ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್‌ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ ನವೆಂಬರ್ 17: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಇಂದು ತಿರಸ್ಕರಿಸಿದೆ. ಜೈನ್ ಅವರ ಮನವಿಯ ಜೊತೆಗೆ, ಪ್ರಕರಣದ ಇಬ್ಬರು ಸಹ-ಆರೋಪಿಗಳಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಅವರ ಜಾಮೀನು ಅರ್ಜಿಗಳನ್ನು ಸಹ ನ್ಯಾಯಾಲಯ ವಜಾಗೊಳಿಸಿದೆ.

58 ವರ್ಷದ ದೆಹಲಿ ಸಚಿವರನ್ನು ಜಾರಿ ನಿರ್ದೇಶನಾಲಯವು ಮೇ 30 ರಂದು ಬಂಧಿಸಿತ್ತು. ಆಗಸ್ಟ್ 24, 2017 ರಂದು ಸಿಬಿಐ ದಾಖಲಿಸಿದ ಪ್ರಥಮ ಮಾಹಿತಿ ವರದಿ ಅಥವಾ ಎಫ್‌ಐಆರ್ ಆಧಾರದ ಮೇಲೆ ತನಿಖಾ ಸಂಸ್ಥೆಯು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ತನಿಖೆಯನ್ನು ಆರಂಭಿಸಿತ್ತು.

Money laundering case: Satyendra Jains bail application rejected

ಜೈನ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದು ಇದು ಎರಡನೇ ಬಾರಿ. ಆರೋಪದ ಗಂಭೀರತೆಯ ದೃಷ್ಟಿಯಿಂದ ಜೈನ್ ಅವರ ಜಾಮೀನು ಅರ್ಜಿಯನ್ನು ಜೂನ್‌ನಲ್ಲಿ ತಿರಸ್ಕರಿಸಲಾಗಿತ್ತು. ಜೈನ್ ಜೈನ್ ಐಷಾರಾಮಿ ಜೀವನಶೈಲಿಯನ್ನು ಆನಂದಿಸುತ್ತಿದ್ದಾರೆ ಮತ್ತು ಪ್ರಕರಣದ ಸಹ-ಆರೋಪಿಗಳನ್ನು ನಿಯಮಿತವಾಗಿ ಭೇಟಿ ಮಾಡುವ ಮೂಲಕ ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಸಿದೆ. ಸತ್ಯೇಂದ್ರ ಜೈನ್ ಅವರ ಪತ್ನಿ ಪೂನಂ ಜೈನ್ ಅವರ ಸೆಲ್‌ಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರು, ಇದು ಜೈಲು ನಿಯಮಗಳಿಗೆ ವಿರುದ್ಧವಾಗಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+