ಅಕ್ಟೋಬರ್ ಅಂತ್ಯದವರೆಗೂ ಮುಂಗಾರು ವಿಸ್ತರಣೆ: ಎಲ್ಲೆಲ್ಲಿ ಮಳೆಯಾಗುತ್ತೆ?
ಬೆಂಗಳೂರು, ಅಕ್ಟೋಬರ್ 4: ಪ್ರತಿ ವರ್ಷವೂ ಸಾಮಾನ್ಯವಾಗಿ ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲವಾರದಲ್ಲೇ ಮುಂಗಾರು ಪ್ರಭಾವ ರಾಜ್ಯಾದ್ಯಂ ಕಡಿಮೆಯಾಗುತ್ತಿತ್ತು.
ಆದರೆ ಈ ಬಾರಿ ಅಕ್ಟೋಬರ್ ಅಂತ್ಯದವರೆಗೂ ಮುಂಗಾರು ವಿಸ್ತರಣೆಯಾಗಿದ್ದು, ರಾಜ್ಯಾದ್ಯಂತ ಇನ್ನೂ ಸುಮಾರು 20ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ 59 ವರ್ಷಗಳಲ್ಲೇ ಇದು ದಾಖಲೆ ಸೃಷ್ಟಿಸಿದೆ. ಅಕ್ಟೋಬರ್ ಮಧ್ಯದಲ್ಲಿ ಹಿಂಗಾರು ಪ್ರಾರಂಭವಾಗುತ್ತಿತ್ತು.

ಅಕ್ಟೋಬರ್ 10ರವರೆಗೂ ಭಾರಿ ಮಳೆ
ಅಕ್ಟೋಬರ್ 10ರವರೆಗೂ ಮುಂಗಾರು ಕೊನೆಗೊಳ್ಳುವ ಸೂಚನೆ ಇಲ್ಲ, ಜೂನ್ನಲ್ಲಿ ಕೇರಳದ ಕರಾವಳಿಯಿಂದ ಪ್ರವೇಶಿಸಿರುವ ಮುಂಗಾರು , ಸೆಪ್ಟೆಂಬರ್ ಮೊದಲ ವಾರದಲ್ಲಿ ಪಶ್ಚಿಮ ರಾಜಸ್ತಾನದಿಂದ ಮುಕ್ತಾಯವಾಗಲು ಪ್ರಾರಂಭಿಸುತ್ತದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.

ಮುಂಗಾರು ಎಷ್ಟು ತೀವ್ರವಾಗಲಿದೆ ಎಂದು ಅಂದಾಜಿಸಲು ಸಾಧ್ಯವಾಗಿಲ್ಲ
ಭಾರತೀಯ ಹವಾಮಾನ ಇಲಾಖೆ ಸಂಖ್ಯಾಶಾಸ್ತ್ರೀಯ ಮಾದರಿಯ ಆಧಾರದಲ್ಲಿ ಮುಂಗಾರು ಮತ್ತು ಇತರೆ ಹವಾಮಾನ ಮುನ್ಸೂಚನೆಯನ್ನು ನೀಡುತ್ತದೆ. ಆದರೆ ಮುಂಗಾರು ಎಷ್ಟು ಪ್ರಬಲವಾಗಿರಲಿದೆ ಎಂದು ಅಂದಾಜಿಸಲು ಸಾಧ್ಯವಾಗಿಲ್ಲ.

ಹಿಂಗಾರು ಸ್ವಲ್ಪ ತಡ
ಮುಂಗಾರು ಅಕ್ಟೋಬರ್ ಅಂತ್ಯದ ವರೆಗೂ ಮುಂದುವರೆಯುವುದರಿಂದ ಹಿಂಗಾರು ಆಗಮನ ತಡವಾಗಲಿದೆ. ಸಾಮಾನ್ಯವಾಗಿ ಹಿಂಗಾರು ತಮಿಳುನಾಡಿನಲ್ಲಿ ಮೊದಲು ಆರಂಭಗೊಂಡು ಬಳಿಕ ಕರ್ನಾಟಕಾದ್ಯಂತ ಮಳೆ ಬರುತ್ತಿತ್ತು. ಈಬಾರಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಅಷ್ಟಾಗಿ ಬೀಳದ ಕಾರಣ ಹಿಂಗಾರು ಮಳೆ ವಿಪರೀತವಾಗಬಹುದು ಎಂದು ಅಂದಾಜಿಸಲಾಗಿದೆ. ಕಳೆದ 59 ವರ್ಷಗಳಲ್ಲಿ ಮೊದಲ ಬಾರಿಗೆ ಮುಂಗಾರು ಅಕ್ಟೋಬರ್ ವರೆಗೆ ವಿಸ್ತರಣೆಯಾಗಿದೆ.

ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಭರ್ಜರಿ ಮಳೆ
ಅಕ್ಟೋಬರ್ ಅಂತ್ಯದವರೆಗೂ ಮುಂಗಾರು ಮುಂದುವರೆಯಲಿದ್ದು, ಇನ್ನೂ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 1960ರಿಂದ ಪರಿಗಣಿಸಿದರೆ , 2007ರಲ್ಲಿ ಒಮ್ಮೆ ಅಕ್ಟೋಬರ್ 1ಕ್ಕೆ ಮುಂಗಾರು ಕೊನೆಯಾಗಲು ಪ್ರಾರಂಭವಾಗಿದ್ದು, ಇಲ್ಲಿಯವರೆಗಿನ ದಾಖಲೆಯಾಗಿತ್ತು. ಅದಾದ ಬಳಿಕ ವರ್ಷವೇ ಮುಂಗಾರು ಇನ್ನೂ ಮುಕ್ತಾಯವಾಗಿಲ್ಲ. ಕರ್ನಾಟಕ, ಬಿಹಾರ ಸೇರಿ ಹಲವು ಭಾಗಗಳಲ್ಲಿ ಮಳೆ ಮುಂದುವರೆದಿದೆ.
-
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ












Click it and Unblock the Notifications