ಉಗ್ರ ನವೀದ್ ಭಾರತಕ್ಕೆ ನುಸುಳಿ ಬಂದಿದ್ದು ಎಲ್ಲಿಂದ?
ಬೆಂಗಳೂರು, ಆಗಸ್ಟ್ 8 : ಜಮ್ಮು-ಕಾಶ್ಮೀರದಲ್ಲಿ ಸೆರೆಸಿಕ್ಕ ಉಗ್ರ ಮೊಹಮ್ಮದ್ ನವೀದ್ ಭಾರತಕ್ಕೆ ನುಸುಳಿದ್ದು ಹೇಗೆ? ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾವ ಮಾರ್ಗದಿಂದ ನವೀದ್ ಮತ್ತು ಇತರ ಉಗ್ರರು ದೇಶಕ್ಕೆ ನುಸುಳಿ ಬಂದರು ಎಂಬುದು ತನಿಖೆಗೆ ಹೆಚ್ಚು ಸಹಕಾರಿಯಾಗಲಿದೆ.
ಉಧಾಂಪುರ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಜಮ್ಮು-ಕಾಶ್ಮೀರದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳದ ತಂಡವೂ ತನಿಖೆಗೆ ಕೈ ಜೋಡಿಸಿದೆ. ಆದರೆ, ಪೊಲೀಸರು ಇನ್ನೂ ತನಿಖೆಯನ್ನು ಎನ್ಐಎ ಕೈಗೆ ಹಸ್ತಾಂತರ ಮಾಡಿಲ್ಲ.[ನವೀದ್ ಲಷ್ಕರ್ ಸೇರಿದ್ದು ಹೇಗೆ?]

ಶನಿವಾರ ನವೀದ್ನನ್ನು ಕಾಶ್ಮೀರದ ವಿವಿಧ ಪ್ರದೇಶಗಳಿಗೆ ಕರೆದುಕೊಂಡು ಹೋಗಿ ಆತ ಭಾರತಕ್ಕೆ ನುಸುಳಿದ ಮಾರ್ಗದ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಣೆ ಮಾಡಲಿದ್ದಾರೆ. ವಿಚಾರಣೆ ವೇಳೆ ಆತ ಹಲವು ಮಾರ್ಗಗಳ ಹೆಸರು ಹೇಳಿದ್ದು, ಗಡಿಯಲ್ಲಿನ ಬೇಲಿ ಕತ್ತರಿಸಿ ನುಸುಳಿದ್ದಾಗಿ ಹೇಳಿದ್ದಾನೆ. ಈ ಕುರಿತು ಇಂದು ತನಿಖೆ ನಡೆಯಲಿದೆ. [ನವೀದ್ ಬಾಲಾಪರಾಧಿ ಎಂದು ಸಾಬೀತಾದರೆ?]
ಸ್ಥಳೀಯರು ಸಹಕಾರ ನೀಡಿದ್ದರೆ? : ಮೂವರು ಉಗ್ರರು ಭಾರತಕ್ಕೆ ನುಸುಳಲು ಸ್ಥಳೀಯರು ಸಹಕಾರ ನೀಡಿದ್ದರೆ? ಎಂಬ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಭಾರತಕ್ಕೆ ನುಸುಳಿ ಬಂದ ನವೀದ್ ಕೆಲವು ದಿನ ಮನೆಯೊಂದರಲ್ಲಿ ತಂಗಿದ್ದೆ ಎಂದು ಹೇಳಿದ್ದಾನೆ. ಉಗ್ರನಿಗೆ ಆಶ್ರಯ ಕೊಟ್ಟವರು ಯಾರು? ಎಂದು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಎನ್ಐಗೆ ತನಿಖೆ ಹಸ್ತಾಂತರ : ಜಮ್ಮು-ಕಾಶ್ಮೀರ ಪೊಲೀಸರು ಉಗ್ರರ ದಾಳಿ ತನಿಖೆಯನ್ನು ಎನ್ಐಎಗೆ ಹಸ್ತಾಂತರ ಮಾಡಿಲ್ಲ. ಎನ್ಐಎ ಮತ್ತು ರಾಜ್ಯ ಪೊಲೀಸರು ಜಂಟಿಯಾಗಿ ಈಗ ತನಿಖೆ ನಡೆಸುತ್ತಿದ್ದಾರೆ. ರಾಜ್ಯದ ಪೊಲೀಸರು ತನಿಖೆಯನ್ನು ಹಸ್ತಾಂತರ ಮಾಡುವ ಕುರಿತು ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications