ಸೋನಿಯಾ ಗಾಂಧಿ ಆಪ್ತನ ನಿವಾಸದ ಮೇಲೆ ಇಡಿ ದಾಳಿ
ನವದೆಹಲಿ, ಜೂನ್ 27: ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿ ಜಾರಿ ನಿರ್ದೇಶನಾಲಯ (ಇಡಿ) ಪ್ರಮುಖ ರಾಜಕಾರಣಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದೆ.
Recommended Video
ಸೋನಿಯಾ ಗಾಂಧಿ ಪರಮಾಪ್ತ, ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ನಿವಾಸದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು, ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
ಸಂದೇಸರ ಸಮೂಹ ಕಂಪನಿಯ ಹದಿನೈದು ಸಾವಿರ ಕೋಟಿ ವಂಚನೆ ಪ್ರಕರಣದಲ್ಲಿ ಅಹ್ಮದ್ ಪಟೇಲ್ ಶಾಮೀಲಾಗಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯ, ಇದೇ ಮೊದಲ ಬಾರಿ ದಾಳಿ ನಡೆಸಿ ಕೆಲವು ದಾಖಲೆಗಳನ್ನು ಪರಿಶೀಲಿಸುತ್ತಿದೆ.

ಮನಿ ಲಾಂಡ್ರಿಂಗ್ ಕಾಯ್ದೆಯಡಿ, ಇಡಿಯ ಮೂರು ಸದಸ್ಯರ ತಂಡ ಅಹ್ಮದ್ ಪಟೇಲ್ ಅವರ ಕೇಂದ್ರ ದೆಹಲಿಯಲ್ಲಿರುವ ನಿವಾಸಕ್ಕೆ ತೆರಳಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೊಟೀಸ್ ಕಳುಹಿಸಿತ್ತು.ಆದರೆ, ಕೋವಿಡ್ 19 ಹಾವಳಿ ಹೆಚ್ಚಾಗಿರುವುದರಿಂದ, ಹಿರಿಯ ನಾಗರೀಕರು ಮನೆಯಲ್ಲೇ ಇರಬೇಕು ಎನ್ನುವ ಮಾರ್ಗಸೂಚಿ ಇರುವುದರಿಂದ, ಅಹ್ಮದ್ ಪಟೇಲ್ ವಿಚಾರಣೆಗೆ ಹಾಜರಾಗಿರಲಿಲ್ಲ.
ಸ್ಟೆರ್ಲಿಂಗ್ ಬಯೋಟೆಕ್ ಮಾಲೀಕತ್ವದ ಸಂದೇಸರ ಗ್ರೂಪ್, ಅಹ್ಮದ್ ಪಟೇಲ್ ಅವರ ಪ್ರಭಾವದಿಂದ ವಿವಿಧ ಬ್ಯಾಂಕುಗಳಿಂದ 15 ಸಾವಿರ ಕೋಟಿ ಹಣವನ್ನು ಸಾಲದ ರೂಪದಲ್ಲಿ ಪಡೆದಿತ್ತು. ಆದರೆ, ಸಂದೇಸರ ಗ್ರೂಪ್ ಬ್ಯಾಂಕಿಗೆ ಹಣ ಹಿಂದಿರುಗಿಸದ ಆರೋಪವಿತ್ತು. ಬ್ಯಾಂಕ್ ನಿಂದ ಸಾಲ ಕೊಡಿಸಲು ಅಹಮದ್ ಪಟೇಲ್ ಭಾರೀ ಮೊತ್ತದ ಲಂಚವನ್ನು ಪಡೆದಿದ್ದರು ಎನ್ನುವ ಆರೋಪವಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ











Click it and Unblock the Notifications