ಮೊಹಮ್ಮದ್ ಕೈಫ್ ಗೆ ಅಂಟಿಕೊಂಡಿತು 'ತ್ರಿವಳಿ ತಲಾಖ್' ವಿವಾದ
ಟ್ರಿಪಲ್ ತಲಾಖ್ ವಿರುದ್ಧ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಬೆಂಬಲಿಸಿದ್ದಕ್ಕೆ ಕ್ರಿಕೆಟಿಗ ಮೊಹಮ್ಮದ್ ಕೈಫ್ ಗೆ ತರಾಟೆ. ಟ್ವೀಟ್ಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಟ್ವಿಟ್ಟರ್ ನಲ್ಲಿ ಮುಸ್ಲಿಂ ಬಾಂಧವರಿಂದ ತರಾಟೆ. ಹಿಂದೂ ಟ್ವಿ
ನವದೆಹಲಿ, ಆಗಸ್ಟ್ 23: ತ್ರಿವಳಿ ತಲಾಖ್ ಅನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಮಂಗಳವಾರ ನೀಡಿದ್ದ ತೀರ್ಪನ್ನು ಬೆಂಬಲಿಸಿದ್ದ ಕ್ರಿಕೆಟಿಗ ಮೊಹಮ್ಮದ್ ಕೈಫ್ ಗೆ ಟ್ವಿಟರ್ ನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
ಮಂಗಳವಾರವೇ ಈ ಬಗ್ಗೆ ಟ್ವೀಟ್ ಮಾಡಿದ್ದ ಕೈಫ್, 'ತ್ರಿವಳಿ ತಲಾಖ್ ಅಸಾಂವಿಧಾನಿಕ ಎಂದು ಹೇಳಿರುವ ಸುಪ್ರೀಂ ಕೋರ್ಟ್ ನ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಈ ತೀರ್ಪು ಮುಸ್ಲಿಂ ಮಹಿಳೆಯರಿಗೆ ಮತ್ತಷ್ಟು ಸುರಕ್ಷತೆಯನ್ನು ಕೊಡುತ್ತದೆ. ಲಿಂಗ ಸಮಾನತೆ ಇಂದಿನ ಅವಶ್ಯಕತೆಗಳಲ್ಲೊಂದು' ಎಂದು ತಿಳಿಸಿದ್ದರು.

ಆದರೆ, ಇವರ ಟ್ವೀಟ್ ಅನ್ನು ಹಲವಾರು ಮಂದಿ ಟೀಕಿಸಿದ್ದಾರೆ. ಕ್ಸನೂರ್ ಭಟ್ ಎಂಬುವರು 'ಇಸ್ಲಾಂ ಧರ್ಮದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ. ಇದು ನಿಮಗೆ ಗೊತ್ತಿಲ್ಲವೇ? ಮಹಿಳೆಯರ ಸುರಕ್ಷತೆಯ ಹೆಸರಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪನ್ನು ನೀವು ಹೇಗೆ ಬೆಂಬಲಿಸುತ್ತೀರಿ?' ಎಂದು ಕೇಳಿದ್ದಾರೆ.

ರೆಬೆಲ್ ಲಡ್ಕಾ ಎಂಬ ಖಾತೆ ಹೊಂದಿರುವ ವ್ಯಕ್ತಿಯು, 'ನೀವು ಯಾರನ್ನು ಮೆಚ್ಚಿಸಲು ಇಂಥ ಟ್ವೀಟ್ ಗಳನ್ನು ಮಾಡುತ್ತೀರಿ' ಎಂದು ತಿಳಿಸಿದರು.

ಇನ್ನು, ಮೊಹಮ್ಮದ್ ಅಲಿ ಎಂಬಾತ, 'ನೀವು ಖುರಾನ್ ಓದಿದ್ದೀರಾ? ಓದಿದ್ದರೆ, ನಿಮಗೆ ಲಿಂಗ ಸಮಾನತೆ ಹಾಗೂ ಮಹಿಳಾ ಸುರಕ್ಷತೆ ವಿಚಾರಗಳು ಅರ್ಥವಾಗಿರಬೇಕಿತ್ತು' ಎಂದು ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯದ ಕೆಲವರು ಹೀಗೆ ಟ್ವೀಟ್ ಮಾಡಿ ಕೈಫ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರೆ, ಹಿಂದೂ ಧರ್ಮಕ್ಕೆ ಸೇರಿದ ಕೆಲವರು ಕೈಫ್ ಅವರಿಗೆ ನೈತಿಕ ಬೆಂಬಲ ಕೊಟ್ಟಿದ್ದಾರೆ. ಕೆಲವರು ಹುಷಾರಾಗಿರಿ ಎಂದು ತಮಾಷೆಯನ್ನೂ ಮಾಡಿದ್ದಾರೆ.

ರವೀಂದ್ರ ಜಾಧವ್ ಎಂಬುವರು, 'ಕೈಫ್ ಅವರೇ ನಿಮ್ಮ ವಿರುದ್ಧವೇ ಫತ್ವಾ ಹೊರಡಿಸಬಹುದು, ಎಚ್ಚರವಾಗಿರಿ' ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರೆ.

ರೋಹಿತ್ ಕೊಠಾರಿ ಎಂಬುವರು, 'ಕೆಟ್ಟ ಸಂಪ್ರದಾಯದ ವಿರುದ್ಧ ನೀವು ಹೀಗೆ ಬಹಿರಂಗವಾಗಿ ಮಾತನಾಡಿದ್ದಕ್ಕೆ ನಮ್ಮ ಬೆಂಬಲವಿದೆ. ನೀವು ಫತ್ವಾಕ್ಕೆ ಹೆದರುವುದಿಲ್ಲ ಎಂದಿರಬಹುದು' ಎಂದು ತಿಳಿಸಿದ್ದಾರೆ.

ಇನ್ನು, ಅಂಕುರ್ ಕುಮಾರ್ ಎಂಬುವರು, 'ಅಯ್ಯೋ, ಟ್ವೀಟ್ ಮೂಲಕ ಇಂಥದ್ದನ್ನೆಲ್ಲವನ್ನೂ ಹೇಳಬೇಡಿ. ನಿಮಗೆ ಅದರಿಂದ ತೊಂದರೆಯಾದೀತು' ಎಂದು ಎಚ್ಚರಿಸಿದ್ದಾರೆ.

ಒಟ್ಟಿನಲ್ಲಿ, ಕೈಫ್ ಅವರಿಗೆ ಟ್ವಿಟ್ಟರ್ ನಲ್ಲಿ ವಿರೋಧ, ಬೆಂಬಲ ಎರಡೂ ಸಿಕ್ಕಿವೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications