ಸೋನಿಯಾ ಗಾಂಧಿ ಆಪ್ತನ ನಿವಾಸದ ಮೇಲೆ ಇಡಿ ದಾಳಿ
ನವದೆಹಲಿ, ಜೂನ್ 27: ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿ ಜಾರಿ ನಿರ್ದೇಶನಾಲಯ (ಇಡಿ) ಪ್ರಮುಖ ರಾಜಕಾರಣಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದೆ.
Recommended Video
ಸೋನಿಯಾ ಗಾಂಧಿ ಪರಮಾಪ್ತ, ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ನಿವಾಸದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು, ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
ಸಂದೇಸರ ಸಮೂಹ ಕಂಪನಿಯ ಹದಿನೈದು ಸಾವಿರ ಕೋಟಿ ವಂಚನೆ ಪ್ರಕರಣದಲ್ಲಿ ಅಹ್ಮದ್ ಪಟೇಲ್ ಶಾಮೀಲಾಗಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯ, ಇದೇ ಮೊದಲ ಬಾರಿ ದಾಳಿ ನಡೆಸಿ ಕೆಲವು ದಾಖಲೆಗಳನ್ನು ಪರಿಶೀಲಿಸುತ್ತಿದೆ.

ಮನಿ ಲಾಂಡ್ರಿಂಗ್ ಕಾಯ್ದೆಯಡಿ, ಇಡಿಯ ಮೂರು ಸದಸ್ಯರ ತಂಡ ಅಹ್ಮದ್ ಪಟೇಲ್ ಅವರ ಕೇಂದ್ರ ದೆಹಲಿಯಲ್ಲಿರುವ ನಿವಾಸಕ್ಕೆ ತೆರಳಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೊಟೀಸ್ ಕಳುಹಿಸಿತ್ತು.ಆದರೆ, ಕೋವಿಡ್ 19 ಹಾವಳಿ ಹೆಚ್ಚಾಗಿರುವುದರಿಂದ, ಹಿರಿಯ ನಾಗರೀಕರು ಮನೆಯಲ್ಲೇ ಇರಬೇಕು ಎನ್ನುವ ಮಾರ್ಗಸೂಚಿ ಇರುವುದರಿಂದ, ಅಹ್ಮದ್ ಪಟೇಲ್ ವಿಚಾರಣೆಗೆ ಹಾಜರಾಗಿರಲಿಲ್ಲ.
ಸ್ಟೆರ್ಲಿಂಗ್ ಬಯೋಟೆಕ್ ಮಾಲೀಕತ್ವದ ಸಂದೇಸರ ಗ್ರೂಪ್, ಅಹ್ಮದ್ ಪಟೇಲ್ ಅವರ ಪ್ರಭಾವದಿಂದ ವಿವಿಧ ಬ್ಯಾಂಕುಗಳಿಂದ 15 ಸಾವಿರ ಕೋಟಿ ಹಣವನ್ನು ಸಾಲದ ರೂಪದಲ್ಲಿ ಪಡೆದಿತ್ತು. ಆದರೆ, ಸಂದೇಸರ ಗ್ರೂಪ್ ಬ್ಯಾಂಕಿಗೆ ಹಣ ಹಿಂದಿರುಗಿಸದ ಆರೋಪವಿತ್ತು. ಬ್ಯಾಂಕ್ ನಿಂದ ಸಾಲ ಕೊಡಿಸಲು ಅಹಮದ್ ಪಟೇಲ್ ಭಾರೀ ಮೊತ್ತದ ಲಂಚವನ್ನು ಪಡೆದಿದ್ದರು ಎನ್ನುವ ಆರೋಪವಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications