ಇನ್ನೊಂದು ದಿನದಲ್ಲೇ ಮುಂಗಾರು; ನಲಿದಾಡಲಿ ಬೆಂಗಳೂರು
ಬೇಸಿಗೆ ಬಿಸಿಲಿನಿಂದ ಬೇಸತ್ತ ದಕ್ಷಿಣ ಭಾರತಕ್ಕೆ ಇಲ್ಲೊಂದು ಸಿಹಿಸುದ್ದಿಯಿದೆ. ಈ ಬಾರಿ ಜೂನ್ ಮೊದಲ ವಾರದಲ್ಲೇ ಉತ್ತಮ ಮುಂಗಾರು ಮಳೆ ಬೀಳಲಿದೆ ಎಂದು ಹವಾಮಾನ ತಜ್ಞ ಕಾಂತಿ ಪ್ರಸಾದ್ ಹೇಳಿದ್ದಾರೆ.
ನವದೆಹಲಿ, ಮೇ 06: ಕೆಲವು ದಿನಗಳಿಂದ ಬಂದ ಒಂದೆರಡು ಮಳೆಗೆ ಕೊಂಚ ಹಸಿಯಾಗಿರುವ ಬೆಂಗಳೂರಿಗೆ ಇನ್ನೊಂದು ದಿನದಲ್ಲಿ ಮುಂಗಾರು ಮಾರುತಗಳು ಬಂದು ಅಪ್ಪಳಿಸಲಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈಗಾಗಲೇ ಏಪ್ರಿಲ್ 16ರಿಂದ ಮುಂಗಾರಿನ ಸೊಬಗು ಆರಂಭವಾಗಿದೆ. ಆಗಾಗ ಅಲ್ಪ ಸ್ವಲ್ಪ ಮಳೆ ಬಿದ್ದು ಬೆಂಗಳೂರನ್ನು ಕೊಂಚ ತಂಪಾಗಿಸಿದೆ.
ಅಂತೆಯೇ, ಮೇ 2ರಂದೂ ಅಲ್ಲಲ್ಲಿ ಮೋಡ ಕವಿದ ವಾತಾವರಣ, ಕೊಂಚ ಮಳೆ ಬಿದ್ದಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿರುವ ಹವಾಮಾನ ಇಲಾಖೆಯು ಮುಂಗಾರು ಮಳೆಯು ನಿರೀಕ್ಷೆಗಿಂತ ಇನ್ನೂ ಬೇಗನೇ ಬರುವ ಸಾಧ್ಯತೆಗಳಿವೆ ಎಂದು ಹೇಳಿದೆ. ಹಾಗಾಗಿ, ಈ ಬಾರಿ ಬೆಂಗಳೂರು ಬೇಸಿಗೆ ಬಿಸಿಯಿಂದ ತಂಪಾಗಲು ತುಂಬಾ ದಿನ ಕಾಯಬೇಕಿಲ್ಲ.

ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಜೂನ್ ಮೊದಲ ವಾರದಲ್ಲಿ ಮುಂಗಾರು ಮಾರುತಗಳ ಗಾಢತೆ ತೀವ್ರವಾಗಲಿವೆ ಎಂದು ಹೇಳಿದೆ.
ಅದರಂತೆ, ಈ ಬಾರಿ ಜೂನ್ ಮೊದಲ ವಾರದಲ್ಲೇ ಉತ್ತಮ ಮುಂಗಾರು ಮಳೆ ಬೀಳಲಿದೆ ಎಂದು ಹವಾಮಾನ ತಜ್ಞ ಕಾಂತಿ ಪ್ರಸಾದ್ ಹೇಳಿದ್ದಾರೆ. ಹವಾಮಾನ ನಿರ್ವಹಣಾ ಇಲಾಖೆ ಏರ್ಪಡಿಸಿದ್ದ ಸೆಮಿನಾರ್ ವೊಂದರಲ್ಲಿ ಮಾತನಾಡುತ್ತಿದ್ದ ಅವರು ಈ ಸಿಹಿಸುದ್ದಿ ತಿಳಿಸಿದ್ದಾರೆ.
ಜೂನ್ ಮೊದಲ ವಾರದಲ್ಲಿ ಕೇರಳದಿಂದ ಆರಂಭವಾಗುವ ಮುಂಗಾರು ಮಳೆ ಕ್ರಮೇಣ ದೇಶವ್ಯಾಪಿ ಹರಡಲಿದೆ ಎಂಬ ಸುದ್ದಿ ನೀರಿನ ಅಭಾವದಿಂದ ಬಳಲುತ್ತಿರುವವರುವವರಿಗೆ ಕೊಂಚ ನಿರಾಳತೆಯನ್ನುಂಟುಮಾಡಿದೆ.
ಅಕ್ಟೋಬರ್ ಮತ್ತು ನವೆಂಬರ್ ಹೊತ್ತಿಗೆ ಅತಿವೃಷ್ಠಿಯಾಗುವ ಸಂಭವವೂ ಇದೆ ಎಂದು ಕಾಂತಿ ಪ್ರಸಾದ್ ಮುನ್ನೆಚ್ಚರಿಕೆ ನೀಡಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications