ಸಮಯ ಉಳಿಸಲು ವಿಮಾನದಲ್ಲೇ ನಿದ್ದೆ ಮಾಡಿದ ಪ್ರಧಾನಿ ಮೋದಿ
ನವದೆಹಲಿ, ಜೂನ್ 29: ಇತ್ತೀಚೆಗಿನ ತ್ರಿರಾಷ್ಟ್ರ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಸಮಯ ಉಳಿಸಲು ಭಿನ್ನ ಹಾದಿ ತುಳಿದಿದ್ದರು. ಅಕ್ಕಪಕ್ಕದ ರಾಷ್ಟ್ರಗಳಿಗೆ ಒಟ್ಟಾಗಿ ಪ್ರವಾಸ ಮಾಡಿ ಭಾರೀ ಸಮಯ ಉಳಿಸಿದ್ದಾರೆ.
ಪ್ರಧಾನಿ ನಿರ್ದೇಶನದ ಮೇರೆಗೆ ಪ್ರಧಾನ ಮಂತ್ರಿ ಕಾರ್ಯಾಲಯ ಸಮಯ ಉಳಿಸಲು ಅನುಕೂಲವಾಗುವಂತೆ ಪ್ರವಾಸದ ವೇಳಾಪಟ್ಟಿಯನ್ನು ಯೋಜಿಸಿತ್ತು. ಪ್ರವಾಸದ ವೇಳೆ ಸಮಯ ಉಳಿಸಲು ಪ್ರಧಾನಿ ನರೇಂದ್ರ ಮೋದಿ ವಿಮಾನದಲ್ಲೇ ನಿದ್ದೆ ಮಾಡುತ್ತಿದ್ದರು ಎಂದು ಕಾರ್ಯಾಲಯದ ಮೂಲಗಳು ಒನ್ಇಂಡಿಯಾಗೆ ಹೇಳಿವೆ.

ಇದೇ ರೀತಿ 2016ರಲ್ಲಿ ಸೌದಿ ಅರೇಬಿಯಾ, ಅಮೆರಿಕಾ, ಬೆಲ್ಜಿಯಂ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಎರಡು ರಾತ್ರಿಯ ನಿದ್ದೆಯನ್ನು ವಿಮಾನದಲ್ಲೇ ಪೂರೈಸಿದ್ದರು.
ಇತ್ತೀಚೆಗೆ ಪೋರ್ಚುಗಲ್, ಅಮೆರಿಕಾ, ನೆದರ್ಲ್ಯಾಂಡ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ 33 ಗಂಟೆಗಳನ್ನು ವಿಮಾನದಲ್ಲೇ ಕಳೆದಿದ್ದಾರೆ. ಮೋದಿ ಜೂಣ್ 24ರಂದು ಬೆಳಿಗ್ಗೆ 7 ಗಂಟೆಗೆ ಭಾರತ ಬಿಟ್ಟಿದ್ದರು. ಅದೇ ದಿನ ಸಂಜೆ ಪ್ರಧಾನಿ ನರೇಂದ್ರ ಮೋದಿ ವಾಷಿಂಗ್ಟನ್ನಿಗೆ ಪ್ರಯಾಣ ಬೆಳೆಸಿದ್ದರು. ಎಲ್ಲೂ ಹೊಟೇಲಿಗೆ ಅವರು ಭೇಟಿ ನೀಡಿರಲಿಲ್ಲ.
ನಂತರ ಅಮೆರಿಕಾ ಅಧ್ಯಕ್ಷರನ್ನು ಭೇಟಿಯಾಗಿ ನೆದರ್ಲೆಂಡ್ ಗೆ ಪ್ರಧಾನಿ ತೆರಳಿದ್ದರು. ಈ ವೇಳೆಯೂ ಪ್ರಧಾನಿ ನರೇಂದ್ರ ಮೋದಿ ವಿಮಾನದಲ್ಲೇ ನಿದ್ದೆ ಮಾಡಿದ್ದರು. ಅಲ್ಲಿ 12 ಗಂಟೆಗಳನ್ನು ಕಳೆದು ನಂತರ ಭಾರತಕ್ಕೆ ವಾಪಾಸಾಗಿದ್ದರು. ಅಲ್ಲಿಂದ ಸಂಜೆ ಹೊರಟು ವಿಮಾನದಲ್ಲೇ ನಿದ್ದೆ ಹೋಗಿ ಭಾರತಕ್ಕೆ ಮುಂಜಾನೆ 6 ಗಂಟೆಗೆ ಬಂದು ತಲುಪಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications