ಉಗ್ರ ನವೀದ್ ಭಾರತಕ್ಕೆ ನುಸುಳಿ ಬಂದಿದ್ದು ಎಲ್ಲಿಂದ?
ಬೆಂಗಳೂರು, ಆಗಸ್ಟ್ 8 : ಜಮ್ಮು-ಕಾಶ್ಮೀರದಲ್ಲಿ ಸೆರೆಸಿಕ್ಕ ಉಗ್ರ ಮೊಹಮ್ಮದ್ ನವೀದ್ ಭಾರತಕ್ಕೆ ನುಸುಳಿದ್ದು ಹೇಗೆ? ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾವ ಮಾರ್ಗದಿಂದ ನವೀದ್ ಮತ್ತು ಇತರ ಉಗ್ರರು ದೇಶಕ್ಕೆ ನುಸುಳಿ ಬಂದರು ಎಂಬುದು ತನಿಖೆಗೆ ಹೆಚ್ಚು ಸಹಕಾರಿಯಾಗಲಿದೆ.
ಉಧಾಂಪುರ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಜಮ್ಮು-ಕಾಶ್ಮೀರದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳದ ತಂಡವೂ ತನಿಖೆಗೆ ಕೈ ಜೋಡಿಸಿದೆ. ಆದರೆ, ಪೊಲೀಸರು ಇನ್ನೂ ತನಿಖೆಯನ್ನು ಎನ್ಐಎ ಕೈಗೆ ಹಸ್ತಾಂತರ ಮಾಡಿಲ್ಲ.[ನವೀದ್ ಲಷ್ಕರ್ ಸೇರಿದ್ದು ಹೇಗೆ?]

ಶನಿವಾರ ನವೀದ್ನನ್ನು ಕಾಶ್ಮೀರದ ವಿವಿಧ ಪ್ರದೇಶಗಳಿಗೆ ಕರೆದುಕೊಂಡು ಹೋಗಿ ಆತ ಭಾರತಕ್ಕೆ ನುಸುಳಿದ ಮಾರ್ಗದ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಣೆ ಮಾಡಲಿದ್ದಾರೆ. ವಿಚಾರಣೆ ವೇಳೆ ಆತ ಹಲವು ಮಾರ್ಗಗಳ ಹೆಸರು ಹೇಳಿದ್ದು, ಗಡಿಯಲ್ಲಿನ ಬೇಲಿ ಕತ್ತರಿಸಿ ನುಸುಳಿದ್ದಾಗಿ ಹೇಳಿದ್ದಾನೆ. ಈ ಕುರಿತು ಇಂದು ತನಿಖೆ ನಡೆಯಲಿದೆ. [ನವೀದ್ ಬಾಲಾಪರಾಧಿ ಎಂದು ಸಾಬೀತಾದರೆ?]
ಸ್ಥಳೀಯರು ಸಹಕಾರ ನೀಡಿದ್ದರೆ? : ಮೂವರು ಉಗ್ರರು ಭಾರತಕ್ಕೆ ನುಸುಳಲು ಸ್ಥಳೀಯರು ಸಹಕಾರ ನೀಡಿದ್ದರೆ? ಎಂಬ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಭಾರತಕ್ಕೆ ನುಸುಳಿ ಬಂದ ನವೀದ್ ಕೆಲವು ದಿನ ಮನೆಯೊಂದರಲ್ಲಿ ತಂಗಿದ್ದೆ ಎಂದು ಹೇಳಿದ್ದಾನೆ. ಉಗ್ರನಿಗೆ ಆಶ್ರಯ ಕೊಟ್ಟವರು ಯಾರು? ಎಂದು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಎನ್ಐಗೆ ತನಿಖೆ ಹಸ್ತಾಂತರ : ಜಮ್ಮು-ಕಾಶ್ಮೀರ ಪೊಲೀಸರು ಉಗ್ರರ ದಾಳಿ ತನಿಖೆಯನ್ನು ಎನ್ಐಎಗೆ ಹಸ್ತಾಂತರ ಮಾಡಿಲ್ಲ. ಎನ್ಐಎ ಮತ್ತು ರಾಜ್ಯ ಪೊಲೀಸರು ಜಂಟಿಯಾಗಿ ಈಗ ತನಿಖೆ ನಡೆಸುತ್ತಿದ್ದಾರೆ. ರಾಜ್ಯದ ಪೊಲೀಸರು ತನಿಖೆಯನ್ನು ಹಸ್ತಾಂತರ ಮಾಡುವ ಕುರಿತು ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications