ನೇತಾಜಿ ಜನ್ಮದಿನ: ಶೌರ್ಯದ ಪ್ರತಿರೂಪಕ್ಕೆ ಗಣ್ಯರ ನಮನ
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಅಗ್ರಸ್ಥಾನ ಪಡೆದಿದ್ದ ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ 121ನೇ ಜನ್ಮದಿನ ಇಂದು(ಜ.23).
ತಮ್ಮ ಶೌರ್ಯ ಮತ್ತು ಅಪ್ರತಿಮ ದೇಶಭಕ್ತಿಯ ಮೂಲಕ ಭಾರತೀಯ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವ ಬೋಸ್ ಅವರಿಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.
ಒಡಿಶಾದ ಕಟಕ್ ನಲ್ಲಿ 1897 ರ ಜನವರಿ 23 ರಂದು ಜನಿಸಿದ ಸುಭಾಷ್ ಚಂದ್ರ ಬೋಸ್ ಅವರ ತಂದೆ ಜಾನಕೀನಾಥ್ ಬೋಸ್, ತಾಯಿ ಪ್ರಭಾವತಿ. ತತ್ವಶಾಸ್ತ್ರ ಪದವಿ(1919), ಇಂಗ್ಲೆಂಡ್ ನಿಂದ ಐಸಿಎಸ್ ಪದವಿ(1920) ಪಡೆದ ಬೋಸ್ 1921 ರಲ್ಲಿ ಭಾರತಕ್ಕೆ ಮರಳಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾದ ಬೋಸ್ ಗೆ ಮಂದಗಾಮಿ ಚಿಂತನೆಯಲ್ಲಿ ನಂಬಿಕೆ ಇರಲಿಲ್ಲ. ಅವರದೇನಿದ್ದರೂ ಹೋರಾಟದ ಹಾದಿ. ಅದಕ್ಕೆಂದೇ ಇಂಡಿಯನ್ ನ್ಯಾಶನಲ್ ಆರ್ಮಿ(ಐಎನ್ ಎ) ಸ್ಥಾಪಿಸಿ, ಆ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಬಲನೀಡಿದರು.
1945 ಆಗಸ್ಟ್ 18 ರಂದು ತೈವಾನ್ ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ನೇತಾಜಿ ಅಸುನೀಗಿದರು ಎಂಬ ಸುದ್ದಿಯನ್ನು ಇಂದಿಗೂ ಭಾರತೀಯರಿಗೆ ಅರಗಿಸಿಕೊಳ್ಳುವುದು ಕಷ್ಟವೆನ್ನಿಸಿದೆ.
|
ಅವರ ಶೌರ್ಯ ನಮ್ಮ ಹೆಮ್ಮೆಯ
ತಮ್ಮ ಅಪ್ರತಿಮ ಶೌರ್ಯದ ಮೂಲಕ ನೇತಾಜಿ ಸುಭಾಶ್ ಚಂದ್ರ ಬೋಸ್ ಅವರು ಭಾರತೀಯರ ಹೆಮ್ಮೆ ಎನ್ನಿಸಿದ್ದಾರೆ. ಅವರ ಜಯಂತಿಯಂದು ನಾವು ಅವರಿಗೆ ತಲೆಬಾಗೋಣ ಎಂದು ವಿಡಿಯೋ ದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
|
ಅವರ ದೇಶಭಕ್ತಿಗೆ ನಮ್ಮ ನಮನ
ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ನೇತಾಜಿ ಸುಭಾಶ್ ಚಂದ್ರ ಬೋಸ್ ಅವರು ತೋರಿದ ಶೌರ್ಯವನ್ನು ಭಾರತೀಯರು ಎಂದಿಗೂ ಮರೆಯುವುದಿಲ್ಲ. ಅವರ ಜನ್ಮದಿನದಂದು ಅವರ ದೇಶಭಕ್ತಿಗೆ ನಮ್ಮ ನಮನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ಯುವಕರಿಗೆ ಆದರ್ಶ
ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ ಜಯಂತಿಯಂದು, ಅವರಿಗೆ ನನ್ನ ವಿಧೇಯ ನಮನಗಳು. ಅವರ ಧೈರ್ಯ, ಶೌರ್ಯ ಮತ್ತು ಆದರ್ಶಗಳು ಎಂದಿಗೂ ಮುಂದಿನ ತಲೆಮಾರುಗಳಿಗೆ ಸ್ಫೂರ್ತಿ ನೀಡಲಿ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
|
ಭಾರತದ ಧೈರ್ಯವಂತ ಪುತ್ರನಿಗೆ ನಮನ
ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂದು ಶೌರ್ಯದಿಂದ ಹೇಳಿದ, ಭಾರತದ ಧೈರ್ಯವಂತ ಪುತ್ರರಲ್ಲೊಬ್ಬರಾದ ನೇತಾಜಿ ಅವರ ಜನ್ಮದಿನಕ್ಕೆ ಅವರಿಗೆ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ ಮಾಜಿ ಕ್ರಿಕೆಟಿಗ ಮೊಹ್ಮದ್ ಕೈಫ್.
|
ಭಾರತದ ಹೆಮ್ಮೆಯ ಪುತ್ರನಿಗೆ ತಲೆಬಾಗುತ್ತೇನೆ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು, ಭಾರತದ ಹೆಮ್ಮೆಯ ಪುತ್ರನಿಗೆ ತಾನು ತಲೆಬಾಗುತ್ತೇನೆ. ನೇತಾಜಿ ಅವರ ಧಅಯರ್ಯ, ಶೌರ್ಯಗಳು ಮುಂದಿನ ತಲೆಮಾರುಗಳಿಗೆ ಪ್ರೇರಣೆಯಾಗಲಿ ಎಂದಿದ್ದಾರೆ ಬಿಜೆಬಿ ಕರ್ನಾಟಕ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications