯರ ಮೇಲೆ ವರ್ಣದ್ವೇಷದ ಹೇಳಿಕೆ ನೀಡಿದ್ದರು. ಇದು ಅವರೊಬ್ಬರ ಮನಸ್ಥಿತಿ ಅಲ್ಲ. ಬಿಜೆಪಿಯ ಎಲ್ಲರ ಮನಸ್ಥಿತಿಯೂ ಹೀಗೆಯೇ. ಇದೇ ಕಾರಣಕ್ಕೆ ದಕ್ಷಿಣ ಭಾರತೀಯರನ್ನು ಕಡೆಗಣಿಸಲಾಗಿದೆ ಎಂದು ಹೇಳಿದರು.
ಯುಪಿಎ ಎರಡನೇ ಅವಧಿಯಲ್ಲಿ ನಿರ್ಭಯಾ ಘಟನೆ ನಡೆದಾಗ ಆ ಸಂದರ್ಭದಲ್ಲಿ ಎಲ್ಲರೂ ರಾಜಕೀಯ ಮೀರಿ ನಡೆದುಕೊಂಡರು. ಅವತ್ತಿನ ಸರಕಾರ ನಿರ್ಭಯಾ ಫಂಡ್, ತ್ವರಿತ ನ್ಯಾಯಾಲಯಗಳನ್ನು ಹಾಗೂ ನಿರ್ಭಯಾ ಕೇಂದ್ರಗಳನ್ನು ಸ್ಥಾಪಿಸಿತು. ಆದರೆ ಇವತ್ತಿನ ಸರಕಾರ ನಿರ್ಭಯಾ ಫಂಡ್ ವಿನಿಯೋಗಿಸಿಲ್ಲ. ಕೇವಲ 660 ಕೇಂದ್ರಗಳ್ಲಲಿ ಕೇವಲ 20 ಕೇಂದ್ರಗಳಷ್ಟೇ ಕಾರ್ಯಚರಿಸುತ್ತಿವೆ ಎಂದು ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.[ನರೇಂದ್ರ ಮೋದಿ ಸರಕಾರಕ್ಕೆ ಮೂರು ವರ್ಷ: ಸಮೀಕ್ಷೆ ಏನು ಹೇಳುತ್ತೆ?]
"ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಅಪರಾಧ ವಿಭಾಗದ ದಾಖಲೆಗಳ ಪ್ರಕಾರ ಶೇಕಡಾ 22.2 ರಷ್ಟು ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಗುರ್ಗಾಂವ್ ನಂಥ ಪ್ರದೇಶದಲ್ಲಿ ಅತ್ಯಾಚಾರ ನಡೆದಾಗ ಮುಖ್ಯಮಂತ್ರಿ ಸಂತ್ರಸ್ತೆಯ ಮನೆಗೂ ಭೇಟಿ ನೀಡಿಲ್ಲ. ಬಿಜೆಪಿ ನಾಯಕರ ಹೇಳಿಕೆಗಳೂ ಸೆಕ್ಸಿಸ್ಟ್ ಆಗಿವೆ," ಎಂದು ಅವರು ಇದೇ ಸಂದರ್ಭದಲ್ಲಿ ದೂರಿದರು.
ಇನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ, "ಕಳೆದ ಮೂರು ವರ್ಷಗಳಲ್ಲಿ ಅಚ್ಚೇದಿನದ ಕನಸುಗಳನ್ನು ಮಾರುತ್ತಾ ನರೇಂದ್ರ ಮೋದಿ ಸರಕಾರ ಜನರನ್ನು ಅಸಹಾಯಕರನ್ನಾಗಿ ಮಾಡಿದೆ. ದೇಶದಾದ್ಯಂತ ಅಸಹಿಷ್ಣುತೆ ಹೆಚ್ಚಾಗುತ್ತಿದೆ. ಇದರ ಬಗ್ಗೆ ಯಾರೇ ಮಾತನಾಡಿದರೂ ಅವರನ್ನು ದೇಶದ್ರೋಹಗಳಂತೆ ಚಿತ್ರಿಸಲಾಗುತ್ತಿದೆ. ದೇಶದ ಜನರು ಏನು ತಿನ್ನಬೇಕು, ಯಾವುದು ಕಲಿಯಬೇಕು, ಯಾವ ಬಟ್ಟೆ ಧರಿಸಬೇಕು ಎಂಬುದನ್ನು ಸರಕಾರ ನಿರ್ಧರಿಸುತ್ತಿದೆ. ಈ ಮೂಲಕ ಸರಕಾರ ತನ್ನ ಸಿದ್ಧಾಂತಗಳನ್ನು ಯೋಜನೆಗಳ ಮೂಲಕ ಹೇರುತ್ತಿದೆ," ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ ಮಾತನಾಡಿದ ಇನ್ನೊಬ್ಬ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, "ದೇಶದ ರೈತರು ಉಳಿದ ಎಲ್ಲರಿಗಿಂತಲೂ ಹೆಚ್ಚಿನ ಸಮಸ್ಯೆ ಅನುಭವಿಸುತ್ತಿದ್ದಾರೆ. ಆದರೆ ಸರಕಾರ ಪ್ರಮುಖ ವಿಷಯಗಳಿಗಿಂತ ಹೆಚ್ಚಾಗಿ ಭಾವನಾತ್ಮಕ ವಿಷಯಗಳ ಕಡೆ ಗಮನ ಬದಲಾಯಿಸುತ್ತಿದೆ," ಎಂದು ದೂರಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications