ಪಾಕಿಸ್ತಾನದ ವಿರುದ್ಧ ಕಿಡಿಕಾರಿದ ಕ್ರಿಕೆಟಿಗ ಮೊಹಮ್ಮದ್ ಕೈಫ್
ನವದೆಹಲಿ, ಡಿಸೆಂಬರ್ 25: ಅಲ್ಪಸಂಖ್ಯಾತರ ವಿಚಾರದಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್, 'ಪಾಕಿಸ್ತಾನವು ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳಬೇಕು ಎಂದು ಬೇರೆ ದೇಶಗಳಿಗೆ ಉಪದೇಶ ನೀಡುವ ಕೊನೆಯ ದೇಶವಾಗಲಿ' ಎಂದು ಹೇಳಿದ್ದಾರೆ.
ಲ್ಪಸಂಖ್ಯಾತರನ್ನು ಹೇಗೆ ನೋಡಿಕೊಳ್ಳಬೇಕು ಎಂಬುದನ್ನು ನಾವು ಮೋದಿ ಸರಕಾರಕ್ಕೆ ತೋರಿಸಿಕೊಡುತ್ತೇವೆ. ಅಲ್ಪಸಂಖ್ಯಾತರನ್ನು ಸಮಾನವಾಗಿ ಕಾಣುತ್ತಿಲ್ಲ ಭಾರತದಲ್ಲಿ ಕೂಡ ಜನರು ಹೇಳುತ್ತಿದ್ದಾರೆ ಎಂದು ಇಮ್ರಾನ್ ಖಾನ್ ಹೇಳಿದ್ದರು.
ಭಾರತದಲ್ಲಿ ಪೊಲೀಸ್ ಅಧಿಕಾರಿಯ ಸಾವಿಗಿಂತ ಗೋವುಗಳ ಹತ್ಯೆಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತದಿದೆ ಎಂಬ ನಟ ನಾಸಿರುದ್ದೀನ್ ಶಾ ಹೇಳಿಕೆಯನ್ನು ಉಲ್ಲೇಖಿಸಿ ಇಮ್ರಾನ್ ಖಾನ್ ಹೇಳಿದ್ದರು.

ಇದಕ್ಕೆ ಟ್ವಿಟ್ಟರ್ನಲ್ಲಿ ಇಮ್ರಾನ್ ಖಾನ್ ವಿರುದ್ಧ ಕಿಡಿ ಕಾರಿರುವ ಮೊಹಮ್ಮದ್ ಕೈಫ್, 'ದೇಶ ವಿಭಜನೆಯ ಸಮಯದಲ್ಲಿ ಪಾಕಿಸ್ತಾನದಲ್ಲಿ ಶೇ 20ರಷ್ಟು ಅಲ್ಪಸಂಖ್ಯಾತರಿದ್ದರು. ಆದರೆ ಈಗ ಅವರ ಪ್ರಮಾಣ ಶೇ 2ಕ್ಕಿಂತಲೂ ಕಡಿಮೆ ಇದೆ. ಇನ್ನೊಂದೆಡೆ ಭಾರತದಲ್ಲಿ ಸ್ವಾತಂತ್ರ್ಯ ಬಂದ ಬಳಿಕದಿಂದಲೂ ಅಲ್ಪಸಂಖ್ಯಾತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಪಾಕಿಸ್ತಾನವು ಅಲ್ಪಸಂಖ್ಯಾತರನ್ನು ಹೇಗೆ ನೋಡಿಕೊಳ್ಳಬೇಕು ಎಂದು ಯಾವುದೇ ದೇಶಕ್ಕೆ ಪಾಠ ಮಾಡುವ ಕೊನೆಯ ದೇಶವಾಗಲಿ' ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.
There were around 20% minorities at the time of Partition in Pakistan,less than 2% remain now. On the other hand minority population has grown significantly in India since Independence. Pakistan is the last country that should be lecturing any country on how to treat minorities. https://t.co/6GTr3gwyEa
— Mohammad Kaif (@MohammadKaif) 25 December 2018
ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕೂಡ ಭಾನುವಾರ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮುಖ್ಯವಾಗಿ 'ಒಳಗೊಳ್ಳುವ ರಾಜಕಾರಣ ಮತ್ತು ಅಲ್ಪಸಂಖ್ಯಾತರ ಹಕ್ಕುಗಳು' ಸೇರಿದಂತೆ ಭಾರತದಿಂದ ಸ್ವಲ್ಪ ವಿವೇಕವನ್ನು ಪಡೆದುಕೊಳ್ಳಲಿ ಎಂದು ಸಲಹೆ ನೀಡಿದ್ದರು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications