ಅಕ್ರಮ ಹಣ ವರ್ಗಾವಣೆ ಪ್ರಕರಣ: ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ
ಗಾಜಿಪುರ ಡಿಸೆಂಬರ್ 15: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಶಾಸಕ ಹಾಗೂ ಬಾಹುಬಲಿ ಮುಖ್ತಾರ್ ಅನ್ಸಾರಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮಾಜಿ ಶಾಸಕ ಅನ್ಸಾರಿಗೆ ನ್ಯಾಯಾಲಯ 5 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ತಾರ್ ಅನ್ಸಾರಿ ಮತ್ತು ಭಾಮ್ ಸಿಂಗ್ ತಪ್ಪಿತಸ್ಥರು ಎಂದು ಸಾಬೀತಾಗಿದೆ. ಇದಾದ ನಂತರ ಗಾಜಿಪುರ ಐದು ಬಾರಿ ಶಾಸಕನಾದ ಅನ್ಸಾರಿ ಹಾಗೂ ಭಾಮ್ ಸಿಂಗ್ ಅವರನ್ನು ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿತ್ತು. ಇದರೊಂದಿಗೆ ಮುಕ್ತಾರ್ಗೆ 5 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ. 1996ರಲ್ಲಿ ದಾಖಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ 26 ವರ್ಷ ಪೂರೈಸಿದ ಬಳಿಕ ಇಂದು ಕೋರ್ಟ್ ತೀರ್ಪು ನೀಡಿದೆ.
ಇದಕ್ಕೂ ಮೊದಲು ಡಿಸೆಂಬರ್ 12 ರಂದು ಮುಖ್ತಾರ್ ಅನ್ಸಾರಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 11 ಸಾಕ್ಷಿಗಳ ಸಾಕ್ಷ್ಯ, ಕ್ರಾಸ್ ಎಕ್ಸಾಮಿನೇಷನ್ ಮತ್ತು ವಾದಗಳು ಪೂರ್ಣಗೊಂಡಿದ್ದು, ತೀರ್ಪು ಘೋಷಣೆಯ ದಿನಾಂಕವನ್ನು ಡಿಸೆಂಬರ್ 15 ಕ್ಕೆ ನಿಗದಿಪಡಿಸಲಾಗಿತ್ತು.
ಬಾಹುಬಲಿ ಮುಖ್ತಾರ್ ಅನ್ಸಾರಿ ವಿರುದ್ಧ 5 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಆದರೆ ಅವುಗಳಲ್ಲಿ 4 ಪ್ರಕರಣಗಳಲ್ಲಿ ಅವರನ್ನು ಖುಲಾಸೆಗೊಳಿಸಲಾಗಿತ್ತು. ಈ ಪ್ರಕರಣಗಳಲ್ಲಿ ಗಾಜಿಪುರದಲ್ಲಿ ಎರಡು, ವಾರಣಾಸಿಯಲ್ಲಿ ಎರಡು ಮತ್ತು ಚಂದೌಲಿಯಲ್ಲಿ ಒಂದು ಪ್ರಕರಣಗಳು ದಾಖಲಾಗಿವೆ. ಅವಧೇಶ್ ರೈ ಹತ್ಯೆ ಪ್ರಕರಣ, ಘಾಜಿಪುರದಲ್ಲಿ ಎಸ್ಎಸ್ಪಿ ಮತ್ತು ಪೊಲೀಸರ ಮೇಲೆ ಹತ್ಯೆಗೈದ ಪ್ರಕರಣ ಇದರಲ್ಲಿ ಸೇರಿವೆ. ಇದರಲ್ಲಿ ಕಾಂಗ್ರೆಸ್ ನಾಯಕ ಅಜಯ್ ರೈ ಅವರ ಹೇಳಿಕೆ ಮಹತ್ವದ್ದಾಗಿದೆ. ಅಜಯ್ ರೈ ಅವಧೇಶ್ ರೈ ಅವರು ಸಹೋದರರಾಗಿದ್ದಾರೆ.

ಬಾಹುಬಲಿ ಮುಖ್ತಾರ್ ಅನ್ಸಾರಿ ಸದ್ಯ ಬಂದಾ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಅನ್ಸಾರಿ ಮತ್ತು ಆತನ ಸಹಚರ ಭೀಮ್ ಸಿಂಗ್ ವಿರುದ್ಧ 1996 ರಲ್ಲಿ ಸದರ್ ಕೊತ್ವಾಲಿಯಲ್ಲಿ ಅಕ್ರಮ ಹಣ ವರ್ಗಾವಣೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. 26 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದಲ್ಲಿ ನವೆಂಬರ್ 25 ರಂದು ತೀರ್ಪು ಪ್ರಕಟಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಆದರೆ ನ್ಯಾಯಾಧೀಶರ ವರ್ಗಾವಣೆಯಿಂದಾಗಿ ತೀರ್ಪಿನಲ್ಲಿ ಸ್ವಲ್ಪ ವಿಳಂಬವಾಗಿದೆ.
ಇದಕ್ಕೂ ಒಂದು ದಿನ ಮುಂಚಿತವಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬುಧವಾರ ಇಡಿ ಬಾಹುಬಲಿ ಮಾಫಿಯಾ ಮುಕ್ತಾರ್ ಅನ್ಸಾರಿಯನ್ನು ಅಲಹಾಬಾದ್ನ ಜಿಲ್ಲಾ ನ್ಯಾಯಾಧೀಶ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಇಡಿ ನ್ಯಾಯಾಲಯದಿಂದ ಮುಕ್ತಾರ್ನನ್ನು 10 ದಿನಗಳ ಕಸ್ಟಡಿಗೆ ಪಡೆದಿತ್ತು. ಇಂದು ತೀರ್ಪು ಘೋಷಣೆ ಮಾಡಿದೆ.
-
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications