ನೇತಾಜಿ ಜನ್ಮದಿನ: ಶೌರ್ಯದ ಪ್ರತಿರೂಪಕ್ಕೆ ಗಣ್ಯರ ನಮನ
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಅಗ್ರಸ್ಥಾನ ಪಡೆದಿದ್ದ ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ 121ನೇ ಜನ್ಮದಿನ ಇಂದು(ಜ.23).
ತಮ್ಮ ಶೌರ್ಯ ಮತ್ತು ಅಪ್ರತಿಮ ದೇಶಭಕ್ತಿಯ ಮೂಲಕ ಭಾರತೀಯ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವ ಬೋಸ್ ಅವರಿಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.
ಒಡಿಶಾದ ಕಟಕ್ ನಲ್ಲಿ 1897 ರ ಜನವರಿ 23 ರಂದು ಜನಿಸಿದ ಸುಭಾಷ್ ಚಂದ್ರ ಬೋಸ್ ಅವರ ತಂದೆ ಜಾನಕೀನಾಥ್ ಬೋಸ್, ತಾಯಿ ಪ್ರಭಾವತಿ. ತತ್ವಶಾಸ್ತ್ರ ಪದವಿ(1919), ಇಂಗ್ಲೆಂಡ್ ನಿಂದ ಐಸಿಎಸ್ ಪದವಿ(1920) ಪಡೆದ ಬೋಸ್ 1921 ರಲ್ಲಿ ಭಾರತಕ್ಕೆ ಮರಳಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾದ ಬೋಸ್ ಗೆ ಮಂದಗಾಮಿ ಚಿಂತನೆಯಲ್ಲಿ ನಂಬಿಕೆ ಇರಲಿಲ್ಲ. ಅವರದೇನಿದ್ದರೂ ಹೋರಾಟದ ಹಾದಿ. ಅದಕ್ಕೆಂದೇ ಇಂಡಿಯನ್ ನ್ಯಾಶನಲ್ ಆರ್ಮಿ(ಐಎನ್ ಎ) ಸ್ಥಾಪಿಸಿ, ಆ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಬಲನೀಡಿದರು.
1945 ಆಗಸ್ಟ್ 18 ರಂದು ತೈವಾನ್ ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ನೇತಾಜಿ ಅಸುನೀಗಿದರು ಎಂಬ ಸುದ್ದಿಯನ್ನು ಇಂದಿಗೂ ಭಾರತೀಯರಿಗೆ ಅರಗಿಸಿಕೊಳ್ಳುವುದು ಕಷ್ಟವೆನ್ನಿಸಿದೆ.
|
ಅವರ ಶೌರ್ಯ ನಮ್ಮ ಹೆಮ್ಮೆಯ
ತಮ್ಮ ಅಪ್ರತಿಮ ಶೌರ್ಯದ ಮೂಲಕ ನೇತಾಜಿ ಸುಭಾಶ್ ಚಂದ್ರ ಬೋಸ್ ಅವರು ಭಾರತೀಯರ ಹೆಮ್ಮೆ ಎನ್ನಿಸಿದ್ದಾರೆ. ಅವರ ಜಯಂತಿಯಂದು ನಾವು ಅವರಿಗೆ ತಲೆಬಾಗೋಣ ಎಂದು ವಿಡಿಯೋ ದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
|
ಅವರ ದೇಶಭಕ್ತಿಗೆ ನಮ್ಮ ನಮನ
ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ನೇತಾಜಿ ಸುಭಾಶ್ ಚಂದ್ರ ಬೋಸ್ ಅವರು ತೋರಿದ ಶೌರ್ಯವನ್ನು ಭಾರತೀಯರು ಎಂದಿಗೂ ಮರೆಯುವುದಿಲ್ಲ. ಅವರ ಜನ್ಮದಿನದಂದು ಅವರ ದೇಶಭಕ್ತಿಗೆ ನಮ್ಮ ನಮನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ಯುವಕರಿಗೆ ಆದರ್ಶ
ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ ಜಯಂತಿಯಂದು, ಅವರಿಗೆ ನನ್ನ ವಿಧೇಯ ನಮನಗಳು. ಅವರ ಧೈರ್ಯ, ಶೌರ್ಯ ಮತ್ತು ಆದರ್ಶಗಳು ಎಂದಿಗೂ ಮುಂದಿನ ತಲೆಮಾರುಗಳಿಗೆ ಸ್ಫೂರ್ತಿ ನೀಡಲಿ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
|
ಭಾರತದ ಧೈರ್ಯವಂತ ಪುತ್ರನಿಗೆ ನಮನ
ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂದು ಶೌರ್ಯದಿಂದ ಹೇಳಿದ, ಭಾರತದ ಧೈರ್ಯವಂತ ಪುತ್ರರಲ್ಲೊಬ್ಬರಾದ ನೇತಾಜಿ ಅವರ ಜನ್ಮದಿನಕ್ಕೆ ಅವರಿಗೆ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ ಮಾಜಿ ಕ್ರಿಕೆಟಿಗ ಮೊಹ್ಮದ್ ಕೈಫ್.
|
ಭಾರತದ ಹೆಮ್ಮೆಯ ಪುತ್ರನಿಗೆ ತಲೆಬಾಗುತ್ತೇನೆ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು, ಭಾರತದ ಹೆಮ್ಮೆಯ ಪುತ್ರನಿಗೆ ತಾನು ತಲೆಬಾಗುತ್ತೇನೆ. ನೇತಾಜಿ ಅವರ ಧಅಯರ್ಯ, ಶೌರ್ಯಗಳು ಮುಂದಿನ ತಲೆಮಾರುಗಳಿಗೆ ಪ್ರೇರಣೆಯಾಗಲಿ ಎಂದಿದ್ದಾರೆ ಬಿಜೆಬಿ ಕರ್ನಾಟಕ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications