ವಿಜಯದಶಮಿ ದಿನದಂದು 7 ರಕ್ಷಣಾ ಸಂಸ್ಥೆಗೆ ಮೋದಿಯಿಂದ ಚಾಲನೆ
ನವದೆಹಲಿ, ಅಕ್ಟೋಬರ್ 14: ವಿಜಯದಶಮಿಯ ಪವಿತ್ರ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 2021ರ ಅಕ್ಟೋಬರ್ 15ರಂದು ಮಧ್ಯಾಹ್ನ ಸುಮಾರು 12.10ಕ್ಕೆ ರಕ್ಷಣಾ ಸಚಿವಾಲಯ ಆಯೋಜಿಸಿರುವ 7 ಹೊಸ ರಕ್ಷಣಾ ಕಂಪನಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮ ಉದ್ದೇಶಿಸಿ ವಿಡಿಯೊ ಭಾಷಣ ಮಾಡಲಿದ್ದಾರೆ.
ರಕ್ಷಣಾ ಸಚಿವರು, ರಕ್ಷಣಾ ಖಾತೆ ಸಹಾಯಕ ಸಚಿವರು ಮತ್ತು ರಕ್ಷಣಾ ಉದ್ಯಮದ ಸಂಸ್ಥೆಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.
7 ಹೊಸ ರಕ್ಷಣಾ ಕಂಪನಿಗಳ ಕುರಿತು:
ದೇಶದ ರಕ್ಷಣಾ ಸನ್ನದ್ಧತೆಯಲ್ಲಿ ಸ್ವಾವಲಂಬನೆ ಸುಧಾರಿಸುವ ಕ್ರಮವಾಗಿ ಸರ್ಕಾರಿ ಇಲಾಖೆಯಿಂದ ಶಸ್ತ್ರಾಸ್ತ್ರ ಕಾರ್ಖಾನೆ ಮಂಡಳಿಯನ್ನು ಶೇ.100ರಷ್ಟು ಸರ್ಕಾರಿ ಒಡೆತನದ 7 ಕಾರ್ಪೊರೇಟ್ ಸಂಸ್ಥೆಗಳನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ಈ ಕ್ರಮವು ಕ್ರಿಯಾತ್ಮಕ ಸ್ವಾಯತ್ತತೆ ವೃದ್ಧಿಸುತ್ತದೆ, ದಕ್ಷತೆಯನ್ನು ತರುತ್ತದೆ ಮತ್ತು ಹೊಸ ಬೆಳವಣಿಗೆಯ ಸಾಮರ್ಥ್ಯ ಮತ್ತು ನಾವೀನತ್ಯೆಯನ್ನು ಹುಟ್ಟು ಹಾಕುತ್ತದೆ.
ಸ್ಥಾಪನೆಯಾಗಿರುವ 7 ಹೊಸ ರಕ್ಷಣಾ ಕಂಪನಿಗಳೆಂದರೆ; ಮುನಿಷನ್ಸ್ ಇಂಡಿಯಾ ಲಿಮಿಟೆಡ್ (ಎಂಐಎಲ್); ಆರ್ಮೊರ್ಡ್ ವೆಹಿಕಲ್ಸ್(ಶಸ್ತ್ರ ಸಜ್ಜಿತ ವಾಹನಗಳು) ನಿಗಮ ಲಿಮಿಟೆಡ್(ಎವಿಎಎನ್ ಐ); ಅಡ್ವಾನ್ಸ್ಡ್ ವೆಪನ್ಸ್ ಅಂಡ್ ಎಕ್ಯೂಪ್ ಮೆಂಟ್ ಇಂಡಿಯಾ ಲಿಮಿಟೆಡ್(ಎಡಬ್ಲ್ಯೂಇ ಇಂಡಿಯಾ); ಟ್ರೂಪ್ ಕಂಫರ್ಟ್ಸ್ ಲಿಮಿಟೆಡ್(ಟಿಸಿಎಲ್); ಯಂತ್ರ ಇಂಡಿಯಾ ಲಿಮಿಟೆಡ್ (ವೈಐಎಲ್); ಇಂಡಿಯಾ ಒಪ್ಟೆಲ್ ಲಿಮಿಟೆಡ್(ಐಒಎಲ್ ) ಮತ್ತು ಗ್ಲೈಡರ್ಸ್ ಇಂಡಿಯಾ ಲಿಮಿಟೆಡ್(ಜಿಐಎಲ್)
ಸೌರಾಷ್ಟ್ರದಲ್ಲಿ ಭೂಮಿ ಪೂಜೆ ನೆರವೇರಿಸಲಿರುವ ಪ್ರಧಾನಮಂತ್ರಿ
ಅಕ್ಟೋಬರ್ 15 ರಂದು ಸೂರತ್ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜದ ವಸತಿ ನಿಲಯ ಹಂತ - 1 ರ ಕಟ್ಟಡಕ್ಕೆ ಭೂಮಿ ಪೂಜೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೆರವೇರಿಸಲಿದ್ದಾರೆ.
ಸೌರಾಷ್ಟ್ರ ಪಟೇಲ್ ಸೇವಾ ಸಮಾಜದ ವಸತಿ ನಿಲಯ ಹಂತ - 1 ರ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮವು ಅಕ್ಟೋಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಅವರು ಸಹ ಪಾಲ್ಗೊಳ್ಳಲಿದ್ದಾರೆ.
ವಸತಿ ನಿಲಯದ ಕಟ್ಟಡ 1,500 ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಒದಗಿಸಲಿದೆ. ವಿದ್ಯಾರ್ಥಿಗಳಿಗಾಗಿಯೇ ಮೀಸಲಾದ ಗ್ರಂಥಾಲಯ ಮತ್ತು ಸಭಾಂಗಣವನ್ನು ಇದು ಒಳಗೊಂಡಿದೆ. ವಸತಿ ನಿಲಯ ಹಂತ - 11 ರ ಕಟ್ಟಡದಲ್ಲಿ 500 ವಿದ್ಯಾರ್ಥಿನೀಯರಿಗೆ ಅವಕಾಶ ಕಲ್ಪಿಸುತ್ತಿದ್ದು, ಇದರ ಕೆಲಸ ಮುಂದಿನ ವರ್ಷ ಕಾರ್ಯಾರಂಭವಾಗಲಿದೆ.
ಸೌರಾಷ್ಟ್ರ ಪಟೇಲ್ ಸೇವಾ ಸಮಾಜ್ ಕುರಿತು:
ಸಮಾಜದಲ್ಲಿನ ದುರ್ಬಲ ವರ್ಗಗಳಿಗೆ ಶಿಕ್ಷಣ ಮತ್ತು ಸಮಾಜಿಕ ಪರಿವರ್ತನೆ ತರುವ ಉದ್ದೇಶದಿಂದ 1983 ರಲ್ಲಿ ಈ ಸಂಸ್ಥೆ ಸ್ಥಾಪನೆಯಾಗಿದ್ದು, ಇದು ನೋಂದಾಯಿತ ಟ್ರಸ್ಟ್ ಆಗಿದೆ. ವಿದ್ಯಾರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ಇಲ್ಲಿ ನೆರವು ದೊರೆಯುತ್ತಿದೆ ಮತ್ತು ಕೌಶಲ್ಯ ಅಭಿವೃದ್ಧಿ ಪಡೆಯಲು ಮತ್ತು ಉದ್ಯಮಶೀಲರಾಗಲು ಸಹ ಇದು ವೇದಿಕೆಯಾಗಿದೆ. (ಪ್ರಧಾನಿ ಸಚಿವಾಲಯ)