ನರೇಂದ್ರ ಮೋದಿಗೆ ಇಸ್ರೇಲಿನಿಂದ ರತ್ನಗಂಬಳಿ ಸ್ವಾಗತ
ನವದೆಹಲಿ, ಜುಲೈ 3: ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ನೆಲದ ಮೇಲೆ ಇಳಿಯಲಿದ್ದಾರೆ. ಮೋದಿ ಸ್ವಾಗತಕ್ಕಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ರತ್ನಗಂಬಳಿ ಹಾಸಿ ಕಾದು ಕುಳಿತಿದ್ದಾರೆ.
ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಭೇಟಿ 'ಐತಿಹಾಸಿಕ ಮತ್ತು ಫಲಪ್ರದವಾಗಲಿದೆ' ಎಂದು ಇಸ್ರೇಲ್ ವಿದೇಶಾಂಗ ಇಲಾಖೆ ವಕ್ತಾರ ಮಾರ್ಕ್ ಸೋಫರ್ ಹೇಳಿದ್ದಾರೆ. ಭಾರತ ಮತ್ತು ಇಸ್ರೇಲ್ ನಡುವೆ ದ್ವಿಪಕ್ಷೀಯ ಸಂಬಂಧ ಆರಂಭವಾಗಿ 25 ವರ್ಷಗಳ ನಂತರ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಇಸ್ರೇಲ್ ದೇಶಕ್ಕೆ ಭೇಟಿ ನೀಡುತ್ತಿದ್ದಾರೆ.

ಇನ್ನು ಭೇಟಿಯುದ್ದಕ್ಕೂ ಇಸ್ರೇಲ್ ಪ್ರಧಾನಿ ನೇತನ್ಯಾಹು ನರೇಂದ್ರ ಮೋದಿಯವರಿಗೆ ಸಾಥ್ ನೀಡಲಿದ್ದಾರೆ. ತೀರಾ ವಿಶೇಷ ಅತಿಥಿಗಳು ಬಂದಾಗ ಮಾತ್ರ ಇಸ್ರೇಲ್ ಪ್ರಧಾನಿಗಳು ಹೀಗೆ ವಿದೇಶಿ ಅತಿಥಿಗಳನ್ನು ಎಸ್ಕಾರ್ಟ್ ಮಾಡುತ್ತಾರೆ.
ಇನ್ನು ಇಸ್ರೇಲ್ ಪ್ರಧಾನಿ ನೇತನ್ಯಾಹು ಕೂಡಾ ನರೇಂದ್ರ ಮೋದಿಯನ್ನು ತಮ್ಮ ಗೆಳೆಯ ಎಂದು ಸಂಬೋಧಿಸಿದ್ದಾರೆ. "ನಾಳೆ ನನ್ನ ಗೆಳೆಯ ಭಾರತದ ಪ್ರಧಾನಿ ನರೇಂದ್ರ ಮೋದಿ ಇಸ್ರೇಲಿಗೆ ಬರಲಿದ್ದಾರೆ. ಹಲವು ಕಾರ್ಯಕ್ರಮಗಳಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಥ್ ನೀಡಲಿದ್ದೇನೆ," ಎಂದು ಬೆಂಜಮಿನ್ ನೇತನ್ಯಾಹು ಟ್ವೀಟ್ ಮಾಡಿದ್ದಾರೆ.
Tomorrow, my friend Indian Prime Minister @NarendraModi will arrive in Israel; India is the largest democracy in the world.
— PM of Israel (@IsraeliPM) July 3, 2017
ಪ್ರತಿವರ್ಷ ಸುಮಾರು 6 ಸಾವಿರ ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಇಸ್ರೇಲಿನಿಂದ ಭಾರತ ಆಮದು ಮಾಡಿಕೊಳ್ಳುತ್ತದೆ. ಆದರೆ ಇದನ್ನು ಮೀರಿದ ಮಹತ್ವ ಈ ಭೇಟಿಗೆ ಇದೆ ಎಂದು ಇಸ್ರೇಲ್ ವಿದೇಶಾಂಗ ಸಚಿವರು ಹೇಳಿದ್ದು ಒಟ್ಟಾರೆ ಭೇಟಿ ಮಹತ್ವ ಪಡೆದುಕೊಂಡಿದೆ.
ನೀರಾವರಿ ಮತ್ತು ಕೃಷಿಗೆ ಸಂಬಂಧಿಸಿದಂತೆ ಎರಡೂ ದೇಶಗಳ ನಡುವೆ ಪ್ರಮುಖ ಮಾತುಕತೆಗಳು ಮತ್ತು ಒಪ್ಪಂದಗಳು ನಡೆಯುವ ಸಾಧ್ಯತೆಯೂ ಇದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications